ಹಿಂದೂ ದೇವಾಲಯಗಳ ಧ್ವಂಸ 
ವಿದೇಶ

ಬಾಂಗ್ಲಾದೇಶದಲ್ಲಿ 14 ಹಿಂದೂ ದೇವಾಲಯಗಳ ಮೇಲೆ ಕಿಡಿಗೇಡಿಗಳ ದಾಳಿ, ವಿಗ್ರಹ ಧ್ವಂಸ

ಬಾಂಗ್ಲಾದೇಶದಲ್ಲಿ 14 ಹಿಂದೂ ದೇವಾಲಯಗಳನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಾಯುವ್ಯ ಬಾಂಗ್ಲಾದೇಶದಲ್ಲಿ ಹಿಂದೂ ದೇವಾಲಯಗಳ ಮೇಲೆ ಶನಿವಾರ ರಾತ್ರಿ ನಡೆಸಿದ ಸಂಘಟಿತ ಸರಣಿ ದಾಳಿ ಇದಾಗಿದೆ .

ಢಾಕಾ: ಬಾಂಗ್ಲಾದೇಶದಲ್ಲಿ 14 ಹಿಂದೂ ದೇವಾಲಯಗಳನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಾಯುವ್ಯ ಬಾಂಗ್ಲಾದೇಶದಲ್ಲಿ ಹಿಂದೂ ದೇವಾಲಯಗಳ ಮೇಲೆ ಶನಿವಾರ ರಾತ್ರಿ ನಡೆಸಿದ ಸಂಘಟಿತ ಸರಣಿ ದಾಳಿ ಇದಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಾಂಗ್ಲಾದೇಶದಲ್ಲಿ 14 ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆದಿದ್ದು, ವಿಗ್ರಹಗಳನ್ನು ಧ್ವಂಸ ಮಾಡಲಾಗಿದೆ. ಘಟನೆಯ ನಂತರ, ಬಾಂಗ್ಲಾದೇಶದಲ್ಲಿ ವಾಸಿಸುವ ಹಿಂದೂಗಳು ತಮ್ಮ ಜೀವ ಮತ್ತು ಆಸ್ತಿಯ ಬಗ್ಗೆ ಭಯಭೀತರಾಗಿದ್ದಾರೆ. ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸಿ ಹಿಂದೂಗಳಿಗೆ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ವರದಿಯ ಪ್ರಕಾರ, ದೇವಾಲಯಗಳಲ್ಲಿ (ಬಾಂಗ್ಲಾದೇಶಿ ಹಿಂದೂ ದೇವಾಲಯ) ವಿಧ್ವಂಸಕ ಘಟನೆಯು ಬಾಂಗ್ಲಾದೇಶದ ವಾಯುವ್ಯ ಪ್ರದೇಶದ ಠಾಕೂರ್ಗಾಂವ್‌ನ ಬಲಿಯಾದಂಗಿಯಲ್ಲಿ ನಡೆದಿದೆ. ಗ್ರಾಮದಲ್ಲಿ ವಾಸಿಸುವ ಹಿಂದೂ ಸಮುದಾಯದ ಮುಖಂಡ ಬಿದ್ಯನಾಥ್ ಬರ್ಮನ್ ಪ್ರಕಾರ, ಶನಿವಾರ ರಾತ್ರಿ ಮತ್ತು ಭಾನುವಾರದ ಮುಂಜಾನೆ ಅಪರಿಚಿತರು ಕತ್ತಲೆಯ ಲಾಭವನ್ನು ಪಡೆದುಕೊಂಡು ದೇವಾಲಯಗಳ ಮೇಲೆ ಯೋಜಿತ ರೀತಿಯಲ್ಲಿ ದಾಳಿ ಮಾಡಲು ಪ್ರಾರಂಭಿಸಿದರು.

ಕೋಲು ಮತ್ತಿತರ ಆಯುಧಗಳೊಂದಿಗೆ ಬಂದ ದುಷ್ಕರ್ಮಿಗಳು 14 ದೇವಸ್ಥಾನಗಳನ್ನು ಧ್ವಂಸಗೊಳಿಸಿದ್ದಾರೆ. ಈ ಸಂದರ್ಭದಲ್ಲಿ, ಅನೇಕ ವಿಗ್ರಹಗಳು ತುಂಡುಗಳಾಗಿ ಮುರಿದು ಕೊಳಕ್ಕೆ ಎಸೆದಿದ್ದಾರೆ. ದೇವಾಲಯಗಳ (ಬಾಂಗ್ಲಾದೇಶಿ ಹಿಂದೂ ದೇವಾಲಯ) ಮೇಲೆ ದಾಳಿ ನಡೆಸಿದವರು ಯಾರು ಎಂಬುದು ಇನ್ನೂ ಪತ್ತೆಯಾಗಿಲ್ಲ ಎಂದು ಬರ್ಮನ್ ಹೇಳಿದ್ದಾರೆ.

ಕತ್ತಲೆಯಿಂದಾಗಿ ಯಾರೂ ಅವರನ್ನು ನೋಡಲಿಲ್ಲ. ಘಟನೆ ಬೆಳಕಿಗೆ ಬಂದಿದ್ದರಿಂದ ಈ ಪ್ರದೇಶದಲ್ಲಿ ವಾಸಿಸುವ ಹಿಂದೂಗಳು ತಮ್ಮ ಸುರಕ್ಷತೆಯ ಬಗ್ಗೆ ಚಿಂತಿತರಾಗಿದ್ದಾರೆ ಮತ್ತು ಪೊಲೀಸರು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಈ ಪ್ರದೇಶದಲ್ಲಿ ಶಾಂತಿ ನೆಲೆಸಿತ್ತು. ಮುಸ್ಲಿಂ ಬಾಂಧವರೊಂದಿಗೆ ಯಾವುದೇ ಭಿನ್ನಭಿಪ್ರಾಯ ಇರಲಿಲ್ಲ. ಅಪರಾಧಿಗಳು ಯಾರೂ ಎಂದು ತಿಳಿಯುತ್ತಿಲ್ಲ ಎಂದು ಮತ್ತೊಬ್ಬ ಹಿಂದೂ ಸಮುದಾಯದ ನಾಯಕ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT