ಪ್ರತ್ಯಕ್ಷ ದೃಶ್ಯ 
ವಿದೇಶ

ಧರ್ಮ ನಿಂದನೆ ಆರೋಪ: ಪಾಕ್‌ನಲ್ಲಿ ಠಾಣೆಗೆ ನುಗ್ಗಿ ವ್ಯಕ್ತಿಯನ್ನು ಎಳೆತಂದು ಥಳಿಸಿ, ಸುಟ್ಟು ಹಾಕಿದ ಮೂಲಭೂತವಾದಿಗಳು!

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನಂಕಾನಾ ಸಾಹಿಬ್ ಜಿಲ್ಲೆಯಲ್ಲಿ ಧರ್ಮನಿಂದೆಯ ಆರೋಪದ ಮೇಲೆ ಹಿಂಸಾತ್ಮಕ ಗುಂಪೊಂದು ವ್ಯಕ್ತಿಯೊಬ್ಬನನ್ನು ಸಾರ್ವಜನಿಕವಾಗಿ ಥಳಿಸಿ ಕೊಂದಿದೆ.

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನಂಕಾನಾ ಸಾಹಿಬ್ ಜಿಲ್ಲೆಯಲ್ಲಿ ಧರ್ಮನಿಂದೆಯ ಆರೋಪದ ಮೇಲೆ ಹಿಂಸಾತ್ಮಕ ಗುಂಪೊಂದು ವ್ಯಕ್ತಿಯೊಬ್ಬನನ್ನು ಸಾರ್ವಜನಿಕವಾಗಿ ಥಳಿಸಿ ಕೊಂದಿದೆ. ನಂಕಾನಾ ಸಾಹಿಬ್‌ನ ವಾರ್ಬರ್ಟನ್ ತಹಸಿಲ್‌ನಲ್ಲಿ ಈ ಘಟನೆ ನಡೆದಿದೆ. 

ವರದಿಯ ಪ್ರಕಾರ, ಮೂಲಭೂತವಾದಿಗಳಿಂದ ಹತ್ಯೆಗೀಡಾದ ವ್ಯಕ್ತಿ ಮೇಲೆ ಕುರಾನ್‌ಗೆ ಅವಮಾನ ಮಾಡಿದ ಆರೋಪ ಹೊರಿಸಲಾಗಿತ್ತು. ಪಾಕಿಸ್ತಾನಿ ಪೊಲೀಸರ ಪ್ರಕಾರ ಮೃತ ವ್ಯಕ್ತಿಯ ಹೆಸರು ವಾರಿಸ್ ಎನ್ನಲಾಗಿದೆ. ಈ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ಉದ್ರಿಕ್ತರ ಗುಂಪು ವಾರ್ಬರ್ಟನ್ ಪೊಲೀಸ್ ಠಾಣೆಯ ಹೊರಗೆ ಪೊಲೀಸರು ಧರ್ಮನಿಂದೆಯ ಶಂಕಿತನನ್ನು ಹಸ್ತಾಂತರಿಸುವಂತೆ ಒತ್ತಾಯಿಸುವುದನ್ನು ಕಾಣಬಹುದು. 

ಲಾಹೋರ್‌ನ ಪೂರ್ವ ನಗರದಿಂದ ಸುಮಾರು 80 ಕಿಮೀ ದೂರದಲ್ಲಿರುವ ನಂಕಾನಾ ಸಾಹಿಬ್‌ನಲ್ಲಿರುವ ವಾರ್ಬರ್ಟನ್‌ನಲ್ಲಿರುವ ಪೊಲೀಸ್ ಠಾಣೆಗೆ ಜನಸಮೂಹವು ನುಗ್ಗಿ ಧರ್ಮನಿಂದೆಯ ಆರೋಪದ ಮೇಲೆ ವಾರಿಸ್ ಇಸಾನನ್ನು ಕರೆದೊಯ್ದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಘಟನೆಯ ಹಲವು ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ವಿಡಿಯೋದಲ್ಲಿ, ಮಕ್ಕಳು ಸೇರಿದಂತೆ ಗುಂಪು ಪೊಲೀಸ್ ಠಾಣೆಯ ಗೇಟ್ ಹತ್ತುತ್ತಿರುವುದನ್ನು ಕಾಣಬಹುದು. ಘಟನೆಯಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರಧಾನಿ ಶೆಹಬಾಜ್ ಷರೀಫ್ ಆದೇಶಿಸಿದ್ದಾರೆ.

ಹಿಂಸಾತ್ಮಕ ಗುಂಪನ್ನು ತಡೆಯಲು ಪೊಲೀಸರಿಗೆ ಏಕೆ ಸಾಧ್ಯವಾಗಲಿಲ್ಲ ಎಂಬ ಪ್ರಶ್ನೆಯನ್ನೂ ಪ್ರಧಾನಿ ಎತ್ತಿದ್ದಾರೆ. ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಖಾತ್ರಿಪಡಿಸುವಂತೆ ಅವರು ಪಂಜಾಬ್‌ನ ಪೊಲೀಸ್ ಮಹಾನಿರೀಕ್ಷಕರಿಗೆ ನಿರ್ದೇಶನ ನೀಡಿದರು. ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಷರೀಫ್ ಹೇಳಿದರು. ಕಾನೂನಿನ ಮೇಲೆ ಪ್ರಭಾವ ಬೀರಲು ಯಾರಿಗೂ ಅವಕಾಶ ನೀಡಬಾರದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲ ಗೆಹ್ಲೋಟ್!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!

ಕನಸು ಕೊನೆಗೂ ನನಸು: ಲಿಂಗ ಬದಲಿಸಿಕೊಂಡಿದ್ದ Anaya Bangarಗೆ ಕ್ರಿಕೆಟ್‌ಗೆ ಮರಳಲು ಗ್ರೀನ್ ಸಿಗ್ನಲ್!

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!