ಇರಾನ್ ನಲ್ಲಿ ಭಾರತೀಯರು 
ವಿದೇಶ

ಇನ್ನು ಮುಂದೆ ಇರಾನ್ ಗೆ ಹೋಗಲು ಭಾರತೀಯರಿಗೆ ವೀಸಾ ಅವಶ್ಯಕತೆ ಇಲ್ಲ!

ಇನ್ನು ಮುಂದೆ ಇರಾನ್ ಗೆ ಹೋಗಲು ಭಾರತೀಯರಿಗೆ ವೀಸಾ ಅವಶ್ಯಕತೆ ಇಲ್ಲ.. ಭಾರತೀಯ ನಾಗರಿಕರು ಸೇರಿದಂತೆ 32 ಇತರ ರಾಷ್ಟ್ರಗಳಿಗೆ ವೀಸಾ ಕಡ್ಡಾಯ ನೀತಿಯನ್ನು ಇರಾನ್ ಸರ್ಕಾರ ಮನ್ನಾ ಮಾಡಿದೆ.

ಟೆಹರಾನ್: ಇನ್ನು ಮುಂದೆ ಇರಾನ್ ಗೆ ಹೋಗಲು ಭಾರತೀಯರಿಗೆ ವೀಸಾ ಅವಶ್ಯಕತೆ ಇಲ್ಲ.. ಭಾರತೀಯ ನಾಗರಿಕರು ಸೇರಿದಂತೆ 32 ಇತರ ರಾಷ್ಟ್ರಗಳಿಗೆ ವೀಸಾ ಕಡ್ಡಾಯ ನೀತಿಯನ್ನು ಇರಾನ್ ಸರ್ಕಾರ ಮನ್ನಾ ಮಾಡಿದೆ.

ಈ ಬಗ್ಗೆ ಸ್ವತಃ ಇರಾನ್‌ನ ಸಾಂಸ್ಕೃತಿಕ ಪರಂಪರೆ, ಪ್ರವಾಸೋದ್ಯಮ ಮತ್ತು ಕರಕುಶಲ ಸಚಿವ ಎಜ್ಜತೊಲ್ಲಾಹ್ ಜರ್ಘಮಿ ಅವರು ಭಾರತದಿಂದ ಭೇಟಿ ನೀಡುವವರಿಗೆ ವೀಸಾ ಅವಶ್ಯಕತೆಗಳನ್ನು ಏಕಪಕ್ಷೀಯವಾಗಿ ರದ್ದುಗೊಳಿಸಲು ಇರಾನ್ ಕ್ಯಾಬಿನೆಟ್ ನಿರ್ಧರಿಸಿದೆ ಎಂದು ಹೇಳಿದ್ದಾರೆ. ಭಾರತವೂ ಸೇರಿದಂತೆ 33 ದೇಶಗಳಿಗೆ ವೀಸಾ ಅವಶ್ಯಕತೆಗಳನ್ನು ಮನ್ನಾ ಮಾಡಲು ಇರಾನ್ ಸರ್ಕಾರ ಬುಧವಾರ ನಿರ್ಧರಿಸಿದೆ ಎಂದು ಅವರು ಹೇಳಿದರು.

ಬುಧವಾರ ನಡೆದ ಕ್ಯಾಬಿನೆಟ್ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜರ್ಘಮಿ, ಪ್ರವಾಸೋದ್ಯಮ ಆಗಮನವನ್ನು ಹೆಚ್ಚಿಸುವ ಮತ್ತು ವಿಶ್ವದಾದ್ಯಂತದ ದೇಶಗಳಿಂದ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುವ ಗುರಿಯನ್ನು ಹೊಂದಲಾಗಿದ್ದು, ಇದೇ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರವಾಸೋದ್ಯಮವನ್ನು ಉತ್ತೇಜಿಸುವ ಪ್ರಯತ್ನಗಳು ಇರಾನೋಫೋಬಿಯಾ ಅಭಿಯಾನಗಳನ್ನು ತಟಸ್ಥಗೊಳಿಸಬಹುದು ಎಂದು ಅವರು ಹೇಳಿದರು.

ಇತ್ತೀಚೆಗೆ ಮಲೇಷ್ಯಾ, ಶ್ರೀಲಂಕಾ ಮತ್ತು ವಿಯೆಟ್ನಾಂ ಭಾರತದಿಂದ ಬರುವ ಸಂದರ್ಶಕರಿಗೆ ವೀಸಾ ಅವಶ್ಯಕತೆಗಳನ್ನು ಮನ್ನಾ ಮಾಡಿತ್ತು. 

ಇರಾನ್‌ನ ಹೊಸ ವೀಸಾ-ಮನ್ನಾ ಕಾರ್ಯಕ್ರಮಕ್ಕೆ ಅನುಮೋದಿಸಿದ 33 ದೇಶಗಳ ಪಟ್ಟಿ ಇಂತಿದೆ:
ಭಾರತ, ರಷ್ಯಾ, ಯುನೈಟೆಡ್ ಅರಬ್ ಎಮಿರೇಟ್ಸ್ (UAE), ಬಹ್ರೇನ್, ಸೌದಿ ಅರೇಬಿಯಾ, ಕತಾರ್, ಕುವೈತ್, ಲೆಬನಾನ್, ಉಜ್ಬೇಕಿಸ್ತಾನ್, ಕಿರ್ಗಿಸ್ತಾನ್, ತಜಕಿಸ್ತಾನ್, ಟುನೀಶಿಯಾ, ಮಾರಿಟಾನಿಯಾ, ತಾಂಜೇನಿಯಾ, ಜಿಂಬಾಬ್ವೆ, ಮಾರಿಷಸ್, ಸೀಶೆಲ್ಸ್, ಇಂಡೋನೇಷ್ಯಾ, ದರುಸ್ಸಲಾಮ್, ಜಪಾನ್, ಸಿಂಗಾಪುರ, ಕಾಂಬೋಡಿಯಾ, ಮಲೇಷ್ಯಾ, ಬ್ರೆಜಿಲ್, ಪೆರು, ಕ್ಯೂಬಾ, ಮೆಕ್ಸಿಕೋ, ವೆನೆಜುವೆಲಾ, ಬೋಸ್ನಿಯಾ ಮತ್ತು ಹರ್ಜೆಗೋವಿನಾ, ಸೆರ್ಬಿಯಾ, ಕ್ರೊಯೇಷಿಯಾ ಮತ್ತು ಬೆಲಾರಸ್. 

ಇದಕ್ಕೂ ಮೊದಲು ಇರಾನ್ ತುರ್ಕಿಯೆ, ರಿಪಬ್ಲಿಕ್ ಆಫ್ ಅಜರ್‌ಬೈಜಾನ್, ಓಮನ್, ಚೀನಾ, ಅರ್ಮೇನಿಯಾ, ಲೆಬನಾನ್ ಮತ್ತು ಸಿರಿಯಾದಿಂದ ಸಂದರ್ಶಕರಿಗೆ ವೀಸಾ ಮನ್ನಾ ಕಾರ್ಯಕ್ರಮಗಳನ್ನು ಹೊಂದಿತ್ತು. ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಪ್ರಸ್ತುತ ಇರಾನ್ ವರ್ಷದ ಮೊದಲ ಎಂಟು ತಿಂಗಳಲ್ಲಿ (ಮಾರ್ಚ್ 21 ರಂದು ಪ್ರಾರಂಭವಾಯಿತು) ಇರಾನ್‌ಗೆ ವಿದೇಶಿ ಆಗಮನದ ಸಂಖ್ಯೆ 4.4 ಮಿಲಿಯನ್ ತಲುಪಿದೆ, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಇದು ಶೇ.48.5% ಹೆಚ್ಚಳವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT