ಪಾಕ್ ಪ್ರಜೆಯ ಹೇಳಿಕೆ 
ವಿದೇಶ

ಶೆಹಬಾಜ್-ಭುಟ್ಟೋ ಬೇಡ.. ಇಮ್ರಾನ್ ಖಾನ್ ಅಂತೂ ಬೇಡ್ವೇ ಬೇಡ: ಮೋದಿ ಭಾರತ ಬೇಕು: ಪಾಕ್ ಪ್ರಜೆಯ ಹೇಳಿಕೆ ವೈರಲ್

ಆರ್ಥಿಕ ಸಂಕಷ್ಟದಿಂದ ನಲುಗುತ್ತಿರುವ ಪಾಕಿಸ್ತಾನದಲ್ಲಿ ಸರ್ಕಾರದ ವಿರುದ್ಧ ಅಲ್ಲಿನ ಪ್ರಜೆಗಳು ತಿರುಗಿ ಬೀಳುತ್ತಿದ್ದು, ನಮಗೆ ಭಾರತದಲ್ಲಿರುವಂತೆ ಉತ್ತಮ ಆಡಳಿತ ಬೇಕು ಎಂದು ಹೇಳಿರುವ ವಿಡಿಯೋ ವೈರಲ್ ಆಗಿದೆ.

ನವದೆಹಲಿ: ಆರ್ಥಿಕ ಸಂಕಷ್ಟದಿಂದ ನಲುಗುತ್ತಿರುವ ಪಾಕಿಸ್ತಾನದಲ್ಲಿ ಸರ್ಕಾರದ ವಿರುದ್ಧ ಅಲ್ಲಿನ ಪ್ರಜೆಗಳು ತಿರುಗಿ ಬೀಳುತ್ತಿದ್ದು, ನಮಗೆ ಭಾರತದಲ್ಲಿರುವಂತೆ ಉತ್ತಮ ಆಡಳಿತ ಬೇಕು ಎಂದು ಹೇಳಿರುವ ವಿಡಿಯೋ ವೈರಲ್ ಆಗಿದೆ.

ಪಾಕಿಸ್ತಾನದ ಖ್ಯಾತ ಯೂಟ್ಯೂಬರ್ ಸನಾ ಅಮ್ಜದ್ ನಡೆಸಿಕೊಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಪಾಕಿಸ್ತಾನದ ಪ್ರಜೆಯೋರ್ವ ನಮಗೆ ಶೆಹಬಾಜ್‌ ಷರೀಫ್, ಭುಟ್ಟೋ, ಇಮ್ರಾನ್‌ ಖಾನ್‌ ಬೇಡ, ಪ್ರಧಾನಿ ನರೇಂದ್ರ ಮೋದಿ ಬೇಕು ಎಂದು ಹೇಳಿದ್ದಾರೆ.

ಪಾಕಿಸ್ತಾನವು ಭಾರತದಿಂದ ವಿಭಜನೆಯಾಗದೆ ಉಳಿದಿದ್ದರೆ, ತನ್ನ ದೇಶದ ಜನರು ಅಗತ್ಯ ವಸ್ತುಗಳನ್ನು ಕಡಿಮೆ ಬೆಲೆಯಲ್ಲಿ ಖರೀದಿ ಮಾಡಲು ಮತ್ತು ತಮ್ಮ ಮಕ್ಕಳಿಗೆ ಪ್ರತಿ ರಾತ್ರಿಯೂ ಆಹಾರ ನೀಡಲು ಸಾಧ್ಯವಾಗುತ್ತಿತ್ತು. ಭಾರತದಿಂದ ಪಾಕಿಸ್ತಾನ ಬೇರ್ಪಡಬಾರದಿತ್ತು. 

ಪಾಕಿಸ್ತಾನದಲ್ಲಿ ದಿನೇ ದಿನೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದ್ದು ಈ ಕುರಿತು ಸನಾ ಅಮ್ಜದ್ ಕೇಳಿದೆ ಪ್ರಶ್ನೆಗೆ ಉತ್ತರಿಸಿದ ಪಾಕ್ ಪ್ರಜೆ, ಪಾಕಿಸ್ತಾನದಲ್ಲಿ ಅಗತ್ಯ ವಸ್ತುಗಳ ಬೆಲೆಗಳು ಏರಿಕೆಯಾಗುತ್ತಿವೆ. ಹಾಲು, ಪೆಟ್ರೋಲ್‌, ಮಾಂಸ ಸೇರಿದಂತೆ ತರಕಾರಿ ಬೆಲೆಗಳು ಗಗನಕ್ಕೇರಿವೆ, ಇಲ್ಲಿ ಜೀವನ ನಡೆಸುವುದು ಕಷ್ಟವಾಗಿದೆ ಎಂದು ಹೇಳಿದ್ದಾರೆ.

1947ರಲ್ಲಿ ಭಾರತದಿಂದ ಪಾಕಿಸ್ತಾನ ಬೇರೆಯಾಗದಿದ್ದರೇ, ನಾವು ಕೂಡ ಇಂದು 20 ರೂಗೆ ಟೊಮೊಟೊ, 150ರೂ ಕೋಳಿ ಮಾಂಸ, 30ರೂಗೆ ಹಾಲು ಮತ್ತು 100 ರೂಗೆ ಪೆಟ್ರೋಲ್ ಖರೀದಿಸಬಹುದಿತ್ತು  ಎಂದು ಹೇಳಿದ್ದಾರೆ.

ಅಂತೆಯೇ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಎಲ್ಲರೂ ಗೌರವಿಸುತ್ತಾರೆ, ಅವರು ಕೂಡ ನಮ್ಮ ದೇಶಕ್ಕೆ ಪ್ರಧಾನಿಯಾಗಲಿ ಎಂದು ಮನವಿ ಮಾಡುತ್ತೇನೆ.

ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದಂತೆ ಭಾರತ ಮಾತ್ರವಲ್ಲದೇ ಪಾಕಿಸ್ತಾನದಲ್ಲಿ ಪರ ಮತ್ತು ವಿರೋಧದ ಚರ್ಚೆಗಳು ನಡೆಯುತ್ತಿವೆ.

ಇನ್ನು ಪಾಕಿಸ್ತಾನದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಈರುಳ್ಳಿ 220ರೂಗೆ, ಪೆಟ್ರೋಲ್ 280ರೂ, ಚಿಕನ್ ಬೆಲೆ 385 ರೂಗೆ ಏರಿಕೆಯಾಗಿದೆ. ಗೋದಿ ಹಿಟ್ಟಿನ ಬೆಲೆ ಕೂಡ ಗಗನಕ್ಕೇರಿದ್ದು, ಗೋದಿ-ಮೈದಾ ಹಿಟ್ಟಿನ ಅಭಾವ ಪಾಕ್ ಪ್ರಜೆಗಳನ್ನು ಹೈರಾಣಾಗಿಸಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!