ಚರಣಿಯಾ ಮತ್ತು ಧೈರ್ಯವನ್ 
ವಿದೇಶ

NASAಗೆ ಚರಣಿಯಾ, ಟೋಲ್ ರೋಡ್ ಅಥಾರಿಟಿಗೆ ಧೈರ್ಯವನ್; ಭಾರತ ಮೂಲದವರಿಗೆ ಅಮೆರಿಕ ಸರ್ಕಾರದಲ್ಲಿ ಉನ್ನತ ಹುದ್ದೆ!

ಭಾರತೀಯ ಮೂಲದ ಇಬ್ಬರು ವ್ಯಕ್ತಿಗಳಿಗೆ ಅಮೆರಿಕದಲ್ಲಿ ಉನ್ನತ ಹುದ್ದೆ ನೀಡಲಾಗಿದ್ದು, NASAಗೆ ಚರಣಿಯಾ ಮತ್ತು ಟೋಲ್ ರೋಡ್ ಅಥಾರಿಟಿಗೆ ಧೈರ್ಯವನ್ ಅವರನ್ನು ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ.

ವಾಷಿಂಗ್ಟನ್: ಭಾರತೀಯ ಮೂಲದ ಇಬ್ಬರು ವ್ಯಕ್ತಿಗಳಿಗೆ ಅಮೆರಿಕದಲ್ಲಿ ಉನ್ನತ ಹುದ್ದೆ ನೀಡಲಾಗಿದ್ದು, NASAಗೆ ಚರಣಿಯಾ ಮತ್ತು ಟೋಲ್ ರೋಡ್ ಅಥಾರಿಟಿಗೆ ಧೈರ್ಯವನ್ ಅವರನ್ನು ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ.

ಹೌದು.. ಅಮೆರಿಕ ಬಾಹ್ಯಾಕಾಶ ಕೈಗಾರಿಕಾ ತಜ್ಞ ಎ.ಸಿ. ಚರಣಿಯಾ ಅವರನ್ನು NASAದ ಮುಖ್ಯ ತಾಂತ್ರಿಕ ತಜ್ಞರಾಗಿ ನೇಮಕ ಮಾಡಲಾಗಿದ್ದು, ಇವರು ನಾಸಾ ಮುಖ್ಯ  ಕಚೇರಿಯಲ್ಲಿ ಆಡಳಿತಾಧಿಕಾರಿ ಬಿಲ್ ನೆಲ್ಸನ್ ಅವರಿಗೆ ತಾಂತ್ರಿಕ ನೀತಿ ಮತ್ತು ಕಾರ್ಯಕ್ರಮಗಳಿಗೆ ಪ್ರಧಾನ ಸಲಹೆಗಾರರಾಗಿ ಸೇವೆ ಸಲ್ಲಿಸಲಿದ್ದಾರೆ.

‘ನಾಸಾ ಯೋಜನೆಯಲ್ಲಿ ತಂತ್ರಜ್ಞಾನ ಪ್ರಮುಖ ಪಾತ್ರ ವಹಿಸುತ್ತದೆ. ಚರಣಿಯಾ ಅವರು ವೇಗವಾಗಿ ಬದಲಾಗುತ್ತಿರುವ ತಂತ್ರಜ್ಞಾನವನ್ನು ನಿಭಾಯಿಸುವ ಪರಿಣತಿ ಹೊಂದಿರುವ ಅನುಭವಿ ನಾಯಕ’ ಎಂದು ನಾಸಾದ ತಂತ್ರಜ್ಞಾನ, ನೀತಿ ಮತ್ತು ಕಾರ್ಯತಂತ್ರ ಕುರಿತ ಸಹ ವ್ಯವಸ್ಥಾಪಕಿ ಭವ್ಯ ಲಾಲ್‌ ತಿಳಿಸಿದ್ದಾರೆ.

ಇನ್ನು  ಫೋರ್ಟ್ ಬೆಂಡ್ ಟೋಲ್ ರೋಡ್ ಅಥಾರಿಟಿ ಮತ್ತು ಗ್ರ್ಯಾಂಡ್ ಪಾರ್ಕ್‌ವೇ ಟೋಲ್ ರೋಡ್ ಪ್ರಾಧಿಕಾರದ ನಿರ್ದೇಶಕರ ಮಂಡಳಿಗೆ ಭಾರತೀಯ ಮೂಲದ ಸ್ವಪನ್ ಧೈರ್ಯವನ್ ಅವರನ್ನು ನೇಮಕ ಮಾಡಲಾಗಿದೆ. ಸ್ವಪನ್ ಧೈರ್ಯವನ್, (57 ವರ್ಷ), ಅವರ ಹಿನ್ನೆಲೆ, ಸಮುದಾಯದ ಪ್ರಭಾವ ಮತ್ತು ಆರ್ಥಿಕ ಪರಿಣತಿಯ ಆಧಾರದ ಮೇಲೆ ಕಳೆದ ವಾರ ನೇಮಕಗೊಂಡಿದ್ದಾರೆ. 

"ಗ್ರ್ಯಾಂಡ್ ಪಾರ್ಕ್‌ವೇ ಟೋಲ್‌ವೇ ಬೋರ್ಡ್ ಆಫ್ ಡೈರೆಕ್ಟರ್ಸ್‌ಗೆ ಧೈರ್ಯವಾನ್ ಅವರನ್ನು ನೇಮಿಸಲು ನನಗೆ ಹೆಮ್ಮೆಯಾಗುತ್ತಿದೆ" ಎಂದು ಕಮಿಷನರ್ ಆಂಡಿ ಮೇಯರ್ಸ್ ಹೇಳಿದ್ದಾರೆ. "ಧೈರ್ಯವನ್ ಅವರು ಸರ್ಟಿಫೈಡ್ ಪಬ್ಲಿಕ್ ಅಕೌಂಟೆಂಟ್ ಆಗಿದ್ದು, ಜನರ ಹಣದ ಉತ್ತಮ ಮೇಲ್ವಿಚಾರಕರಾಗುವುದರ ಮಹತ್ವವನ್ನು ಅರ್ಥಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT