ಸಾಂದರ್ಭಿಕ ಚಿತ್ರ 
ವಿದೇಶ

ಪಾಕಿಸ್ತಾನ: ನಿರ್ಮಾಣ ಹಂತದ ಸೇತುವೆ ಬಳಿ ಗೋಡೆ ಕುಸಿದು 11 ಮಂದಿ ಕಾರ್ಮಿಕರು ಸಾವು

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಹೊರವಲಯದಲ್ಲಿ ನಿರ್ಮಾಣ ಹಂತದ ಸೇತುವೆ ಬಳಿಯ ಗೋಡೆ ಕುಸಿದು 11 ಕಾರ್ಮಿಕರು ಬುಧವಾರ ಮುಂಜಾನೆ ಸಾವಿಗೀಡಾಗಿದ್ದಾರೆ ಎಂದು ಪೊಲೀಸ್ ಮತ್ತು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

ಇಸ್ಲಾಮಾಬಾದ್: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಹೊರವಲಯದಲ್ಲಿ ನಿರ್ಮಾಣ ಹಂತದ ಸೇತುವೆ ಬಳಿಯ ಗೋಡೆ ಕುಸಿದು 11 ಕಾರ್ಮಿಕರು ಬುಧವಾರ ಮುಂಜಾನೆ ಸಾವಿಗೀಡಾಗಿದ್ದಾರೆ ಎಂದು ಪೊಲೀಸ್ ಮತ್ತು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

ಸೇತುವೆ ನಿರ್ಮಾಣದ ಸ್ಥಳದಲ್ಲಿನ ರಸ್ತೆಬದಿಯ ತಮ್ಮ ಟೆಂಟ್‌ಗಳಲ್ಲಿ ಕಾರ್ಮಿಕರು ಕುಳಿತಿದ್ದಾಗ ಗೋಡೆ ಬಿದ್ದಿದೆ.

ಸ್ಥಳೀಯ ಪೊಲೀಸ್ ಅಧಿಕಾರಿ ಮತ್ತು ರಕ್ಷಣಾ ತುರ್ತು ಸೇವೆಯ ಮೊಹಮ್ಮದ್ ಅಕ್ರಂ ಮಾತನಾಡಿ, ನೆರೆಯ ಗೊಲ್ರಾ ಬಳಿಯಲ್ಲಿ ಮುಂಗಾರು ಮಳೆ ಸುರಿಯುತ್ತಿದ್ದು, ಈ ನಡುವೆಯೇ ಕುಸಿತ ಸಂಭವಿಸಿದೆ ಮತ್ತು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಹೇಳಿದರು.

ಜೂನ್ 25 ರಿಂದ ಪಾಕಿಸ್ತಾನದಲ್ಲಿ ಮಾನ್ಸೂನ್ ಮಳೆ ಸುರಿಯುತ್ತಿದೆ. ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 112 ಜನರು ಸಾವಿಗೀಡಾಗಿದ್ದಾರೆ.

ಮಳೆಯಿಂದಾಗಿ ಪೂರ್ವ ಪಂಜಾಬ್ ಪ್ರಾಂತ್ಯದಲ್ಲಿ ಪಾಕಿಸ್ತಾನದ ನದಿಗಳು ತುಂಬಿ ಹರಿಯುತ್ತಿವೆ. ನೂರಾರು ಹಳ್ಳಿಗಳು ಮುಳುಗಿವೆ ಮತ್ತು ಕನಿಷ್ಠ 15,000 ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.

ಕಳೆದ ಬಾರಿ ಮಳೆಯಿಂದಾಗಿ ಪಾಕಿಸ್ತಾನದ ಮೂರನೇ ಒಂದು ಭಾಗದಷ್ಟು ಪ್ರದೇಶ ನೀರಿನಲ್ಲಿ ಮುಳುಗಿದ್ದು, 1,739 ಜನರು ಮೃತಪಟ್ಟಿದ್ದರು. ಇದಾದ ಒಂದು ವರ್ಷದ ನಂತರ ಪಾಕಿಸ್ತಾನದಲ್ಲಿ ಮತ್ತೆ ಮಳೆಯ ಆರ್ಭಟ ಜೋರಾಗಿದೆ.

2022 ರಲ್ಲಿ ಪ್ರವಾಹವು ನಗದು ಕೊರತೆಯಿರುವ ಪಾಕಿಸ್ತಾನದಲ್ಲಿ 30 ಬಿಲಿಯನ್ ಡಾಲರ್ ನಷ್ಟವನ್ನು ಉಂಟುಮಾಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT