ಶೆಹಬಾಜ್‌ ಷರೀಫ್‌ 
ವಿದೇಶ

ಆಗಸ್ಟ್‌ 9 ರಂದು ಪಾಕಿಸ್ತಾನ ಸಂಸತ್‌ ವಿಸರ್ಜನೆ: ಪ್ರಧಾನಿ ಶೆಹಬಾಜ್‌ ಷರೀಫ್ ಘೋಷಣೆ

ಆಗಸ್ಟ್‌ 9 ರಂದು ಸಂಸತ್‌ ವಿಸರ್ಜನೆ ಮಾಡುವುದಾಗಿ ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌ ಹೇಳಿದ್ದಾರೆ. ಸಂಸತ್ತಿನ ಕೆಳಮನೆಯ ಅವಧಿ ಮುಕ್ತಾಯಕ್ಕೆ ಇನ್ನೂ ಮೂರು ವರ್ಷ ಇದ್ದು ಅದಕ್ಕೂ ಮುನ್ನ ವಿಸರ್ಜನೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ಇಸ್ಲಾಮಾಬಾದ್‌: ಆಗಸ್ಟ್‌ 9 ರಂದು ಸಂಸತ್‌ ವಿಸರ್ಜನೆ ಮಾಡುವುದಾಗಿ ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌ ಹೇಳಿದ್ದಾರೆ. ಸಂಸತ್ತಿನ ಕೆಳಮನೆಯ ಅವಧಿ ಮುಕ್ತಾಯಕ್ಕೆ ಇನ್ನೂ ಮೂರು ವರ್ಷ ಇದ್ದು ಅದಕ್ಕೂ ಮುನ್ನ ವಿಸರ್ಜನೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ವಿಸರ್ಜನೆ ಮಾಡಿದ 90 ದಿನದೊಳಗೆ ಚುನಾವಣೆ ನಡೆಯಲಿದೆ. ಪ್ರಧಾನ ಮಂತ್ರಿಗಳ ನಿವಾಸದಲ್ಲಿ ಸರ್ಕಾರದ ಭಾ‌ಗವಾಗಿರುವ ಮಿತ್ರಪಕ್ಷಗಳಿಗೆ ಆಯೋಜಿಸಿದ್ದ ಭೋಜನ ಕೂಟದಲ್ಲಿ ಶೆಹಬಾಜ್‌ ಈ ಘೋಷಣೆ ಮಾಡಿದ್ದಾರೆ ಎಂದು ‘ಡಾನ್‌’ ಪತ್ರಿಕೆ ವರದಿ ಮಾಡಿದೆ.

ಸಂಸತ್‌ ವಿಸರ್ಜನೆ ಮಾಡುವ ಬಗ್ಗೆ ಪ್ರಧಾನ ಮಂತ್ರಿಗಳು ಅಧ್ಯಕ್ಷ ಆರೀಫ್ ಅಲವಿ ಅವರಿಗೆ ಆಗಸ್ಟ್‌ 9ರಂದು ಅಧಿಸೂಚನೆ ಕಳುಹಿಸಲಿದ್ದಾರೆ ಎಂದು ‘ದಿ ಎಕ್ಸ್‌ಪ್ರೆಸ್‌ ಟಿಬ್ಯುನ್‌’ ವರದಿ ಮಾಡಿದೆ. ಸಂವಿಧಾನದ ಪ್ರಕಾರ ಪ್ರಧಾನಿಗಳು ಕಳುಹಿಸಿದ ಅಧಿಸೂಚನೆಗೆ ರಾಷ್ಟ್ರಪತಿಗಳ ಮುದ್ರೆ ಬಿದ್ದ ಕೂಡಲೇ ಸಂಸತ್‌ ವಿಸರ್ಜನೆಯಾಗಲಿದೆ. ಪಾಕಿಸ್ತಾನದ ಸಂವಿಧಾನದ ಪ್ರಕಾರ, ಒಂದು ವೇಳೆ ಸರ್ಕಾರ ಅವಧಿ ಪೂರೈಸಿದರೆ 60 ದಿನಗಳಲ್ಲಿ ಚುನಾವಣೆ ನಡೆಸಬೇಕು. ಅವಧಿಗೂ ಮುನ್ನ ವಿಸರ್ಜನೆ ಮಾಡಿದರೆ 90 ದಿನಗಳ ಕಾಲಾವಕಾಶ ಇರಲಿದೆ.

ಆಗಸ್ಟ್ 9 ರಂದು, ಪ್ರಧಾನ ಮಂತ್ರಿ ಶೆಹಬಾಜ್ ಷರೀಫ್ ಅವರು ರಾಷ್ಟ್ರೀಯ ಅಸೆಂಬ್ಲಿಯ ವಿಸರ್ಜನೆಗೆ ರಾಷ್ಟ್ರಪತಿಗಳಿಗೆ ಔಪಚಾರಿಕ ಸಲಹೆ ಕಳುಹಿಸುತ್ತಾರೆ. ಸಾಂವಿಧಾನಿಕ ನಿಬಂಧನೆಗಳ ಪ್ರಕಾರ, ವಿಸರ್ಜನೆಯನ್ನು ಜಾರಿಗೆ ತರಲು ಅಧ್ಯಕ್ಷರು 48 ಗಂಟೆಗಳ ಒಳಗೆ ಸಲಹೆಗೆ ಸಹಿ ಹಾಕಬೇಕು. ಯಾವುದೇ ಕಾರಣಕ್ಕೂ ರಾಷ್ಟ್ರಪತಿಗಳು ಸಲಹೆಗೆ ಸಹಿ ಹಾಕದಿದ್ದರೆ, ವಿಧಾನಸಭೆಯನ್ನು ಸ್ವಯಂಚಾಲಿತವಾಗಿ ವಿಸರ್ಜನೆ ಮಾಡಲಾಗುತ್ತದೆ ಎಂದು ಎಕ್ಸ್ ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT