ವೊಲೊಡಿಮಿರ್ ಝೆಲೆನ್‌ಸ್ಕಿ 
ವಿದೇಶ

ದಕ್ಷಿಣ ಕೊರಿಯಾದ ಮಿಲಿಟರಿ ಬೆಂಬಲ ಉಕ್ರೇನ್‌ಗೆ ಧನಾತ್ಮಕವಾಗಿರುತ್ತದೆ: ವೊಲೊಡಿಮಿರ್ ಝೆಲೆನ್‌ಸ್ಕಿ 

ದಕ್ಷಿಣ ಕೊರಿಯಾದ ಮಿಲಿಟರಿ ಬೆಂಬಲವು ರಷ್ಯಾ ವಿರುದ್ಧದ ಯುದ್ಧದಲ್ಲಿ ತನ್ನ ದೇಶಕ್ಕೆ ಧನಾತ್ಮಕವಾಗಿರುತ್ತದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಹೇಳಿದ್ದಾರೆ. ಸಹಾಯ ಮಾಡಲು ಕೊರಿಯಾ ಒಂದು ಮಾರ್ಗವನ್ನು ಕಂಡುಕೊಳ್ಳುತ್ತದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಸಿಯೋಲ್: ದಕ್ಷಿಣ ಕೊರಿಯಾದ ಮಿಲಿಟರಿ ಬೆಂಬಲವು ರಷ್ಯಾ ವಿರುದ್ಧದ ಯುದ್ಧದಲ್ಲಿ ತನ್ನ ದೇಶಕ್ಕೆ ಧನಾತ್ಮಕವಾಗಿರುತ್ತದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಹೇಳಿದ್ದಾರೆ. ಸಹಾಯ ಮಾಡಲು ಕೊರಿಯಾ ಒಂದು ಮಾರ್ಗವನ್ನು ಕಂಡುಕೊಳ್ಳುತ್ತದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಉತ್ತರ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಶನ್ ಸೆಕ್ರೆಟರಿ ಜನರಲ್ ಜೆನ್ಸ್ ಸ್ಟೋಲ್ಟೆನ್‌ಬರ್ಗ್ ಅವರು ಯುದ್ಧ ಪೀಡಿತ ದೇಶಕ್ಕೆ ಮಿಲಿಟರಿ ನೆರವು ನೀಡುವಂತೆ ದಕ್ಷಿಣ ಕೊರಿಯಾಗೆ ಮಾಡಿದ ಕರೆಗೆ ಪ್ರತಿಕ್ರಿಯೆಯಾಗಿ, ಉಕ್ರೇನ್‌ ಮೇಲೆ ರಷ್ಯಾದ ಆಕ್ರಮಣದ ಮೊದಲ ವಾರ್ಷಿಕೋತ್ಸವದ ಅಂಗವಾಗಿ ಕೀವ್‌ನಲ್ಲಿ ಮಾಡಿದ ಭಾಷಣದಲ್ಲಿ ಝೆಲೆನ್‌ಸ್ಕಿ ಈ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಸುದ್ದಿ ವರದಿಯೊಂದು ತಿಳಿಸಿದೆ. 

'ನಮಗೆ ಶಸ್ತ್ರಾಸ್ತ್ರಗಳನ್ನು ಒದಗಿಸಿದರೆ ನಾವು ಸಕಾರಾತ್ಮಕವಾಗಿ ಕಾಣುತ್ತೇವೆ. ಈ ಸಂದರ್ಭದಲ್ಲಿ ಉಕ್ರೇನ್‌ಗೆ ಸಹಾಯ ಮಾಡಲು ಕೊಲಿಯಾ ಯಾವುದಾದರೊಂದು ಅವಕಾಶವನ್ನು ಕಂಡುಕೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ' ಎಂದು ಎಂದು ಝೆಲೆನ್‌ಸ್ಕಿ ತಿಳಿಸಿದ್ದಾರೆ.

ಈ ವಿಚಾರವಾಗಿ ದಕ್ಷಿಣ ಕೊರಿಯಾದ ಬಗ್ಗೆ ಇತರ ದೇಶಗಳೊಂದಿಗೆ 'ವಿವರಗಳನ್ನು ಚರ್ಚಿಸಲಾಗುತ್ತಿದೆ'. ದಕ್ಷಿಣ ಕೊರಿಯಾದೊಂದಿಗಿನ ದ್ವಿಪಕ್ಷೀಯ ಸಂಬಂಧಗಳು 'ಬಹಳ ಮುಖ್ಯ' ಮತ್ತು ಮತ್ತಷ್ಟು ಅಭಿವೃದ್ಧಿ ಹೊಂದಬೇಕು ಎಂದು ಹೇಳಿದ್ದಾಗಿ ಯೋನ್ಹಾಪ್ (Yonhap) ನ್ಯೂಸ್ ಏಜೆನ್ಸಿ ಯುಕ್ರಿನ್ಫಾರ್ಮ್ (Ukrinform) ಅನ್ನು ಉಲ್ಲೇಖಿಸಿ ವರದಿ ಮಾಡಿದೆ.

ಸ್ಟೋಲ್ಟೆನ್‌ಬರ್ಗ್ ಜನವರಿ ಅಂತ್ಯದಲ್ಲಿ ಸಿಯೋಲ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ವೇದಿಕೆಯೊಂದರಲ್ಲಿ ದಕ್ಷಿಣ ಕೊರಿಯಾ 'ಮಿಲಿಟರಿ ಬೆಂಬಲದ ನಿರ್ದಿಷ್ಟ ವಿಷಯದ ಮೇಲೆ ಗಮನ ಹರಿಸಬೇಕು' ಎಂದು ಹೇಳಿದ್ದರು.

ದಕ್ಷಿಣ ಕೊರಿಯಾ ಉಕ್ರೇನ್‌ಗೆ ಮಾನವೀಯ ನೆರವು ಮತ್ತು ಇತರ ಮಿಲಿಟರಿಯೇತರ ಬೆಂಬಲವನ್ನು ಮಾತ್ರ ನೀಡಿದೆ. ಸಂಘರ್ಷದಲ್ಲಿ ತೊಡಗಿರುವ ದೇಶಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಸುವುದಿಲ್ಲ ಎಂಬ ತನ್ನ ನಿಲುವನ್ನು ಉಲ್ಲೇಖಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT