ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ 
ವಿದೇಶ

ಯುದ್ಧ ಆಯ್ಕೆಯಲ್ಲ, ಭಾರತದೊಂದಿಗೆ ಮಾತುಕತೆಗೆ ಸಿದ್ಧ: ಪಾಕ್ ಪ್ರಧಾನಿ ಶೆಹಬಾಜ್ ಷರೀಫ್

ಭಾರತದೊಂದಿಗೆ ಮಾತುಕತೆ ನಡೆಸಲು ಸಿದ್ಧರಿರುವುದಾಗಿ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರು ಮಂಗಳವಾರ ಹೇಳಿದ್ದಾರೆ.

ಇಸ್ಲಾಮಾಬಾದ್‌: ಭಾರತದೊಂದಿಗೆ ಮಾತುಕತೆ ನಡೆಸಲು ಸಿದ್ಧರಿರುವುದಾಗಿ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರು ಮಂಗಳವಾರ ಹೇಳಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ಎರಡೂ ರಾಷ್ಟ್ರಗಳು ಬಡತನ ಹಾಗೂ ನಿರುದ್ಯೋಗದ ವಿರುದ್ಧ ಹೋರಾಡುತ್ತಿದ್ದು, ಉಭಯ ದೇಶಗಳ ಆಯ್ಕೆ ಯುದ್ಧ ಅಲ್ಲ. ಭಾರತವು ಗಂಭೀರವಾಗಿ ಪರಿಗಣಿಸುವುದಾದರೆ ಪಾಕಿಸ್ತಾನ ಮಾತುಕತೆ ಸಿದ್ಧವಾಗಿದೆ ಎಂದು ಶೆಹಬಾಜ್ ಷರೀಫ್ ಅವರು ಹೇಳಿದ್ದಾರೆ.

ಇಸ್ಲಾಮಾಬಾದ್‌ನಲ್ಲಿ ನಡೆದ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪಾಕ್ ಪ್ರಧಾನಿ, ಪರಮಾಣು ಶಕ್ತಿಯಾಗಿದ್ದರೂ, ಪಾಕಿಸ್ತಾನ ಆಕ್ರಮಣಕಾರಿ ಅಲ್ಲ ಮತ್ತು ರಕ್ಷಣಾ ಉದ್ದೇಶಗಳಿಗಾಗಿ ಮಾತ್ರ ಪರಮಾಣು ಸೌಲಭ್ಯಗಳನ್ನು ಹೊಂದಿದೆ ಎಂದು ತಿಳಿಸಿದ್ದಾರೆ.

ಕಳೆದ 75 ವರ್ಷಗಳಲ್ಲಿ ಉಭಯ ದೇಶಗಳು ಮೂರು ಯುದ್ಧಗಳನ್ನು ನಡೆಸಿವೆ. ಇದರಿಂದ ಪಾಕಿಸ್ತಾನಕ್ಕೆ ನಷ್ಟ ಅನುಭವಿಸಿತು ಎಂದು ಷರೀಫ್, ಇಲ್ಲದಿದ್ದರೆ ಆ ಹಣವನ್ನು ಅಭಿವೃದ್ಧಿ ಮತ್ತು ಜನರ ಏಳಿಗೆಗಾಗಿ ಖರ್ಚು ಮಾಡಬಹುದಾಗಿತ್ತು ಎಂದಿದ್ದಾರೆ.

"ನಮ್ಮ ನಡುವಿನ ಭಿನ್ನಾಭಿಪ್ರಾಯಗಳು ಬಗೆಹರಿಯುವವರೆಗೆ ಸಂಬಂಧಗಳು ಸರಿಹೋಗುವುದಿಲ್ಲ. ಇದಕ್ಕಾಗಿ ಅರ್ಥಗರ್ಭಿತ ಮಾತುಕತೆ ನಡೆಯಬೇಕು. ಇದನ್ನು ನಮ್ಮ ನೆರೆಯವರು ಅರ್ಥಮಾಡಿಕೊಳ್ಳಬೇಕು" ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!