ಆಪರೇಷನ್ ದೋಸ್ತ್ ವಿಮಾನದಲ್ಲಿ ಪರಿಹಾರ ಸಾಮಾಗ್ರಿಗಳು 
ವಿದೇಶ

23 ಟನ್ ಪರಿಹಾರ ಸಾಮಾಗ್ರಿಯೊಂದಿಗೆ ಭೂಕಂಪ ಪೀಡಿತ ಸಿರಿಯಾ ತಲುಪಿದ ಭಾರತದ ಏಳನೇ ವಿಮಾನ!

ಶತಮಾನದಲ್ಲಿಯೇ ಅತ್ಯಂತ ವಿನಾಶಕಾರಿ ಭೂಕಂಪಕ್ಕೆ ಸಿಲುಕಿ ತತ್ತರಿಸಿರುವ ಟರ್ಕಿ ಹಾಗೂ ಸಿರಿಯಾ ದೇಶಕ್ಕೆ ಭಾರತ ನೆರವಿನ ಹಸ್ತ ಚಾಚಿಸಿದೆ. ಆಪರೇಷನ್ ದೋಸ್ತ್ ಹೆಸರಿನಲ್ಲಿ ವೈದ್ಯಕೀಯ ಹಾಗೂ ಪರಿಹಾರ ಸಾಮಾಗ್ರಿಗಳನ್ನು ಟರ್ಕಿಗೆ ಭಾರತ ತಲುಪಿಸಿದೆ.

ಟರ್ಕಿ: ಶತಮಾನದಲ್ಲಿಯೇ ಅತ್ಯಂತ ವಿನಾಶಕಾರಿ ಭೂಕಂಪಕ್ಕೆ ಸಿಲುಕಿ ತತ್ತರಿಸಿರುವ ಟರ್ಕಿ ಹಾಗೂ ಸಿರಿಯಾ ದೇಶಕ್ಕೆ ಭಾರತ ನೆರವಿನ ಹಸ್ತ ಚಾಚಿಸಿದೆ. ಆಪರೇಷನ್ ದೋಸ್ತ್ ಹೆಸರಿನಲ್ಲಿ ವೈದ್ಯಕೀಯ ಹಾಗೂ ಪರಿಹಾರ ಸಾಮಾಗ್ರಿಗಳನ್ನು ಟರ್ಕಿಗೆ ಭಾರತ ತಲುಪಿಸಿದೆ.

23 ಟನ್ ಪರಿಹಾರ ಸಾಮಾಗ್ರಿ ಹೊತ್ತ ಭಾರತದ ಏಳನೇ ವಿಮಾನ ಅದಾನ ವಿಮಾನ ನಿಲ್ದಾಣ ತಲುಪಿದ್ದು, ಸ್ಥಳೀಯ ಉಪ ಆಡಳಿತಾಧಿಕಾರಿ ಮೌತಾಜ್ ದೌಹುಜಿ ಡಮಾಸ್ಕಸ್ ವಿಮಾನ ನಿಲ್ದಾಣದಲ್ಲಿ ಸ್ವೀಕರಿಸಿದ್ದಾರೆ. ಈ ವಿಷಯವನ್ನು ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗಚಿ ತಮ್ಮ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಏಳನೇ ಆಪರೇಷನ್ ದೋಸ್ತ್ ವಿಮಾನ ಶನಿವಾರ ಉತ್ತರ ಪ್ರದೇಶದ ಗಾಜಿಯಾಬಾದ್ ನ ಹಿಂದನ್ ವಾಯುನೆಲೆಯಿಂದ ಭೂಕಂಪ ಪೀಡಿತ ಸಿರಿಯಾ ಮತ್ತು ಟರ್ಕಿಗೆ ನಿರ್ಗಮಿಸಿತ್ತು. ಭಾರತೀಯ ವಾಯುಪಡೆಯ ಸಿ 17 ವಿಮಾನದಲ್ಲಿ ಪರಿಹಾರ ಸಾಮಾಗ್ರಿಗಳು, ವೈದ್ಯಕೀಯ ನೆರವು, ತುರ್ತು ಆರೈಕೆ ಮೆಡಿಸನ್, ವೈದ್ಯಕೀಯ ಉಪಕರಣಗಳನ್ನು ಸಾಗಿಸಲಾಯಿತು.

ಸಿರಿಯಾಕ್ಕೆ 23 ಟನ್ ಹಾಗೂ ಟರ್ಕಿಗೆ 12 ಟನ್ ಸೇರಿದಂತೆ ಒಟ್ಟಾರೇ 35 ಟನ್ ಪರಿಹಾರ ಸಾಮಾಗ್ರಿ ಸಾಗಿಸಲಾಗಿದೆ ಎಂದು ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT