ದುಬೈ ನಲ್ಲಿ ನಡೆದ ಸಿಒಪಿ28 ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ 
ವಿದೇಶ

ಭಾರತದಿಂದ ಜಾಗತಿಕ ಇಂಗಾಲದ ಹೊರಸೂಸುವಿಕೆ ಶೇ.4ಕ್ಕಿಂತ ಕಡಿಮೆ: ಗ್ರೀನ್ ಕ್ರೆಡಿಟ್ ಉಪಕ್ರಮ ಘೋಷಿಸಿದ ಪ್ರಧಾನಿ ಮೋದಿ

ಜಾಗತಿಕ ಇಂಗಾಲದ ಹೊರಸೂಸುವಿಕೆಯನ್ನು ಗಣನೀಯ ಪ್ರಮಾಣದಲ್ಲಿ ಕಡಿಮೆ ಮಾಡುವುದರತ್ತ ಕಾರ್ಯನಿರ್ವಹಿಸಲು ಪ್ರಧಾನಿ ನರೇಂದ್ರ ಮೋದಿ ಎಲ್ಲಾ ದೇಶಗಳಿಗೂ ಕರೆ ನೀಡಿದ್ದಾರೆ.

ದುಬೈ: ಜಾಗತಿಕ ಇಂಗಾಲದ ಹೊರಸೂಸುವಿಕೆಯನ್ನು ಗಣನೀಯ ಪ್ರಮಾಣದಲ್ಲಿ ಕಡಿಮೆ ಮಾಡುವುದರತ್ತ ಕಾರ್ಯನಿರ್ವಹಿಸಲು ಪ್ರಧಾನಿ ನರೇಂದ್ರ ಮೋದಿ ಎಲ್ಲಾ ದೇಶಗಳಿಗೂ ಕರೆ ನೀಡಿದ್ದಾರೆ.

ದುಬೈ ನಲ್ಲಿ ನಡೆದ ಸಿಒಪಿ28 ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಡಿಮೆ ಜನಸಂಖ್ಯೆಯನ್ನು ಹೊಂದಿರುವ ದೇಶಗಳಿಗೆ ಹೋಲಿಕೆ ಮಾಡಿದರೆ ಜಗತ್ತಿನ ಶೇ.17 ರಷ್ಟು ಜನಸಂಖ್ಯೆ ಹೊಂದಿರುವ ಭಾರತ ಜಾಗತಿಕ ಇಂಗಾಲದ ಹೊರಸೂಸುವಿಕೆಗೆ ಶೇ.4ಕ್ಕಿಂತ ಕಡಿಮೆ ಕೊಡುಗೆ ನೀಡುತ್ತಿದೆ. ಭಾರತ ಎನ್ ಡಿಸಿ ಟಾರ್ಗೆಟ್ ಗಳನ್ನು ಸಾಧಿಸುವಲ್ಲಿ ವೇಗವಾಗಿ ಸಾಗುತ್ತಿದೆ ಎಂದರು.

2028 ರಲ್ಲಿ ಭಾರತ ಸಿಒಪಿ33 ಆತಿಥ್ಯ ವಹಿಸಲು ಬಯಸುತ್ತದೆ ಎಂದು ಅವರು ಹೇಳಿದ್ದಾರೆ. ನಾವು ಪಳೆಯುಳಿಕೆಯಲ್ಲದ ಇಂಧನಕ್ಕೆ ಸಂಬಂಧಿಸಿದ ಗುರಿಗಳನ್ನು ಗಡುವಿನ 9 ವರ್ಷಗಳ ಮೊದಲೇ ತಲುಪಿದ್ದೇವೆ. 

ಜಾಗತಿಕ ತಾಪಮಾನ ಏರಿಕೆಯನ್ನು 1.5 ಡಿಗ್ರಿ ಸೆಲ್ಸಿಯಸ್‌ಗೆ ಸೀಮಿತಗೊಳಿಸುವ ರಾಷ್ಟ್ರೀಯ ಯೋಜನೆಗಳು ಅಥವಾ ಹವಾಮಾನ ಬದಲಾವಣೆಯ ಪರಿಣಾಮಗಳನ್ನು ತಪ್ಪಿಸಲು ರಾಷ್ಟ್ರೀಯವಾಗಿ ನಿರ್ಧರಿಸಿದ ಕೊಡುಗೆಗಳನ್ನು ಸಾಧಿಸುವ ಹಾದಿಯಲ್ಲಿರುವ ವಿಶ್ವದ ಕೆಲವೇ ದೇಶಗಳಲ್ಲಿ ಭಾರತವೂ ಒಂದಾಗಿದೆ. ಇದೇ  ವೇಳೆ ಪ್ರಧಾನಿ ಮೋದಿ ಜನರ ಸಹಭಾಗಿತ್ವದ ಮೂಲಕ, ವಾತಾವರಣದಲ್ಲಿ ಇಂಗಾಲವನ್ನು ಹೀರಿಕೊಳ್ಳುವ ಕಾರ್ಬನ್ ಸಿಂಕ್ ಗಳನ್ನು ಸೃಷ್ಟಿಸುವುದರತ್ತ ಗಮನ ಹರಿಸಲು ಗ್ರೀನ್ ಕ್ರೆಡಿಟ್ ಉಪಕ್ರಮವನ್ನು ಘೋಷಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT