ವಿಕ್ಟೋರಿಯಾದ ಕ್ಯಾರಮ್ ಡೌನ್ಸ್‌ನಲ್ಲಿರುವ ಶಿವ ವಿಷ್ಣು ದೇವಾಲಯದ ಫೋಟೋ 
ವಿದೇಶ

5 ದಿನಗಳಲ್ಲಿ ಆಸ್ಟ್ರೇಲಿಯಾದಲ್ಲಿ ಮತ್ತೊಂದು ಹಿಂದೂ ದೇವಾಲಯ ಧ್ವಂಸ: ಖಲಿಸ್ತಾನಿ ಬೆಂಬಲಿಗರ ಕುಕೃತ್ಯ

ಆಸ್ಟ್ರೇಲಿಯಾದಲ್ಲಿ ಮತ್ತೊಂದು ಹಿಂದೂ ದೇವಾಲಯವನ್ನು ಧ್ವಂಸ ಮಾಡಲಾಗಿದೆ. "ಖಾಲಿಸ್ತಾನಿ ಬೆಂಬಲಿಗರು" ಭಾರತ ವಿರೋಧಿ ಗೀಚುಬರಹಗಳನ್ನು ಬರೆದು ಆಸ್ಟ್ರೇಲಿಯಾದ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ, ಒಂದು ವಾರದೊಳಗೆ ವಿಕ್ಟೋರಿಯಾ ರಾಜ್ಯದ ದೇವಾಲಯದ ಮೇಲೆ ಇದು ಎರಡನೇ ದಾಳಿಯಾಗಿದೆ. 

ಮೆಲ್ಬೋರ್ನ್: ಆಸ್ಟ್ರೇಲಿಯಾದಲ್ಲಿ ಮತ್ತೊಂದು ಹಿಂದೂ ದೇವಾಲಯವನ್ನು ಧ್ವಂಸ ಮಾಡಲಾಗಿದೆ. "ಖಾಲಿಸ್ತಾನಿ ಬೆಂಬಲಿಗರು" ಭಾರತ ವಿರೋಧಿ ಗೀಚುಬರಹಗಳನ್ನು ಬರೆದು ಆಸ್ಟ್ರೇಲಿಯಾದ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ, ಒಂದು ವಾರದೊಳಗೆ ವಿಕ್ಟೋರಿಯಾ ರಾಜ್ಯದ ದೇವಾಲಯದ ಮೇಲೆ ಇದು ಎರಡನೇ ದಾಳಿಯಾಗಿದೆ. 

ವಿಕ್ಟೋರಿಯಾದ ಕ್ಯಾರಮ್ ಡೌನ್ಸ್‌ನಲ್ಲಿರುವ ಐತಿಹಾಸಿಕ ಶಿವ ವಿಷ್ಣು ದೇವಾಲಯವನ್ನು ಧ್ವಂಸ ಮಾಡಲಾಗಿದೆ ಎಂದು ಆಸ್ಟ್ರೇಲಿಯಾ ಟುಡೇ ವೆಬ್‌ಸೈಟ್ ವರದಿ ಮಾಡಿದೆ. ತಮಿಳು ಹಿಂದೂ ಸಮುದಾಯದಿಂದ ಮೂರು ದಿನಗಳ ಕಾಲ ನಡೆಯುವ 'ತೈ ಪೊಂಗಲ್' ಹಬ್ಬವನ್ನು ಭಕ್ತರು 'ದರ್ಶನ'ಕ್ಕೆಂದು ಬಂದಾಗ ಈ ವಿಧ್ವಂಸಕ ಕೃತ್ಯ ಗಮನಕ್ಕೆ ಬಂದಿದೆ.

ಶಿವ ವಿಷ್ಣು ದೇವಾಲಯದ ದೀರ್ಘಕಾಲದ ಭಕ್ತೆ ಉಷಾ ಸೆಂಥಿಲ್ನಾಥನ್, "ನಾವು ಆಸ್ಟ್ರೇಲಿಯಾದಲ್ಲಿ ತಮಿಳು ಅಲ್ಪಸಂಖ್ಯಾತ ಗುಂಪುಗಳಾಗಿಬಿಟ್ಟಿದ್ದೇವೆ. ಇಲ್ಲಿ ಧಾರ್ಮಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಬಹಳಷ್ಟು ಕಷ್ಟವಾಗುತ್ತಿದೆ ಎಂದರು. 

ಇಲ್ಲಿಗೆ ನಾವು ಪ್ರಾರ್ಥನೆ ಸಲ್ಲಿಸಲು, ಪೂಜೆ ಮಾಡಲು ಬರುತ್ತೇವೆ. ಖಲಿಸ್ತಾನ್ ಬೆಂಬಲಿಗರು ಯಾವುದೇ ಭಯವಿಲ್ಲದೆ ತಮ್ಮ ದ್ವೇಷದ ಸಂದೇಶಗಳ ಮೂಲಕ ಅದನ್ನು ಧ್ವಂಸಗೊಳಿಸುತ್ತಿದ್ದಾರೆ. ವಿಕ್ಟೋರಿಯನ್ನು ಹೆದರಿಸಲು ಪ್ರಯತ್ನಿಸುತ್ತಿರುವ ಈ ಗೂಂಡಾಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನಾನು ಪ್ರೀಮಿಯರ್ ಡಾನ್ ಆಂಡ್ರ್ಯೂಸ್ ಮತ್ತು ವಿಕ್ಟೋರಿಯಾ ಪೊಲೀಸರನ್ನು ಒತ್ತಾಯಿಸುತ್ತೇನೆ ಎಂದು ಇಲ್ಲಿನ ಹಿಂದೂ ಸಮುದಾಯದ ಪ್ರತಿನಿಧಿ ಮಹಿಳೆಯೊಬ್ಬರು ಹೇಳುತ್ತಾರೆ. 

ಹಿಂದೂ ಕೌನ್ಸಿಲ್ ಆಫ್ ಆಸ್ಟ್ರೇಲಿಯಾದ ವಿಕ್ಟೋರಿಯಾ ಅಧ್ಯಾಯದ ಅಧ್ಯಕ್ಷ ಮಕರಂದ್ ಭಾಗವತ್, "ಖಾಲಿಸ್ತಾನ್ ಪ್ರಚಾರಕ್ಕಾಗಿ ಎರಡನೇ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಲಾಗಿದೆ. ನಮ್ಮ ದೇವಾಲಯಗಳ ವಿಧ್ವಂಸಕತೆಯು ಶೋಚನೀಯವಾಗಿದೆ, ಇದನ್ನು ಹಿಂದೂ ಸಮಾಜ ಸಹಿಸಿಕೊಳ್ಳಬಾರದು ಎಂದಿದ್ದಾರೆ. 

ಮೆಲ್ಬೋರ್ನ್ ಹಿಂದೂ ಸಮುದಾಯದ ಸದಸ್ಯ ಸಚಿನ್ ಮಹಾತೆ, ಖಲಿಸ್ತಾನ್ ಬೆಂಬಲಿಗರಿಗೆ ಧೈರ್ಯವಿದ್ದರೆ ಅವರು ಶಾಂತಿಯುತ ಹಿಂದೂ ಸಮುದಾಯಗಳ ಧಾರ್ಮಿಕ ಸ್ಥಳಗಳನ್ನು ಗುರಿಯಾಗಿಸುವ ಬದಲು ವಿಕ್ಟೋರಿಯನ್ ಸಂಸತ್ತಿನ ಕಟ್ಟಡದ ಮೇಲೆ ಗೀಚುಬರಹ ಬರೆಯಲಿ ನೋಡೋಣ ಎಂದಿದ್ದಾರೆ. 

ಮೊನ್ನೆ ಜನವರಿ 12 ರಂದು, ಮೆಲ್ಬೋರ್ನ್‌ನಲ್ಲಿರುವ ಸ್ವಾಮಿನಾರಾಯಣ ದೇವಸ್ಥಾನವನ್ನು ಭಾರತ ವಿರೋಧಿ ಗೀಚುಬರಹದೊಂದಿಗೆ 'ಸಮಾಜ ವಿರೋಧಿಗಳು' ಧ್ವಂಸಗೊಳಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೋಲ್ಕತ್ತಾದಲ್ಲಿ ಭೀಕರ ದುರಂತ: ನಿರ್ಮಾಣ ಹಂತದ ಗೋದಾಮು ಕುಸಿದು 5 ಕಾರ್ಮಿಕರ ಸಾವು, 20 ಮಂದಿ ರಕ್ಷಣೆ; TMC ಅವಧಿಯ ಯೋಜನೆಗಳಿಗೆ CM ಸುವೇಂದು ಬ್ರೇಕ್..!

ಇರಾನ್ ಸಂಘರ್ಷಕ್ಕೆ $70 ಬಿಲಿಯನ್ ತುರ್ತು ನಿಧಿ ಕೋರಿದ ಅಮೆರಿಕಾ: ಟ್ರಂಪ್ ವಿರುದ್ಧ ಸಿಡಿದೆದ್ದ Republican senator, ಸ್ವಪಕ್ಷದಲ್ಲೇ ಭಿನ್ನಮತ ಸ್ಫೋಟ..!

Passport ಪೌರತ್ವದ ಪ್ರಮಾಣಪತ್ರವಲ್ಲ, Travel document ಅಷ್ಟೇ: MEA ಸ್ಪಷ್ಟನೆ, ಹೊಸ ಚರ್ಚೆಗೆ ನಾಂದಿ..!

ಭೂಕಂಪದ ರೌದ್ರನರ್ತನಕ್ಕೆ Venezuela ತತ್ತರ; Caracasನಲ್ಲಿ ಧರೆಗುರುಳಿದ ಕಟ್ಟಡಗಳು, ಸುನಾಮಿ ಎಚ್ಚರಿಕೆ..!

X ಖಾತೆ ನಿರ್ಬಂಧ ವಿವಾದ: ನಮ್ಮನ್ನು ಭಯೋತ್ಪಾದಕರು ಎನ್ನುತ್ತೀರಾ? ನಾಚಿಕೆಯಾಗುವುದಿಲ್ಲವೇ ನಿಮಗೆ?; ಕೇಂದ್ರದ ವಿರುದ್ಧ Cockroach Janta Party ಕಿಡಿ..!