ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ 
ವಿದೇಶ

ಯುದ್ಧ ಆಯ್ಕೆಯಲ್ಲ, ಭಾರತದೊಂದಿಗೆ ಮಾತುಕತೆಗೆ ಸಿದ್ಧ: ಪಾಕ್ ಪ್ರಧಾನಿ ಶೆಹಬಾಜ್ ಷರೀಫ್

ಭಾರತದೊಂದಿಗೆ ಮಾತುಕತೆ ನಡೆಸಲು ಸಿದ್ಧರಿರುವುದಾಗಿ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರು ಮಂಗಳವಾರ ಹೇಳಿದ್ದಾರೆ.

ಇಸ್ಲಾಮಾಬಾದ್‌: ಭಾರತದೊಂದಿಗೆ ಮಾತುಕತೆ ನಡೆಸಲು ಸಿದ್ಧರಿರುವುದಾಗಿ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರು ಮಂಗಳವಾರ ಹೇಳಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ಎರಡೂ ರಾಷ್ಟ್ರಗಳು ಬಡತನ ಹಾಗೂ ನಿರುದ್ಯೋಗದ ವಿರುದ್ಧ ಹೋರಾಡುತ್ತಿದ್ದು, ಉಭಯ ದೇಶಗಳ ಆಯ್ಕೆ ಯುದ್ಧ ಅಲ್ಲ. ಭಾರತವು ಗಂಭೀರವಾಗಿ ಪರಿಗಣಿಸುವುದಾದರೆ ಪಾಕಿಸ್ತಾನ ಮಾತುಕತೆ ಸಿದ್ಧವಾಗಿದೆ ಎಂದು ಶೆಹಬಾಜ್ ಷರೀಫ್ ಅವರು ಹೇಳಿದ್ದಾರೆ.

ಇಸ್ಲಾಮಾಬಾದ್‌ನಲ್ಲಿ ನಡೆದ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪಾಕ್ ಪ್ರಧಾನಿ, ಪರಮಾಣು ಶಕ್ತಿಯಾಗಿದ್ದರೂ, ಪಾಕಿಸ್ತಾನ ಆಕ್ರಮಣಕಾರಿ ಅಲ್ಲ ಮತ್ತು ರಕ್ಷಣಾ ಉದ್ದೇಶಗಳಿಗಾಗಿ ಮಾತ್ರ ಪರಮಾಣು ಸೌಲಭ್ಯಗಳನ್ನು ಹೊಂದಿದೆ ಎಂದು ತಿಳಿಸಿದ್ದಾರೆ.

ಕಳೆದ 75 ವರ್ಷಗಳಲ್ಲಿ ಉಭಯ ದೇಶಗಳು ಮೂರು ಯುದ್ಧಗಳನ್ನು ನಡೆಸಿವೆ. ಇದರಿಂದ ಪಾಕಿಸ್ತಾನಕ್ಕೆ ನಷ್ಟ ಅನುಭವಿಸಿತು ಎಂದು ಷರೀಫ್, ಇಲ್ಲದಿದ್ದರೆ ಆ ಹಣವನ್ನು ಅಭಿವೃದ್ಧಿ ಮತ್ತು ಜನರ ಏಳಿಗೆಗಾಗಿ ಖರ್ಚು ಮಾಡಬಹುದಾಗಿತ್ತು ಎಂದಿದ್ದಾರೆ.

"ನಮ್ಮ ನಡುವಿನ ಭಿನ್ನಾಭಿಪ್ರಾಯಗಳು ಬಗೆಹರಿಯುವವರೆಗೆ ಸಂಬಂಧಗಳು ಸರಿಹೋಗುವುದಿಲ್ಲ. ಇದಕ್ಕಾಗಿ ಅರ್ಥಗರ್ಭಿತ ಮಾತುಕತೆ ನಡೆಯಬೇಕು. ಇದನ್ನು ನಮ್ಮ ನೆರೆಯವರು ಅರ್ಥಮಾಡಿಕೊಳ್ಳಬೇಕು" ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT