ಟರ್ಕಿಯಲ್ಲಿ ಮೂರನೇ ಬಾರಿ ಕಂಪಿಸಿದ ಭೂಮಿ 
ವಿದೇಶ

ಟರ್ಕಿಯಲ್ಲಿ ಮೂರನೇ ಬಾರಿ ಕಂಪಿಸಿದ ಭೂಮಿ; ಪ್ರಬಲ ಭೂಕಂಪಕ್ಕೆ 1,800ಕ್ಕೂ ಹೆಚ್ಚು ಜನ ಬಲಿ

ಯುದ್ಧದಿಂದ ಧ್ವಂಸಗೊಂಡ ಸಿರಿಯಾದ ಉತ್ತರ ಗಡಿಯಲ್ಲಿ ಮತ್ತು ದಕ್ಷಿಣ ಟರ್ಕಿಯಲ್ಲಿ ಸೋಮವಾರ ಮೂರನೇ ಬಾರಿ ಭೂಮಿ ಕಂಪಿಸಿದ್ದು, ಪ್ರಬಲ ಸರಣಿ ಭೂಕಂಪದಿಂದ 1800ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ ಮತ್ತು 6,500ಕ್ಕೂ ಹೆಚ್ಚು ಜನ...

ಅಂಕಾರಾ: ಯುದ್ಧದಿಂದ ಧ್ವಂಸಗೊಂಡ ಸಿರಿಯಾದ ಉತ್ತರ ಗಡಿಯಲ್ಲಿ ಮತ್ತು ದಕ್ಷಿಣ ಟರ್ಕಿಯಲ್ಲಿ ಸೋಮವಾರ ಮೂರನೇ ಬಾರಿ ಭೂಮಿ ಕಂಪಿಸಿದ್ದು, ಪ್ರಬಲ ಸರಣಿ ಭೂಕಂಪದಿಂದ 1800ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ ಮತ್ತು 6,500ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಕಳೆದ 24 ಗಂಟೆಯಲ್ಲಿ ಮೂರು ಬಾರಿ ಭೂಮಿ ಕಂಪಿಸಿದ್ದು, ಸಾವಿರಾರು ಕಟ್ಟಡಗಳು ಧರೆಗುರುಳಿವೆ ಮತ್ತು ನೂರಾರು ಜನ ಜೀವಂತ ಸಮಾಧಿಯಾಗಿದ್ದಾರೆ. ಎರಡೂ ದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಮೊದಲ ಬಾರಿಗೆ ಇಂದು ಬೆಳಗ್ಗೆ4 ಗಂಟೆಗೆ 7.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ಎರಡನೇ ಬಾರಿ 7.5 ತೀವ್ರತೆಯ ಭೂಕಂಪ ಸಂಭವಿಸಿದೆ. ಕೆಲವು ಗಂಟೆಗಳ ನಂತರ ಮಧ್ಯ ಟರ್ಕಿಯಲ್ಲಿ 6.0 ತೀವ್ರತೆಯ ಮತ್ತೊಂದು ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ.

ಭೂಕಂಪನದಿಂದ ನೂರಾರು ಬಹುಮಹಡಿ ಕಟ್ಟಡಗಳು ನೆಲಕ್ಕುರುಳಿವೆ. ಪರಿಣಾಮ ಸಾವಿರಾರು ಜನ ಅದರ ಅವಶೇಷದಡಿ ಸಿಲುಕಿದ್ದಾರೆ. ಹೀಗಾಗಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚು ಸಾಧ್ಯತೆ ಇದೆ. 

ಭೂಕಂಪನದಿಂದ ಉಂಟಾಗಿರುವ ಜೀವಹಾನಿಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದು, ಈ ದುರಂತವನ್ನು ನಿಭಾಯಿಸುವುದಕ್ಕೆ ಭಾರತದಿಂದ ಸಾಧ್ಯವಾಗುವ ಎಲ್ಲಾ ರೀತಿಯ ನೆರವು ನೀಡುವುದಾಗಿ ಘೋಷಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮುತಾಕಿ ಭಾರತ ಭೇಟಿ ನಡುವೆ ಅಫ್ಘಾನ್ ಗಡಿಯಲ್ಲಿ ಮಾರಣಹೋಮ: 23 ಪಾಕ್ ಸೈನಿಕರು, 200 ತಾಲಿಬಾನ್ ಗಳ ಹತ್ಯೆ!

ಸರ್ಕಾರಿ ಸ್ಥಳಗಳಲ್ಲಿ RSS ನಿರ್ಬಂಧಕ್ಕೆ ಪ್ರಿಯಾಂಕ್ ಖರ್ಗೆ ಆಗ್ರಹ: ಪರಿಶೀಲಿಸಿ ಕ್ರಮ ಕೈಗೊಳ್ಳಲು ಮುಖ್ಯ ಕಾರ್ಯದರ್ಶಿಗಳಿಗೆ CM ಸೂಚನೆ

ಅಧಿಕಾರದ ಅಮಲು ನೆತ್ತಿಗೇರಿದೆ, ಚುನಾಯಿತ ಶಾಸಕರನ್ನು ಕರಿಟೋಪಿ MLA ಎಂದು ಸಂಬೋಧಿಸುವುದು ಎಷ್ಟು ಸರಿ?

Bengaluru: ಹಾಲಿನ ಅಂಗಡಿಗೆ ನುಗ್ಗಿ, ಮಾಲೀಕನಿಗೆ ಚಪ್ಪಲಿಯಿಂದ ಮನಬಂದಂತೆ ಹಲ್ಲೆ, ಬಿಹಾರ ಮೂಲದ ರೌಡಿ ಅಂದರ್! Video

6 ಎಕರೆಯಲ್ಲ, ಲಾಲ್‌ಬಾಗ್‌ನ 6 ಇಂಚು ಜಾಗ ಕಸಿಯಲು ಬಿಡಲ್ಲ: ಸುರಂಗ ಮಾರ್ಗಕ್ಕೆ ಭೂವೈಜ್ಞಾನಿಕ ವರದಿ ಅಗತ್ಯ; ತೇಜಸ್ವಿ ಸೂರ್ಯ

SCROLL FOR NEXT