ಉಗ್ರ ಹಫೀಜ್ ಸಯೀದ್ 
ವಿದೇಶ

ಭಾರತಕ್ಕೆ ಮೋಸ್ಟ್ ವಾಟೆಂಡ್ ಉಗ್ರ ಹಫೀಜ್ ಸಯೀದ್ ಹಸ್ತಾಂತರ ಸಾಧ್ಯವಿಲ್ಲ: ಪಾಕಿಸ್ತಾನ

26/11 ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನನ್ನು ಹಸ್ತಾಂತರಿಸುವಂತೆ ಭಾರತದ ಮನವಿಯನ್ನು ಪಾಕಿಸ್ತಾನ ಸ್ವೀಕರಿಸಿದೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವಾಲಯದ ವಕ್ತಾರ ಮುಮ್ತಾಜ್ ಜಹ್ರಾ ಬಲೂಚ್ ಹೇಳಿದ್ದಾರೆ.

ಇಸ್ಲಾಮಾಬಾದ್: 26/11 ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನನ್ನು ಹಸ್ತಾಂತರಿಸುವಂತೆ ಭಾರತದ ಮನವಿಯನ್ನು ಪಾಕಿಸ್ತಾನ ಸ್ವೀಕರಿಸಿದೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವಾಲಯದ ವಕ್ತಾರ ಮುಮ್ತಾಜ್ ಜಹ್ರಾ ಬಲೂಚ್ ಹೇಳಿದ್ದಾರೆ. 

ಭಾರತ ಮತ್ತು ಪಾಕಿಸ್ತಾನದ ನಡುವೆ ಯಾವುದೇ ದ್ವಿಪಕ್ಷೀಯ ಹಸ್ತಾಂತರ ಒಪ್ಪಂದ ಅಸ್ತಿತ್ವದಲ್ಲಿಲ್ಲ. ಹೀಗಾಗಿ ಈ ಹಸ್ತಾಂತರ ಸಾಧ್ಯವಿಲ್ಲ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹಫೀಜ್ ಸಯೀದ್ ನನ್ನು ಹಸ್ತಾಂತರಿಸುವಂತೆ ಪಾಕಿಸ್ತಾನವು ಭಾರತೀಯ ಅಧಿಕಾರಿಗಳಿಂದ ಮನವಿ ಬಂದಿತ್ತು ಎಂದು ಮುಮ್ತಾಜ್ ಜಹ್ರಾ ಬಲೂಚ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪಾಕಿಸ್ತಾನ ಮತ್ತು ಭಾರತದ ನಡುವೆ ಯಾವುದೇ ದ್ವಿಪಕ್ಷೀಯ ಹಸ್ತಾಂತರ ಒಪ್ಪಂದ ಅಸ್ತಿತ್ವದಲ್ಲಿಲ್ಲ ಎಂಬುದನ್ನು ಗಮನಿಸುವುದು ಸೂಕ್ತವಾಗಿದೆ ಎಂದು ಅವರು ಹೇಳಿದರು. ಹಫೀಜ್ ಸಯೀದ್‌ನನ್ನು ಭಾರತಕ್ಕೆ ಹಸ್ತಾಂತರಿಸುವ ಕುರಿತು ವಿಶೇಷ ಪ್ರಕರಣದಲ್ಲಿ ವಿಚಾರಣೆ ಎದುರಿಸಲು ಭಾರತವು ಪಾಕಿಸ್ತಾನ ಸರ್ಕಾರಕ್ಕೆ ಮನವಿ ಮಾಡಿದೆ ಎಂದು ವಿದೇಶಾಂಗ ಸಚಿವಾಲಯದ ಅಧಿಕೃತ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದರು.

ಅರಿಂದಮ್ ಬಾಗ್ಚಿ ಅವರು, ಹಫೀಜ್ ಸಯೀದ್ ಭಾರತದಲ್ಲಿ ಹಲವಾರು ಪ್ರಕರಣಗಳಲ್ಲಿ ಬೇಕಾಗಿದ್ದಾರೆ. ಈತ ವಿಶ್ವಸಂಸ್ಥೆಯಿಂದ ನಿಷೇಧಿತ ಭಯೋತ್ಪಾದಕನೂ ಹೌದು. ಈ ನಿಟ್ಟಿನಲ್ಲಿ, ನಾವು ಸಂಬಂಧಿತ ಪೋಷಕ ದಾಖಲೆಗಳೊಂದಿಗೆ ವಿನಂತಿಯನ್ನು ಕಳುಹಿಸಿದ್ದೇವೆ. ವಿಶೇಷ ಪ್ರಕರಣದಲ್ಲಿ ವಿಚಾರಣೆ ಎದುರಿಸಲು ಪಾಕಿಸ್ತಾನ ಸರ್ಕಾರ ಅವರನ್ನು ಭಾರತಕ್ಕೆ ಹಸ್ತಾಂತರಿಸಬೇಕು ಎಂದು ಹೇಳಿದ್ದರು.

ಆತ ಭಾರತಕ್ಕೆ ಯಾಕೆ ಬೇಕು ಎಂಬುದನ್ನು ನಾವು ಎತ್ತಿ ತೋರಿಸಿದ್ದೇವೆ ಎಂದು ಹೇಳಿದರು. ಗಮನಾರ್ಹವೆಂದರೆ, ವಿಶ್ವಸಂಸ್ಥೆಯ ನಿಯೋಜಿತ ಭಯೋತ್ಪಾದಕನಾಗಿರುವ ಸಯೀದ್, ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ (ಎಲ್ಇಟಿ) ಸ್ಥಾಪಕ. ಮುಂಬೈನಲ್ಲಿ ನಡೆದ ಮಾರಣಾಂತಿಕ 26/11 ದಾಳಿಯ ಮಾಸ್ಟರ್ ಮೈಂಡ್ ಆಗಿದ್ದ ಈತ ಭಾರತದಲ್ಲಿ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT