ಹಿಂದೂ ದೇವಾಲಯಗಳ ಧ್ವಂಸ 
ವಿದೇಶ

ಬಾಂಗ್ಲಾದೇಶದಲ್ಲಿ 14 ಹಿಂದೂ ದೇವಾಲಯಗಳ ಮೇಲೆ ಕಿಡಿಗೇಡಿಗಳ ದಾಳಿ, ವಿಗ್ರಹ ಧ್ವಂಸ

ಬಾಂಗ್ಲಾದೇಶದಲ್ಲಿ 14 ಹಿಂದೂ ದೇವಾಲಯಗಳನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಾಯುವ್ಯ ಬಾಂಗ್ಲಾದೇಶದಲ್ಲಿ ಹಿಂದೂ ದೇವಾಲಯಗಳ ಮೇಲೆ ಶನಿವಾರ ರಾತ್ರಿ ನಡೆಸಿದ ಸಂಘಟಿತ ಸರಣಿ ದಾಳಿ ಇದಾಗಿದೆ .

ಢಾಕಾ: ಬಾಂಗ್ಲಾದೇಶದಲ್ಲಿ 14 ಹಿಂದೂ ದೇವಾಲಯಗಳನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಾಯುವ್ಯ ಬಾಂಗ್ಲಾದೇಶದಲ್ಲಿ ಹಿಂದೂ ದೇವಾಲಯಗಳ ಮೇಲೆ ಶನಿವಾರ ರಾತ್ರಿ ನಡೆಸಿದ ಸಂಘಟಿತ ಸರಣಿ ದಾಳಿ ಇದಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಾಂಗ್ಲಾದೇಶದಲ್ಲಿ 14 ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆದಿದ್ದು, ವಿಗ್ರಹಗಳನ್ನು ಧ್ವಂಸ ಮಾಡಲಾಗಿದೆ. ಘಟನೆಯ ನಂತರ, ಬಾಂಗ್ಲಾದೇಶದಲ್ಲಿ ವಾಸಿಸುವ ಹಿಂದೂಗಳು ತಮ್ಮ ಜೀವ ಮತ್ತು ಆಸ್ತಿಯ ಬಗ್ಗೆ ಭಯಭೀತರಾಗಿದ್ದಾರೆ. ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸಿ ಹಿಂದೂಗಳಿಗೆ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ವರದಿಯ ಪ್ರಕಾರ, ದೇವಾಲಯಗಳಲ್ಲಿ (ಬಾಂಗ್ಲಾದೇಶಿ ಹಿಂದೂ ದೇವಾಲಯ) ವಿಧ್ವಂಸಕ ಘಟನೆಯು ಬಾಂಗ್ಲಾದೇಶದ ವಾಯುವ್ಯ ಪ್ರದೇಶದ ಠಾಕೂರ್ಗಾಂವ್‌ನ ಬಲಿಯಾದಂಗಿಯಲ್ಲಿ ನಡೆದಿದೆ. ಗ್ರಾಮದಲ್ಲಿ ವಾಸಿಸುವ ಹಿಂದೂ ಸಮುದಾಯದ ಮುಖಂಡ ಬಿದ್ಯನಾಥ್ ಬರ್ಮನ್ ಪ್ರಕಾರ, ಶನಿವಾರ ರಾತ್ರಿ ಮತ್ತು ಭಾನುವಾರದ ಮುಂಜಾನೆ ಅಪರಿಚಿತರು ಕತ್ತಲೆಯ ಲಾಭವನ್ನು ಪಡೆದುಕೊಂಡು ದೇವಾಲಯಗಳ ಮೇಲೆ ಯೋಜಿತ ರೀತಿಯಲ್ಲಿ ದಾಳಿ ಮಾಡಲು ಪ್ರಾರಂಭಿಸಿದರು.

ಕೋಲು ಮತ್ತಿತರ ಆಯುಧಗಳೊಂದಿಗೆ ಬಂದ ದುಷ್ಕರ್ಮಿಗಳು 14 ದೇವಸ್ಥಾನಗಳನ್ನು ಧ್ವಂಸಗೊಳಿಸಿದ್ದಾರೆ. ಈ ಸಂದರ್ಭದಲ್ಲಿ, ಅನೇಕ ವಿಗ್ರಹಗಳು ತುಂಡುಗಳಾಗಿ ಮುರಿದು ಕೊಳಕ್ಕೆ ಎಸೆದಿದ್ದಾರೆ. ದೇವಾಲಯಗಳ (ಬಾಂಗ್ಲಾದೇಶಿ ಹಿಂದೂ ದೇವಾಲಯ) ಮೇಲೆ ದಾಳಿ ನಡೆಸಿದವರು ಯಾರು ಎಂಬುದು ಇನ್ನೂ ಪತ್ತೆಯಾಗಿಲ್ಲ ಎಂದು ಬರ್ಮನ್ ಹೇಳಿದ್ದಾರೆ.

ಕತ್ತಲೆಯಿಂದಾಗಿ ಯಾರೂ ಅವರನ್ನು ನೋಡಲಿಲ್ಲ. ಘಟನೆ ಬೆಳಕಿಗೆ ಬಂದಿದ್ದರಿಂದ ಈ ಪ್ರದೇಶದಲ್ಲಿ ವಾಸಿಸುವ ಹಿಂದೂಗಳು ತಮ್ಮ ಸುರಕ್ಷತೆಯ ಬಗ್ಗೆ ಚಿಂತಿತರಾಗಿದ್ದಾರೆ ಮತ್ತು ಪೊಲೀಸರು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಈ ಪ್ರದೇಶದಲ್ಲಿ ಶಾಂತಿ ನೆಲೆಸಿತ್ತು. ಮುಸ್ಲಿಂ ಬಾಂಧವರೊಂದಿಗೆ ಯಾವುದೇ ಭಿನ್ನಭಿಪ್ರಾಯ ಇರಲಿಲ್ಲ. ಅಪರಾಧಿಗಳು ಯಾರೂ ಎಂದು ತಿಳಿಯುತ್ತಿಲ್ಲ ಎಂದು ಮತ್ತೊಬ್ಬ ಹಿಂದೂ ಸಮುದಾಯದ ನಾಯಕ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT