ವಿಮಾನ ಪತನಗೊಂಡ ಸ್ಥಳದಲ್ಲಿ ಜಮಾಯಿಸಿರುವ ರಕ್ಷಣಾ ತಂಡ ಮತ್ತು ಜನರು 
ವಿದೇಶ

72 ಜನರಿದ್ದ ವಿಮಾನ ನೇಪಾಳದಲ್ಲಿ ಪತನ, 32 ಮಂದಿ ಸಾವು: ಯೇತಿ ವಿಮಾನಯಾನ ಸಂಸ್ಥೆ

72 ಜನರಿದ್ದ ವಿಮಾನ ಭಾನುವಾರ ನೇಪಾಳದ ಪೋಖರಾ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಪತನಗೊಂಡಿದ್ದು, 32 ಮಂದಿ ಸಾವಿಗೀಡಾಗಿದ್ದಾರೆ ಎಂದು ಯೇತಿ ವಿಮಾನಯಾನ ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.

ಕಾಠ್ಮಂಡು: 72 ಜನರಿದ್ದ ವಿಮಾನ ಭಾನುವಾರ ನೇಪಾಳದ ಪೋಖರಾ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಪತನಗೊಂಡಿದ್ದು, 32 ಮಂದಿ ಸಾವಿಗೀಡಾಗಿದ್ದಾರೆ ಎಂದು ಯೇತಿ ವಿಮಾನಯಾನ ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.

ವಿಮಾನದಲ್ಲಿ 68 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿ ಇದ್ದರು. ಸದ್ಯ ರಕ್ಷಣಾ ಕಾರ್ಯ ನಡೆಯುತ್ತಿದೆ. ಎಷ್ಟು ಮಂದಿ ಸಾವಿಗೀಡಾಗಿದ್ದಾರೆ ಅಥವಾ ಬದುಕುಳಿದಿದ್ದಾರೆ ಎಂಬ ಬಗ್ಗೆ ನಮಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ ಎಂದು ಸುದರ್ಶನ್ ಬರ್ತೌಲಾ ಸುದ್ದಿಸಂಸ್ಥೆ ಎಎಫ್‌ಪಿಗೆ ತಿಳಿಸಿದರು.

ನೇಪಾಳದ ನಾಗರಿಕ ವಿಮಾನಯಾನ ಪ್ರಾಧಿಕಾರ (CAAN) ಪ್ರಕಾರ, ಯೇತಿ ಏರ್‌ಲೈನ್ಸ್‌ನ 9N-ANC ATR-72 ವಿಮಾನವು ಕಠ್ಮಂಡುವಿನಿಂದ ಬೆಳಿಗ್ಗೆ 10.33ಕ್ಕೆ ಹೊರಟಿತ್ತು. ಬಳಿಕ ಪೋಖರಾ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ, ಹಳೆಯ ವಿಮಾನ ನಿಲ್ದಾಣ ಮತ್ತು ಹೊಸ ವಿಮಾನ ನಿಲ್ದಾಣದ ನಡುವಿನ ಸೇಟಿ ನದಿಯ ದಡದಲ್ಲಿ ಪತನಗೊಂಡಿದೆ.

ವಿಮಾನ ಅವಶೇಷಗಳು ಬೆಂಕಿಗಾಹುತಿಯಾಗಿದ್ದು, ರಕ್ಷಣಾ ತಂಡ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಸ್ಥಳೀಯ ಅಧಿಕಾರಿ ಗುರುದತ್ತ ಧಾಕಲ್ ತಿಳಿಸಿದ್ದಾರೆ.

ರಕ್ಷಣಾ ತಂಡಗಳು ಈಗಾಗಲೇ ಸ್ಥಳಕ್ಕೆ ತಲುಪಿದ್ದು, ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿದ್ದಾರೆ. ಎಲ್ಲಾ ರಕ್ಷಣಾ ತಂಡಗಳು ಮೊದಲು ಬೆಂಕಿಯನ್ನು ನಂದಿಸಲು ಮತ್ತು ಪ್ರಯಾಣಿಕರನ್ನು ರಕ್ಷಿಸಲು ಗಮನಹರಿಸಿವೆ ಎಂದು ಧಾಕಲ್ ಹೇಳಿದರು.

ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಅಪಘಾತದ ವಿವರಗಳು ಇನ್ನಷ್ಟೇ ಬರಬೇಕಿದೆ. ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪೋಸ್ಟ್ ಮಾಡಲಾದ ಚಿತ್ರಗಳು ಮತ್ತು ವಿಡಿಯೋಗಳಲ್ಲಿ ಪತನದಿಂದಾಗಿ ಏಳುತ್ತಿರುವ ಹೊಗೆಯನ್ನು ತೋರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT