ವಾಟರ್‌ಕ್ಲೂಫ್ ಏರ್ ಫೋರ್ಸ್ ಬೇಸ್‌ನಲ್ಲಿ ಪ್ರಧಾನಿ ಮೋದಿಗೆ ಸ್ವಾಗತ 
ವಿದೇಶ

15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದಕ್ಷಿಣ ಆಫ್ರಿಕಾಕ್ಕೆ ಆಗಮಿಸಿದ ಪ್ರಧಾನಿ ಮೋದಿ

15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಮಂಗಳವಾರ ದಕ್ಷಿಣ ಆಫ್ರಿಕಾಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.

ಜೋಹಾನ್ಸ್‌ಬರ್ಗ್: 15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಮಂಗಳವಾರ ದಕ್ಷಿಣ ಆಫ್ರಿಕಾಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.

ವಾಟರ್‌ಕ್ಲೂಫ್ ಏರ್ ಫೋರ್ಸ್ ಬೇಸ್‌ನಲ್ಲಿ ಪ್ರಧಾನಿ ಮೋದಿ ಅವರನ್ನು ದಕ್ಷಿಣ ಆಫ್ರಿಕಾದ ಉಪಾಧ್ಯಕ್ಷ ಪೌಲ್ ಮಶಾತಿಲೆ ಅವರು ಸ್ವಾಗತಿಸಿದರು.

"ದಕ್ಷಿಣ ಆಫ್ರಿಕಾದ ವಾಟರ್‌ಕ್ಲೋಫ್ ಏರ್ ಫೋರ್ಸ್ ಬೇಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಲ್ಯಾಂಡ್ ಆಗಿದ್ದಾರೆ. ದಕ್ಷಿಣ ಆಫ್ರಿಕಾದ ಉಪಾಧ್ಯಕ್ಷ ಮಶಾತಿಲೆ ಅವರು ಆತ್ಮೀಯವಾಗಿ ಬರಮಾಡಿಕೊಂಡರು" ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಆಗಸ್ಟ್ 22 ರಿಂದ 24ರ ವರೆಗೆ ಜೋಹಾನ್ಸ್‌ಬರ್ಗ್ ನಲ್ಲಿ ದಕ್ಷಿಣ ಆಫ್ರಿಕಾದ ಅಧ್ಯಕ್ಷತೆಯಲ್ಲಿ ನಡೆಯಲಿರುವ 15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ ಮತ್ತು ಈ ವೇಳೆ ಹಲವು ವಿಶ್ವ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ.

ಬ್ರಿಕ್ಸ್​ ಶೃಂಗದಲ್ಲಿ ಪಾಲ್ಗೊಳ್ಳುವುದಕ್ಕಾಗಿಯೇ ಪ್ರಧಾನಿ ಇಂದಿನಿಂದ ಮೂರು ದಿನಗಳ ಕಾಲ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದ್ದಾರೆ. ಇದರೊಂದಿಗೆ ಮೋದಿ ಅವರು, ಆಫ್ರಿಕಾಕ್ಕೆ ಮೂರನೇ ಬಾರಿ ಭೇಟಿ ನೀಡಿದಂತಾಗಿದೆ.

ಈ ಪ್ರವಾಸವು ಭಾರತ ಮತ್ತು ದಕ್ಷಿಣ ಆಫ್ರಿಕಾ ರಾಷ್ಟ್ರಗಳ ನಡುವಣ ರಾಜತಾಂತ್ರಿಕ ಸಂಬಂಧಗಳ 30ನೇ ವಾರ್ಷಿಕೋತ್ಸವದ ಪ್ರತೀಕವಾಗಿದೆ ಎಂದು ಬಣ್ಣಿಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT