ಇಮ್ರಾನ್ ಖಾನ್ 
ವಿದೇಶ

ಪಾಕ್ ಸಂಸತ್ ಚುನಾವಣೆ: ಮಾಜಿ ಪ್ರಧಾನಿ ಇಮ್ರಾನ್ ಖಾನ್ ನಾಮಪತ್ರ ತಿರಸ್ಕೃತ

ಪಾಕಿಸ್ತಾನದಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಸಂಸತ್ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಉಮೇದುವಾರಿಕೆಯನ್ನು ಚುನಾವಣಾ ಅಧಿಕಾರಿಗಳು ಶನಿವಾರ ತಿರಸ್ಕರಿಸಿದ್ದಾರೆ. ಮೇಲ್ಮನವಿ ಸಲ್ಲಿಸುವುದಾಗಿ ಅವರ ವಕೀಲರು ಹೇಳಿದ್ದಾರೆ.

ಲಾಹೋರ್: ಪಾಕಿಸ್ತಾನದಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಸಂಸತ್ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಉಮೇದುವಾರಿಕೆಯನ್ನು ಚುನಾವಣಾ ಅಧಿಕಾರಿಗಳು ಶನಿವಾರ ತಿರಸ್ಕರಿಸಿದ್ದಾರೆ. ಮೇಲ್ಮನವಿ ಸಲ್ಲಿಸುವುದಾಗಿ ಅವರ ವಕೀಲರು ಹೇಳಿದ್ದಾರೆ.

ಭ್ರಷ್ಟಾಚಾರಕ್ಕಾಗಿ ಖಾನ್ ಅವರು ಮೂರು ವರ್ಷಗಳ ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ ಮತ್ತು ಇತರ ಆರೋಪ ಗಳನ್ನು  ಎದುರಿಸುತ್ತಿದ್ದಾರೆ. ಆದರೂ  ಅವರು ನಾಮಪತ್ರಗಳನ್ನು ಸಲ್ಲಿಸಿದ್ದರು. ದೋಷಾರೋಪಣೆ ಮತ್ತು ದಾಖಲೆಗಳ ಪ್ರಕಾರ ಸಂವಿಧಾನದ ಅಡಿಯಲ್ಲಿ ಖಾನ್ ಅವರ ಉಮೇದುವಾರಿಕೆಯನ್ನು ತಿರಸ್ಕರಿಸಲಾಗಿದೆ ಎಂದು  ಚುನಾವಣಾ ಅಧಿಕಾರಿಗಳು ಹೇಳಿದ್ದಾರೆ.

ಸಚಿವ ಸಂಪುಟದ ಮಾಜಿ ಸದಸ್ಯರ ಉಮೇದುವಾರಿಕೆಗಳನ್ನೂ ಸಹ ತಿರಸ್ಕರಿಸಲಾಗಿದೆ. ಈ ನಿರ್ಧಾರಗಳು ಖಾನ್‌ರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಪಕ್ಷಕ್ಕೆ ಹೊಸ ಹೊಡೆತವಾಗಿದೆ. 71 ವರ್ಷದ ಮಾಜಿ ಕ್ರಿಕೆಟಿಗ ದೇಶದ ಅತ್ಯಂತ ಜನಪ್ರಿಯ ವಿರೋಧ ಪಕ್ಷದ ವ್ಯಕ್ತಿಯಾಗಿದ್ದಾರೆ. 

ಸಂಸತ್ತಿನಲ್ಲಿ ಅವಿಶ್ವಾಸ ಮತದ ಮೂಲಕ  ಖಾನ್ ಅವರನ್ನು ಏಪ್ರಿಲ್ 2022 ರಲ್ಲಿ ಪ್ರಧಾನಿ ಕಚೇರಿಯಿಂದ ಹೊರಹಾಕಲಾಯಿತು. ಅಂದಿನಿಂದ ಸರ್ಕಾರಿ ಸಂಸ್ಥೆಗಳು ನ್ಯಾಯಾಲಯಗಳಲ್ಲಿ ಅವರನ್ನು ಹಿಂಬಾಲಿಸಿವೆ. ಈ ತಿರಸ್ಕಾರವು ಚುನಾವಣಾ ಆಯೋಗದ ಪಕ್ಷಪಾತವನ್ನು ಬಹಿರಂಗಪಡಿಸಿದೆ ಎಂದು ಅವರ ವಕೀಲ ಅಜರ್ ಸಿದ್ದಿಕ್ ಹೇಳಿದ್ದಾರೆ.

ಖಾನ್ ಅವರ ಪತ್ರಗಳನ್ನು ತಿರಸ್ಕರಿಸುವುದನ್ನು ಪಾಕಿಸ್ತಾನಕ್ಕೆ ಮಾಡಿದ ಅನ್ಯಾಯ ಎಂದು ಅವರ ಇನ್ನೊಬ್ಬ ವಕೀಲ ರಾಯ್ ಮುಹಮ್ಮದ್ ಅಲಿ ಬಣ್ಣಿಸಿದ್ದು, ಉದ್ದೇಶಪೂರ್ವಕವಾಗಿ ಈ ಸನ್ನಿವೇಶಗಳನ್ನು ಸೃಷ್ಟಿಸಲಾಗುತ್ತಿದೆ. ಇದಕ್ಕೆಲ್ಲಾ ಹೆದರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT