ನೇತಾಜಿ ಪ್ರತಿಮೆಗೆ ನಮಸ್ಕರಿಸುತ್ತಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ 
ವಿದೇಶ

ಮಲೇಷ್ಯಾದಲ್ಲಿ 'ನೇತಾಜಿ' ಪ್ರತಿಮೆ ಅನಾವರಣಗೊಳಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಮಲೇಷ್ಯಾಕ್ಕೆ ಮೂರು ದಿನಗಳ ಭೇಟಿ ನೀಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಂದು ಕೌಲಾಲಂಪುರದಲ್ಲಿ  ಭಾರತೀಯ ರಾಷ್ಟ್ರೀಯ ಸೇನೆ ಯೋಧರ ಸಮ್ಮುಖದಲ್ಲಿ  ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು.

ಕೌಲಾಲಂಪುರ: ಮಲೇಷ್ಯಾಕ್ಕೆ ಮೂರು ದಿನಗಳ ಭೇಟಿ ನೀಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಂದು ಕೌಲಾಲಂಪುರದಲ್ಲಿ  ಭಾರತೀಯ ರಾಷ್ಟ್ರೀಯ ಸೇನೆ ಯೋಧರ ಸಮ್ಮುಖದಲ್ಲಿ  ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರಬೋಸ್ ಶೌರ್ಯ, ನಾಯಕತ್ವ ಮತ್ತು ದೇಶಭಕ್ತಿಯ ಸಂಕೇತ ಎಂದು ಬಣ್ಣಿಸಿದರು.

ಈ ಕುರಿತ  ಚಿತ್ರಗಳನ್ನು ಟ್ವೀಟ್ ಮಾಡಿರುವ ರಾಜನಾಥ್ ಸಿಂಗ್, ನೇತಾಜಿ ಮತ್ತು ಐಎನ್‌ಎ ಮಲೇಷ್ಯಾದಲ್ಲಿ ಪ್ರಮುಖ ಪರಂಪರೆಯನ್ನು ಹೊಂದಿದೆ. ಶೌರ್ಯ, ದೇಶಭಕ್ತಿಯ ಪ್ರತೀಕವಾದ ಸುಭಾಷ್ ಚಂದ್ರ ಬೋಸ್ ಅವರು ಭಾರತ ಮತ್ತು ಮಲೇಷ್ಯಾದಲ್ಲಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತಲೇ ಇದ್ದಾರೆ ಎಂದಿದ್ದಾರೆ. 

ಇದೇ ವೇಳೆ ಬರ್ಮಾ ಗಡಿಯಲ್ಲಿ ಸುಭಾಷ್ ಚಂದ್ರ ಬೋಸ್ ಜೊತೆಗೆ ಹೋರಾಡಿದ್ದ 99 ವರ್ಷದ ಹಿರಿಯ ಎಐಎನ್ ಎ ಹೋರಾಟಗಾರ ಎರಡನೇ ಲೆಫ್ಟಿನೆಂಟ್  ಸುಂದರಮ್ ಅವರನ್ನು ರಾಜನಾಥ್ ಸಿಂಗ್ ಸನ್ಮಾನಿಸಿದ್ದಾರೆ. ರಾಜನಾಥ್ ಸಿಂಗ್ ಮಲೇಷ್ಯಾದ ರಕ್ಷಣಾ ಸಚಿವ ಮೊಹಮದ್ ಹಸನ್ ಅವರೊಂದಿಗೆ ರಕ್ಷಣೆ ಮತ್ತು ಕಾರ್ಯತಂತ್ರದ ಪಾಲುದಾರಿಕೆ ವಿಸ್ತರಣೆಯತ್ತ ವ್ಯಾಪಕ ಮಾತುಕತೆಯನ್ನು ನಡೆಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kogilu layout Demolition: ಮಾನವೀಯತೆ ನೆಲೆಯಲ್ಲಿ ಅರ್ಹ ಸಂತ್ರಸ್ತರಿಗೆ ಸೂರು ಕಲ್ಪಿಸಿಕೊಡಲಾಗುವುದು; ಸಿಎಂ ಸಿದ್ದರಾಮಯ್ಯ

ರಾಜ್ಯಾದ್ಯಂತ ವೈಕುಂಠ ಏಕಾದಶಿ ಸಂಭ್ರಮ: ತಿಮ್ಮಪ್ಪನ ದರ್ಶನಕ್ಕೆ ದೇವಸ್ಥಾನಗಳಲ್ಲಿ ಭಕ್ತ ಸಾಗರ; ಹಲವೆಡೆ ವಾಹನ ಸಂಚಾರ ನಿರ್ಬಂಧ

ತೀವ್ರ ಚಳಿ ಎಂದು ಕ್ಯಾಬ್ ನಲ್ಲೇ ಮಲಗಿದ ಚಾಲಕ, ಅಲ್ಲೇ ಸಾವು.. ಕಾರಣ ಏನು ಗೊತ್ತಾ?

ಕ್ಷಮಿಸುಬಿಡು ಅಮ್ಮಾ...: ನಟಿ ನಂದಿನಿ ಆತ್ಮಹತ್ಯೆ; ಡೆತ್‌ ನೋಟ್‌ ಸೀಕ್ರೆಟ್‌ ಬಹಿರಂಗ!

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿಯಾಗಿದ್ದ ಖಲೀದಾ ಜಿಯಾ ನಿಧನ

SCROLL FOR NEXT