ಬುರ್ಜ್ ಖಲೀಫಾ ಕಟ್ಟಡವನ್ನು ತ್ರಿವರ್ಣ ಧ್ವಜವನ್ನು ಅಲಂಕರಿಸಿರುವುದು 
ವಿದೇಶ

ಪ್ರಧಾನಿ ಮೋದಿ ಭೇಟಿ: ದುಬೈನ ಬುರ್ಜ್ ಖಲೀಫಾ ಕಟ್ಟಡಕ್ಕೆ ಭಾರತದ ತ್ರಿವರ್ಣ ಧ್ವಜ ಬಣ್ಣಗಳಿಂದ ಅಲಂಕಾರ

ಫ್ರಾನ್ಸ್ ಪ್ರವಾಸ ಮುಗಿಸಿಕೊಂಡು ಗಲ್ಫ್ ರಾಷ್ಟ್ರ ಯುನೈಟೆಡ್ ಅರಬ್ ಎಮಿರೇಟ್ಸ್ ಗೆ ಬಂದಿಳಿದ ಪ್ರಧಾನಿ ಮೋದಿಯವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಭೂತಪೂರ್ವ ಸ್ವಾಗತ ದೊರೆಯಿತು. ಅಬು ಧಾಬಿಯ ಖ್ಯಾತ ಬುರ್ಜ್ ಖಲೀಫಾವನ್ನು ಪ್ರಧಾನಿ ಮೋದಿ ಆಗಮನ ಹಿನ್ನೆಲೆಯಲ್ಲಿ ಭಾರತದ ತ್ರಿವರ್ಣ ಧ್ವಜಗಳ ಬಣ್ಣದ ದೀಪಗಳಿಂದ ಅಲಂಕರಿಸಲಾಗಿತ್ತು.

ದುಬೈ: ಫ್ರಾನ್ಸ್ ಪ್ರವಾಸ ಮುಗಿಸಿಕೊಂಡು ಗಲ್ಫ್ ರಾಷ್ಟ್ರ ಯುನೈಟೆಡ್ ಅರಬ್ ಎಮಿರೇಟ್ಸ್ ಗೆ ಬಂದಿಳಿದ ಪ್ರಧಾನಿ ಮೋದಿಯವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಭೂತಪೂರ್ವ ಸ್ವಾಗತ ದೊರೆಯಿತು. ಅಬು ಧಾಬಿಯ ಖ್ಯಾತ ಬುರ್ಜ್ ಖಲೀಫಾವನ್ನು ಪ್ರಧಾನಿ ಮೋದಿ ಆಗಮನ ಹಿನ್ನೆಲೆಯಲ್ಲಿ ಭಾರತದ ತ್ರಿವರ್ಣ ಧ್ವಜಗಳ ಬಣ್ಣದ ದೀಪಗಳಿಂದ ಅಲಂಕರಿಸಲಾಗಿತ್ತು.

ಬುರ್ಜ್ ಖಲೀಫಾದಲ್ಲಿ ಧ್ವನಿ ಬೆಳಕಿನ ಪ್ರದರ್ಶನ ಅಂಗವಾಗಿ ಗಗನಚುಂಬಿ ಕಟ್ಟಡದಲ್ಲಿ ತ್ರಿವರ್ಣ ಧ್ವಜದ ದೀಪದ ಅಲಂಕಾರ ಜೊತೆಗೆ ಪ್ರಧಾನಿ ಮೋದಿಯವರ ಚಿತ್ರಗಳನ್ನು ಸಹ ಪ್ರದರ್ಶನಗೊಳಿಸಲಾಯಿತು. ನಂತರ ಅದರಲ್ಲಿ ಪ್ರಧಾನಿ ಮೋದಿಯವರಿಗೆ ಸ್ವಾಗತ ಎಂದು ಅಕ್ಷರದಲ್ಲಿ ಬರೆಯಲಾಗಿತ್ತು.

ದುಬೈಯಲ್ಲಿರುವ ಪ್ರಖ್ಯಾತ ಗಗನಚುಂಬಿ ಕಟ್ಟಡ ಬುರ್ಜ್ ಖಲೀಫಾ ಪ್ರಖ್ಯಾತ ಪ್ರವಾಸಿ ಆಕರ್ಷಣೆಯ ಕೇಂದ್ರ. ಅಬುಧಾಬಿ ಅಧ್ಯಕ್ಷರ ಪ್ರೀತಿಯ ಭವ್ಯ ಸ್ವಾಗತಕ್ಕೆ ಮನಸೋತ ಪ್ರಧಾನಿ ಮೋದಿ, ಇಂದು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡದ್ದಕ್ಕೆ ರಾಜಕುಮಾರ ಶೇಖ್ ಖಲೀದ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರಿಗೆ ಧನ್ಯವಾದಗಳು ಎಂದಿದ್ದಾರೆ. ಗಲ್ಫ್ ರಾಷ್ಟ್ರ ಭೇಟಿ ಸಂದರ್ಭದಲ್ಲಿ ಅನೇಕ ದ್ವಿಪಕ್ಷೀಯ ಮಾತುಕತೆ ಪ್ರಮುಖ ಅಜೆಂಡಾವಾಗಿದೆ.

ಈ ಹಿಂದೆ ಯುಎಇಯ ವಿದೇಶಿ ವ್ಯವಹಾರಗಳ ರಾಜ್ಯ ಸಚಿವ ಡಾ ತಾನಿ ಬಿನ್ ಅಹ್ಮದ್ ಅಲ್ ಝೆಯೌದಿ ಸಂದರ್ಶನವೊಂದರಲ್ಲಿ ಈ ಹಿಂದೆ,ಯುಎಇ ಮತ್ತು ಭಾರತದ ತೈಲೇತರ ವ್ಯಾಪಾರ 2030ರ ಹೊತ್ತಿಗೆ 100 ಶತಕೋಟಿ ಡಾಲರ್ ಗೆ ತಲುಪುವ ನಿರೀಕ್ಷೆಯಿದೆ ಎಂದಿದ್ದಾರೆ. ಯುಎಇ-ಭಾರತ ವಿಸ್ತಾರವಾದ ಆರ್ಥಿಕ ಸಹಭಾಗಿತ್ವ ಒಪ್ಪಂದ(CEPA) ಬೆಳವಣಿಗೆ ಮತ್ತು ಅವಕಾಶಕ್ಕೆ ಹೊಸ ಯುಗವನ್ನು ನೀಡಲಿದೆ ಎಂದು ಹೇಳಿದ್ದಾರೆ.

ಸಿಇಪಿಎ ಒಪ್ಪಂದ: ಇದು ಭಾರತ ಮತ್ತು ಯುಎಇ ನಡುವೆ ಫೆಬ್ರವರಿ 18, 2022ರಂದು ಮಾಡಿಕೊಂಡ ಒಪ್ಪಂದವಾಗಿದ್ದು ಮೇ 1, 2022ರಂದು ಜಾರಿಗೆ ಬಂದಿತು. ಪ್ರಧಾನಿ ನರೇಂದ್ರ ಮೋದಿ ಮತ್ತು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯನ್ ನಡುವೆ ಆದ ಒಪ್ಪಂದವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT