ಇಮ್ರಾನ್ ಖಾನ್ 
ವಿದೇಶ

ಶಿಕ್ಷೆ ಅಮಾನತ್ತಾದರೂ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ: ಕಾನೂನು ತಜ್ಞರು

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಕಾನೂನು ತಂಡವು ತೋಷಖಾನಾ ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಕಾರಣವಾದ ಆಗಸ್ಟ್ 5ರ ತೀರ್ಪನ್ನು ಅಮಾನತುಗೊಳಿಸುವಂತೆ ವಿನಂತಿಸದೆ ಮಹತ್ವದ ತಪ್ಪು ಮಾಡಿದೆ.

ಇಸ್ಲಾಮಾಬಾದ್: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಕಾನೂನು ತಂಡವು ತೋಷಖಾನಾ ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಕಾರಣವಾದ ಆಗಸ್ಟ್ 5ರ ತೀರ್ಪನ್ನು ಅಮಾನತುಗೊಳಿಸುವಂತೆ ವಿನಂತಿಸದೆ ಮಹತ್ವದ ತಪ್ಪು ಮಾಡಿದೆ. ಉನ್ನತ ನ್ಯಾಯಾಲಯವು ಮೂರು ವರ್ಷಗಳ ಶಿಕ್ಷೆಯನ್ನು ಅಮಾನತುಗೊಳಿಸಿದ್ದರೂ ಪಾಕಿಸ್ತಾನದ ಮಾಜಿ ಪ್ರಧಾನಿ ಜೈಲಿನಲ್ಲೇ ಉಳಿದಿದ್ದಾರೆ ಎಂದು ಪ್ರಮುಖ ವಕೀಲರು ಹೇಳಿದ್ದಾರೆ.

ಇಸ್ಲಾಮಾಬಾದ್ ಹೈಕೋರ್ಟ್‌ನ ಆದೇಶದ ಹೊರತಾಗಿಯೂ, ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ 70 ವರ್ಷ ವಯಸ್ಸಿನ ಅಧ್ಯಕ್ಷರು ಅಟಾಕ್ ಜೈಲಿನಲ್ಲಿಯೇ ಉಳಿದಿದ್ದು ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ. ಏಕೆಂದರೆ ತೋಷಖಾನಾ ಭ್ರಷ್ಟಾಚಾರ ಪ್ರಕರಣದಲ್ಲಿ ಅವರ ಶಿಕ್ಷೆ ಮತ್ತು ಅನರ್ಹತೆ ಹಾಗೇ ಉಳಿದಿದೆ ಎಂದು ಕಾನೂನು ತಜ್ಞರ ಹೇಳಿದ್ದಾರೆ.

ವಿಚಾರಣಾ ನ್ಯಾಯಾಲಯದ ಆಗಸ್ಟ್ 5ರ ತೀರ್ಪನ್ನು ಅಮಾನತುಗೊಳಿಸುವಂತೆ ವಿನಂತಿಸದೆ ಇಮ್ರಾನ್ ಖಾನ್ ಅವರ ಕಾನೂನು ತಂಡವು ಗಮನಾರ್ಹ ತಪ್ಪು ಮಾಡಿದೆ. ಕಾನೂನು ತಂಡ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಮತ್ತು ಜಾಮೀನಿನ ಮೇಲೆ ಬಿಡುಗಡೆ ಮಾಡಲು ಮಾತ್ರ ವಿನಂತಿಸಿದ್ದಾರೆ ಎಂದು ವಕೀಲ ಫೈಸಲ್ ಸಿದ್ದಿಕಿ ಪ್ರತಿಕ್ರಿಯಿಸಿದ್ದಾರೆ.

ವಿಚಾರಣಾ ನ್ಯಾಯಾಲಯದ ತೀರ್ಪನ್ನು ಅಮಾನತುಗೊಳಿಸುವಂತೆ ಮನವಿ ಮಾಡಿದ್ದರೆ, ಇಸ್ಲಾಮಾಬಾದ್ ಹೈಕೋರ್ಟ್ ಪ್ರಕರಣದ ಅರ್ಹತೆಗಳ ಬಗ್ಗೆ ವ್ಯಾಪಕವಾಗಿ ಚರ್ಚಿಸುತ್ತಿತ್ತು. ವಿಚಾರಣಾ ನ್ಯಾಯಾಲಯದ ತೀರ್ಪನ್ನು ಅಮಾನತುಗೊಳಿಸಿದ್ದರೆ, ಇಮ್ರಾನ್ ಖಾನ್ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಬಹುದಿತ್ತು ಎಂದು ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ಪತ್ರಿಕೆಯು ಸಿದ್ದಿಕಿ ಹೇಳಿಕೆಯನ್ನು ಉಲ್ಲೇಖಿಸಿದೆ.

ಇಸ್ಲಾಮಾಬಾದ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಮೀರ್ ಫಾರೂಕ್ ಮತ್ತು ನ್ಯಾಯಮೂರ್ತಿ ತಾರಿಕ್ ಮೆಹಮೂದ್ ಜಹಾಂಗಿರಿ ಅವರನ್ನೊಳಗೊಂಡ ವಿಭಾಗೀಯ ಪೀಠವು ಬುಧವಾರ ಖಾನ್ ಅವರ ಶಿಕ್ಷೆಯನ್ನು ಅಮಾನತುಗೊಳಿಸಿ, ಪಂಜಾಬ್ ಪ್ರಾಂತ್ಯದ ಜೈಲಿನಿಂದ ಅವರನ್ನು ಬಿಡುಗಡೆ ಮಾಡಲು ಆದೇಶಿಸಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ