ಸಾವನ್ನಪ್ಪಿದ್ದ ಪೈಲಟ್ 
ವಿದೇಶ

ವಿಮಾನದ ಟಾಯ್ಲೆಟ್​ನಲ್ಲಿ ಕುಸಿದು ಬಿದ್ದು ಪೈಲಟ್ ಸಾವು: 271 ಪ್ರಯಾಣಿಕರಿದ್ದ ವಿಮಾನ ತುರ್ತು ಭೂಸ್ಪರ್ಶ

ಮಿಯಾಮಿಯಿಂದ ಚಿಲಿಗೆ ಹೊರಟಿದ್ದ ವಿಮಾನದ ಟಾಯ್ಲೆಟ್​ನಲ್ಲಿ ಪೈಲಟ್​ ಮೃತಪಟ್ಟಿದ್ದು ತಕ್ಷಣವೇ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು. 271 ಪ್ರಯಾಣಿಕರೊಂದಿಗೆ ಮಿಯಾಮಿಯಿಂದ ಚಿಲಿಗೆ ಹೊರಟಿತ್ತು.

ಮಿಯಾಮಿ: 271 ಪ್ರಯಾಣಿಕರನ್ನು ಹೊತ್ತ ವಿಮಾನದ ಪೈಲಟ್ ಇದ್ದಕ್ಕಿದ್ದಂತೆ ಸಾವಿಗೀಡಾದ ಘಟನೆ ಭಾನುವಾರ ರಾತ್ರಿ ಅಮೆರಿಕದಲ್ಲಿ ನಡೆದಿದೆ.

ಮಿಯಾಮಿಯಿಂದ ಚಿಲಿಗೆ ಹೊರಟಿದ್ದ ವಿಮಾನದ ಟಾಯ್ಲೆಟ್​ನಲ್ಲಿ ಪೈಲಟ್​ ಮೃತಪಟ್ಟಿದ್ದು ತಕ್ಷಣವೇ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು. 271 ಪ್ರಯಾಣಿಕರೊಂದಿಗೆ ಮಿಯಾಮಿಯಿಂದ ಚಿಲಿಗೆ ಹೊರಟಿತ್ತು.

ಮಿಯಾಮಿಯಿಂದ ಚಿಲಿಗೆ ತೆರಳುತ್ತಿದ್ದ ವಾಣಿಜ್ಯ ವಿಮಾನ ಲಾಟಾಮ್ ಏರ್‌ಲೈನ್ಸ್‌ನ ಕಮಾಂಡರ್ ಇವಾನ್ ಆಂಡೌರ್ (56) ಅವರು ಬಾತ್‌ರೂಂನಲ್ಲಿ ಹಠಾತ್ತನೆ ಕುಸಿದು ಬಿದ್ದಿದ್ದರು. ರಾತ್ರಿ 11 ಗಂಟೆ ಸುಮಾರಿಗೆ ಅವರಿಗೆ ಹೃದಯ ಸ್ತಂಭನ ಉಂಟಾಗಿದೆ. ಕೂಡಲೇ ಸಮಯ ಸ್ಫೂರ್ತಿ ಮೆರೆದ ಸಹ ಪೈಲಟ್‌ಗಳು ಪನಾಮಾದಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿದ್ದಾರೆ.

ವಿಮಾನದ ಪ್ರಯಾಣಿಕರ ನಡುವೆ ಇದ್ದ ಒಬ್ಬ ನರ್ಸ್ ಹಾಗೂ ಇಬ್ಬರು ವೈದ್ಯರು, ವಿಮಾನ ಲ್ಯಾಂಡ್ ಆಗುತ್ತಿದ್ದಂತೆಯೇ ಪೈಲಟ್ ನೆರವಿಗೆ ಧಾವಿಸಿದ್ದಾರೆ. ಅವರ ಪ್ರಯತ್ನಗಳ ನಡುವೆಯೂ ಪೈಲಟ್ ಜೀವ ಉಳಿಸುವುದು ಸಾಧ್ಯವಾಗಿಲ್ಲ. ಪನಾಮಾ ನಗರದಲ್ಲಿ ವಿಮಾನ ಇಳಿದ ಬಳಿಕ ಪೈಲಟ್ ಇವಾನ್ ಅವರ ನಿಧನವನ್ನು ಪ್ರಕಟಿಸಲಾಯಿತು.

ದುರಂತದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಲಾಟಾಮ್ ಏರ್‌ಲೈನ್ಸ್, ವಿಮಾನ ಹಾರಾಟದ ವೇಳೆ ಜೀವಗಳನ್ನು ಉಳಿಸುವ ಗುರಿಯೊಂದಿಗೆ ಇರುವ ಶಿಷ್ಟಾಚಾರಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಲ್ಯಾಂಡಿಂಗ್ ವೇಳೆ ಸೂಕ್ತ ವೈದ್ಯಕೀಯ ಗಮನ ಹರಿಸಿದರೂ ಇವಾನ್ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗದ್ದು ಖೇದಕರ ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!