ಎಸ್.ಜೈಶಂಕರ್ 
ವಿದೇಶ

'ಭಯೋತ್ಪಾದನಾ ದೇಶ' ಪಾಕಿಸ್ತಾನದೊಂದಿಗೆ ಮಾತುಕತೆ ಬಹಳ ಕಷ್ಟ: ವಿದೇಶಾಂಗ ಸಚಿವ ಜೈಶಂಕರ್‌

‘ಭಾರತದ ವಿರುದ್ಧ ಗಡಿಯಾಚೆ ಭಯೋತ್ಪಾದನೆ ಚಟುವಟಿಕೆ ನಡೆಸುತ್ತಿರುವ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸುವುದು ಬಹಳ ಕಷ್ಟ’ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಹೇಳಿದ್ದಾರೆ.

ಪನಾಮಾ ಸಿಟಿ: ‘ಭಾರತದ ವಿರುದ್ಧ ಗಡಿಯಾಚೆ ಭಯೋತ್ಪಾದನೆ ಚಟುವಟಿಕೆ ನಡೆಸುತ್ತಿರುವ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸುವುದು ಬಹಳ ಕಷ್ಟ’ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಹೇಳಿದ್ದಾರೆ.

ಪನಾಮಾದ ವಿದೇಶಾಂಗ ಸಚಿವೆ ಜನೈನ ತೆವಾನೇ ಮೆನ್ಕೋಮೋ ಅವರೊಡನೆ ಸೋಮವಾರ ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜೈ ಶಂಕರ್, 'ಭಯೋತ್ಪಾದನೆ ಚಟುವಟಿಕೆ ನಡೆಸುತ್ತಿರುವ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸುವುದು ಬಹಳ ಕಷ್ಟ. ಗಡಿಯಾಚೆಗಿನ ಭಯೋತ್ಪಾದನೆ ಚಟುವಟಿಕೆಯನ್ನು ಪ್ರೋತ್ಸಾಹಿಸುವುದು, ಪ್ರಾಯೋಜಿಸುವುದು ಮತ್ತು ನಡೆಸುವುದನ್ನು ಅವರು ನಿಲ್ಲಿಸಬೇಕೆಂದು ನಾವು ಯಾವಾಗಲೂ ಹೇಳುತ್ತೇವೆ. ಮುಂದೊಂದು ದಿನ ಪಾಕಿಸ್ತಾನವು ಇಂಥ ಚಟುವಟಿಕೆಗಳನ್ನು ನಿಲ್ಲಿಸುತ್ತದೆ ಎಂದು ನಾವು ಆಶಿಸುತ್ತೇವೆ ಎಂದು ಹೇಳಿದರು.

ಅಂತೆಯೇ ಪಾಕಿಸ್ತಾನದೊಂದಿಗೆ ನಾವು ಉತ್ತಮ ನೆರೆಯ ಸಂಬಂಧ ಬಯಸುತ್ತೇವೆ. ಆದರೆ ಭಯೋತ್ಪಾದನೆ ಮತ್ತು ಹಗೆತನ ಮುಕ್ತ ವಾತಾವರಣವನ್ನು ಸೃಷ್ಟಿಸುವ ಜವಾಬ್ದಾರಿ ಪಾಕಿಸ್ತಾನದ್ದಾಗಿದೆ ಎಂದು ಭಾರತ ಯಾವಾಗಲೂ ಹೇಳುತ್ತಾ ಬಂದಿದೆ.  ನಾವಿಬ್ಬರೂ (ಭಾರತ ಮತ್ತು ಪಾಕಿಸ್ತಾನ) ಎಸ್‌ಸಿಒದ ಸದಸ್ಯ ರಾಷ್ಟ್ರಗಳು. ಆದ್ದರಿಂದ ಸಭೆಗಳಿಗೆ ನಾವು ಸಾಮಾನ್ಯವಾಗಿ ಹಾಜರಾಗುತ್ತೇವೆ. ಈ ಬಾರಿಯ ಎಸ್‌ಸಿಒದ ಅಧ್ಯಕ್ಷತೆ ನಮಗೆ ಸಿಕ್ಕಿದೆ. ಆದ್ದರಿಂದ ಈ ಶೃಂಗಸಭೆ ಭಾರತದಲ್ಲಿ ನಡೆಯುತ್ತಿದೆ ಎಂದರು.
 
ಮೇ ತಿಂಗಳಲ್ಲಿ ಗೋವಾದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) ಶೃಂಗಸಭೆಯಲ್ಲಿ ಭಾಗವಹಿಸಲು ತಮ್ಮ ವಿದೇಶಾಂಗ ಸಚಿವ ಬಿಲಾವಲ್‌ ಭುಟ್ಟೊ ಜರ್ದಾರಿ ಅವರು ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಪಾಕಿಸ್ತಾನ ಖಚಿತಪಡಿಸಿದ ಬೆನ್ನಲ್ಲೇ ಜೈಶಂಕರ್‌ ಅವರು ಈ ಹೇಳಿಕೆ ನೀಡಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT