ಇರಾನ್ ನಲ್ಲಿ ಭಾರತೀಯರು 
ವಿದೇಶ

ಇನ್ನು ಮುಂದೆ ಇರಾನ್ ಗೆ ಹೋಗಲು ಭಾರತೀಯರಿಗೆ ವೀಸಾ ಅವಶ್ಯಕತೆ ಇಲ್ಲ!

ಇನ್ನು ಮುಂದೆ ಇರಾನ್ ಗೆ ಹೋಗಲು ಭಾರತೀಯರಿಗೆ ವೀಸಾ ಅವಶ್ಯಕತೆ ಇಲ್ಲ.. ಭಾರತೀಯ ನಾಗರಿಕರು ಸೇರಿದಂತೆ 32 ಇತರ ರಾಷ್ಟ್ರಗಳಿಗೆ ವೀಸಾ ಕಡ್ಡಾಯ ನೀತಿಯನ್ನು ಇರಾನ್ ಸರ್ಕಾರ ಮನ್ನಾ ಮಾಡಿದೆ.

ಟೆಹರಾನ್: ಇನ್ನು ಮುಂದೆ ಇರಾನ್ ಗೆ ಹೋಗಲು ಭಾರತೀಯರಿಗೆ ವೀಸಾ ಅವಶ್ಯಕತೆ ಇಲ್ಲ.. ಭಾರತೀಯ ನಾಗರಿಕರು ಸೇರಿದಂತೆ 32 ಇತರ ರಾಷ್ಟ್ರಗಳಿಗೆ ವೀಸಾ ಕಡ್ಡಾಯ ನೀತಿಯನ್ನು ಇರಾನ್ ಸರ್ಕಾರ ಮನ್ನಾ ಮಾಡಿದೆ.

ಈ ಬಗ್ಗೆ ಸ್ವತಃ ಇರಾನ್‌ನ ಸಾಂಸ್ಕೃತಿಕ ಪರಂಪರೆ, ಪ್ರವಾಸೋದ್ಯಮ ಮತ್ತು ಕರಕುಶಲ ಸಚಿವ ಎಜ್ಜತೊಲ್ಲಾಹ್ ಜರ್ಘಮಿ ಅವರು ಭಾರತದಿಂದ ಭೇಟಿ ನೀಡುವವರಿಗೆ ವೀಸಾ ಅವಶ್ಯಕತೆಗಳನ್ನು ಏಕಪಕ್ಷೀಯವಾಗಿ ರದ್ದುಗೊಳಿಸಲು ಇರಾನ್ ಕ್ಯಾಬಿನೆಟ್ ನಿರ್ಧರಿಸಿದೆ ಎಂದು ಹೇಳಿದ್ದಾರೆ. ಭಾರತವೂ ಸೇರಿದಂತೆ 33 ದೇಶಗಳಿಗೆ ವೀಸಾ ಅವಶ್ಯಕತೆಗಳನ್ನು ಮನ್ನಾ ಮಾಡಲು ಇರಾನ್ ಸರ್ಕಾರ ಬುಧವಾರ ನಿರ್ಧರಿಸಿದೆ ಎಂದು ಅವರು ಹೇಳಿದರು.

ಬುಧವಾರ ನಡೆದ ಕ್ಯಾಬಿನೆಟ್ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜರ್ಘಮಿ, ಪ್ರವಾಸೋದ್ಯಮ ಆಗಮನವನ್ನು ಹೆಚ್ಚಿಸುವ ಮತ್ತು ವಿಶ್ವದಾದ್ಯಂತದ ದೇಶಗಳಿಂದ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುವ ಗುರಿಯನ್ನು ಹೊಂದಲಾಗಿದ್ದು, ಇದೇ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರವಾಸೋದ್ಯಮವನ್ನು ಉತ್ತೇಜಿಸುವ ಪ್ರಯತ್ನಗಳು ಇರಾನೋಫೋಬಿಯಾ ಅಭಿಯಾನಗಳನ್ನು ತಟಸ್ಥಗೊಳಿಸಬಹುದು ಎಂದು ಅವರು ಹೇಳಿದರು.

ಇತ್ತೀಚೆಗೆ ಮಲೇಷ್ಯಾ, ಶ್ರೀಲಂಕಾ ಮತ್ತು ವಿಯೆಟ್ನಾಂ ಭಾರತದಿಂದ ಬರುವ ಸಂದರ್ಶಕರಿಗೆ ವೀಸಾ ಅವಶ್ಯಕತೆಗಳನ್ನು ಮನ್ನಾ ಮಾಡಿತ್ತು. 

ಇರಾನ್‌ನ ಹೊಸ ವೀಸಾ-ಮನ್ನಾ ಕಾರ್ಯಕ್ರಮಕ್ಕೆ ಅನುಮೋದಿಸಿದ 33 ದೇಶಗಳ ಪಟ್ಟಿ ಇಂತಿದೆ:
ಭಾರತ, ರಷ್ಯಾ, ಯುನೈಟೆಡ್ ಅರಬ್ ಎಮಿರೇಟ್ಸ್ (UAE), ಬಹ್ರೇನ್, ಸೌದಿ ಅರೇಬಿಯಾ, ಕತಾರ್, ಕುವೈತ್, ಲೆಬನಾನ್, ಉಜ್ಬೇಕಿಸ್ತಾನ್, ಕಿರ್ಗಿಸ್ತಾನ್, ತಜಕಿಸ್ತಾನ್, ಟುನೀಶಿಯಾ, ಮಾರಿಟಾನಿಯಾ, ತಾಂಜೇನಿಯಾ, ಜಿಂಬಾಬ್ವೆ, ಮಾರಿಷಸ್, ಸೀಶೆಲ್ಸ್, ಇಂಡೋನೇಷ್ಯಾ, ದರುಸ್ಸಲಾಮ್, ಜಪಾನ್, ಸಿಂಗಾಪುರ, ಕಾಂಬೋಡಿಯಾ, ಮಲೇಷ್ಯಾ, ಬ್ರೆಜಿಲ್, ಪೆರು, ಕ್ಯೂಬಾ, ಮೆಕ್ಸಿಕೋ, ವೆನೆಜುವೆಲಾ, ಬೋಸ್ನಿಯಾ ಮತ್ತು ಹರ್ಜೆಗೋವಿನಾ, ಸೆರ್ಬಿಯಾ, ಕ್ರೊಯೇಷಿಯಾ ಮತ್ತು ಬೆಲಾರಸ್. 

ಇದಕ್ಕೂ ಮೊದಲು ಇರಾನ್ ತುರ್ಕಿಯೆ, ರಿಪಬ್ಲಿಕ್ ಆಫ್ ಅಜರ್‌ಬೈಜಾನ್, ಓಮನ್, ಚೀನಾ, ಅರ್ಮೇನಿಯಾ, ಲೆಬನಾನ್ ಮತ್ತು ಸಿರಿಯಾದಿಂದ ಸಂದರ್ಶಕರಿಗೆ ವೀಸಾ ಮನ್ನಾ ಕಾರ್ಯಕ್ರಮಗಳನ್ನು ಹೊಂದಿತ್ತು. ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಪ್ರಸ್ತುತ ಇರಾನ್ ವರ್ಷದ ಮೊದಲ ಎಂಟು ತಿಂಗಳಲ್ಲಿ (ಮಾರ್ಚ್ 21 ರಂದು ಪ್ರಾರಂಭವಾಯಿತು) ಇರಾನ್‌ಗೆ ವಿದೇಶಿ ಆಗಮನದ ಸಂಖ್ಯೆ 4.4 ಮಿಲಿಯನ್ ತಲುಪಿದೆ, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಇದು ಶೇ.48.5% ಹೆಚ್ಚಳವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT