ಯುರೋಪ್ ಸಂಸತ್ 
ವಿದೇಶ

ಮಣಿಪುರದ ವಿಷಯವಾಗಿ ಯುರೋಪ್ ಸಂಸತ್ ನಲ್ಲಿ ನಿರ್ಣಯ!

ಸ್ಟ್ರಾಸ್​ಬೌರ್ಗ್ ನ ಫ್ರೆಂಚ್ ಟೌನ್ ನಲ್ಲಿರುವ ಯುರೋಪಿಯನ್ ಸಂಸತ್ ಮಣಿಪುರದ ವಿಷಯವಾಗಿ ನಿರ್ಣಯ ಕೈಗೊಂಡಿದ್ದು, ಹಿಂಸಾಚಾರವನ್ನು ತಡೆದು ಧಾರ್ಮಿಕ ಅಲ್ಪಸಂಖ್ಯಾತರನ್ನು ರಕ್ಷಿಸುವಂತೆ ಭಾರತ ಸರ್ಕಾರಕ್ಕೆ ಕರೆ ನೀಡಿದೆ.

ನವದೆಹಲಿ: ಸ್ಟ್ರಾಸ್​ಬೌರ್ಗ್ ನ ಫ್ರೆಂಚ್ ಟೌನ್ ನಲ್ಲಿರುವ ಯುರೋಪಿಯನ್ ಸಂಸತ್ ಮಣಿಪುರದ ವಿಷಯವಾಗಿ ನಿರ್ಣಯ ಕೈಗೊಂಡಿದ್ದು, ಹಿಂಸಾಚಾರವನ್ನು ತಡೆದು ಧಾರ್ಮಿಕ ಅಲ್ಪಸಂಖ್ಯಾತರನ್ನು ರಕ್ಷಿಸುವಂತೆ ಭಾರತ ಸರ್ಕಾರಕ್ಕೆ ಕರೆ ನೀಡಿದೆ.

ಚರ್ಚೆಯ ನಂತರ ನಿರ್ಣಯ ಕೈಗೊಳ್ಳಲಾಗಿದೆ. ಇದಕ್ಕೂ ಮುನ್ನ ಮಣಿಪುರದ ವಿಷಯವಾಗಿ ಮಾತನಾಡಿದ್ದ ಭಾರತದ ವಿದೇಶಾಂಗ ಕಾರ್ಯದರ್ಶಿ ಮಣಿಪುರದ ವಿಷಯ ಭಾರತದ ಆಂತರಿಕ ವಿಷಯವಾಗಿದ್ದು, ಮಧ್ಯಪ್ರವೇಶದ ಅಗತ್ಯವಿಲ್ಲ ಎಂಬುದನ್ನು ಯುರೋಪಿಯನ್ ಸಂಸತ್ ಗೆ ಸ್ಪಷ್ಟವಾಗಿ ಮನವರಿಕೆ ಮಾಡಿಕೊಟ್ಟಿದ್ದಾಗಿ ಹೇಳಿದ್ದರು.

ಗಲಭೆಗಳು ಹೆಚ್ಚುವುದನ್ನು ತಡೆಗಟ್ಟಬೇಕು, ಮಣಿಪುರಕ್ಕೆ ಪತ್ರಕರ್ತರಿಗೆ, ಅಂತಾರಾಷ್ಟ್ರೀಯ ವೀಕ್ಷಕರಿಗೆ ಮುಕ್ತ ಪ್ರವೇಶ ಕಲ್ಪಿಸಬೇಕು, ಅಂತರ್ಜಾಲ ಸ್ಥಗಿತವನ್ನು ತೆಗೆಯಬೇಕೆಂದು ಯುರೋಪ್ ಸಂಸತ್ ತನ್ನ ನಿರ್ಣಯದ ಮೂಲಕ ಭಾರತ ಸರ್ಕಾರವನ್ನು ಕೇಳಿಕೊಂಡಿದೆ.

ಇದಷ್ಟೇ ಅಲ್ಲದೇ ಯುಎನ್ ನ ಸಾರ್ವತ್ರಿಕ ಯುರೋಪಿಯನ್ ಸಂಸತ್ ಸೇನಾಪಡೆಗಳ ವಿಶೇಷ ಕಾಯ್ದೆಯನ್ನು ರದ್ದುಗೊಳಿಸಬೇಕು ನಿಯತಕಾಲಿಕ ವಿಮರ್ಶೆ ಶಿಫಾರಸುಗಳ ಆಧಾರದಲ್ಲಿ ರದ್ದುಗೊಳಿಸಬೇಕೆಂದು ಸರ್ಕಾರಕ್ಕೆ ಇಪಿ ಸಲಹೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT