ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ 
ವಿದೇಶ

ಮಹಿಳಾ ನ್ಯಾಯಾಧೀಶರಿಗೆ ಬೆದರಿಕೆ: ಕ್ಷಮೆಯಾಚಿಸಲು ನ್ಯಾಯಾಲಯಕ್ಕೆ ಬಂದ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್

ಸಾರ್ವಜನಿಕ ರ‍್ಯಾಲಿಯೊಂದರಲ್ಲಿ ಬೆದರಿಕೆಯೊಡ್ಡಿದ್ದ ಮಹಿಳಾ ನ್ಯಾಯಾಧೀಶರಾದ ಝೀಬಾ ಚೌಧರಿ ಅವರಿಗೆ ಖುದ್ದಾಗಿ ಕ್ಷಮೆಯಾಚಿಸಲು ಪಾಕಿಸ್ತಾನದ ಪದಚ್ಯುತ ಪ್ರಧಾನಿ ಇಮ್ರಾನ್ ಖಾನ್ ಶುಕ್ರವಾರ ಇಲ್ಲಿನ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ಇಸ್ಲಾಮಾಬಾದ್: ಸಾರ್ವಜನಿಕ ರ‍್ಯಾಲಿಯೊಂದರಲ್ಲಿ ಬೆದರಿಕೆಯೊಡ್ಡಿದ್ದ ಮಹಿಳಾ ನ್ಯಾಯಾಧೀಶರಾದ ಝೀಬಾ ಚೌಧರಿ ಅವರಿಗೆ ಖುದ್ದಾಗಿ ಕ್ಷಮೆಯಾಚಿಸಲು ಪಾಕಿಸ್ತಾನದ ಪದಚ್ಯುತ ಪ್ರಧಾನಿ ಇಮ್ರಾನ್ ಖಾನ್ ಶುಕ್ರವಾರ ಇಲ್ಲಿನ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ಆ. 20 ರಂದು ಇಸ್ಲಾಮಾಬಾದ್‌ನಲ್ಲಿ ನಡೆದ ರ‍್ಯಾಲಿಯಲ್ಲಿ, ದೇಶದ್ರೋಹದ ಆರೋಪದ ಮೇಲೆ ತನ್ನ ಸಹಾಯಕ ಶಹಬಾಜ್ ಗಿಲ್‌ರನ್ನು ಬಂಧಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ಅವರು, ಈ ಬಗ್ಗೆ ಉನ್ನತ ಪೊಲೀಸ್ ಅಧಿಕಾರಿಗಳು, ಚುನಾವಣಾ ಆಯೋಗ ಮತ್ತು ರಾಜಕೀಯ ವಿರೋಧಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು.

ಕ್ಯಾಪಿಟಲ್ ಟೆರಿಟರಿ ಪೊಲೀಸರ ಕೋರಿಕೆಯ ಮೇರೆಗೆ ಗಿಲ್ ಅವರ ಎರಡು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಝೀಬಾ ಚೌಧರಿ ಅವರ ವಿರುದ್ಧ ವಾಗ್ಧಾಳಿ ನಡೆಸಿದ್ದ ಅವರು, 'ಆಕೆಯ ವಿರುದ್ಧ ಕ್ರಮ ತೆಗೆದುಕೊಳ್ಳುವುದರಿಂದ, ಆಕೆ ಸ್ವತಃ ಸಿದ್ಧರಾಗಿಬೇಕು' ಎಂದು ಹೇಳಿದ್ದರು.

ಭಾಷಣದ ಕೆಲವೇ ಗಂಟೆಗಳ ನಂತರ, 69 ವರ್ಷದ ಇಮ್ರಾನ್ ಖಾನ್ ಅವರ ವಿರುದ್ಧ ಸಾರ್ವಜನಿಕವಾಗಿ ಪೊಲೀಸರು, ನ್ಯಾಯಾಂಗ ಮತ್ತು ಇತರ ರಾಜ್ಯ ಸಂಸ್ಥೆಗಳಿಗೆ ಬೆದರಿಕೆ ಹಾಕಿದ್ದಕ್ಕಾಗಿ ಭಯೋತ್ಪಾದನಾ ನಿಗ್ರಹ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇಸ್ಲಮಾಬಾದ್ ಹೈಕೋರ್ಟ್ ಅವರ ವಿರುದ್ಧ ಸ್ವಯಂಪ್ರೇರಿತ ವಿಚಾರಣೆ ಆರಂಭಿಸಿತ್ತು.

ನ್ಯಾಯಾಧೀಶರಿಗೆ ಬೆದರಿಕೆ ಹಾಕುವ ಉದ್ದೇಶ ಹೊಂದಿರಲಿಲ್ಲ ಮತ್ತು ಖುದ್ದು ಭೇಟಿಯಾಗಿ ಕ್ಷಮೆಯಾಚಿಸಲು ಸಿದ್ಧನಿದ್ದೇನೆ ಎಂದು ಖಾನ್ ನಂತರ ಹೇಳಿದ್ದರು.

ಈಮಧ್ಯೆ, ಖಾನ್ ಅವರು ತನ್ನ ವಕೀಲರೊಂದಿಗೆ ನ್ಯಾಯಾಧೀಶೆ ಚೌಧರಿ ಅವರಿರುವ ನ್ಯಾಯಾಲಯಕ್ಕೆ ಹಾಜರಾದರು. ಆದರೆ, ನ್ಯಾಯಾಧೀಶರು ರಜೆಯಲ್ಲಿರುವುದಾಗಿ ನ್ಯಾಯಾಲಯದ ಗುಮಾಸ್ತರು ಮಾಹಿತಿ ನೀಡಿದರು.

'ನಾನು ನ್ಯಾಯಾಧೀಶರಾದ ಝೀಬಾ ಚೌಧರಿ ಅವರಲ್ಲಿ ಕ್ಷಮೆಯಾಚಿಸಲು ಬಂದಿದ್ದೇನೆ, 'ಮೇಡಂ ಝೀಬಾ ಚೌಧರಿ ಅವರಿಗೆ ನೀವು ಹೇಳಬೇಕು, ಇಮ್ರಾನ್ ಖಾನ್ ಅವರು ಭೇಟಿ ನೀಡಿದ್ದರು ಮತ್ತು ಅವರ ಮಾತುಗಳಿಂದ ನೋವಾಗಿದ್ದರೆ ಕ್ಷಮೆಯಾಚಿಸಲು ಬಯಸುತ್ತೇನೆ' ಎಂದು ಕೋರ್ಟ್ ರೀಡರ್‌ಗೆ ಪಿಟಿಐ ಪಕ್ಷದ ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಹೇಳಲಾಗಿದೆ.

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಖಾನ್ ಅವರ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 3ಕ್ಕೆ ಮುಂದೂಡಲಾಗಿದ್ದು, ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಚೌಧರಿಗೆ ಕ್ಷಮೆಯಾಚಿಸಲು ಸೆಷನ್ಸ್ ನ್ಯಾಯಾಲಯಕ್ಕೆ ಅವರ ಭೇಟಿಯಿಂದ ನ್ಯಾಯಾಲಯವು ತೃಪ್ತವಾಗುತ್ತದೆಯೇ ಎಂಬುದು ಸ್ಪಷ್ಟವಾಗಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT