ಸಾಂದರ್ಭಿಕ ಚಿತ್ರ 
ವಿದೇಶ

'ಫೇಸ್ ಬುಕ್' ಸ್ನೇಹಿತನ ಭೇಟಿಗಾಗಿ ಭಾರತದ ವಿವಾಹಿತ ಮಹಿಳೆ ಪಾಕಿಸ್ತಾನಕ್ಕೆ ಪ್ರಯಾಣ!

ಭಾರತದ ವಿವಾಹಿತ ಮಹಿಳೆಯೊಬ್ಬರು ತಾನು ಫೇಸ್‌ಬುಕ್‌ನಲ್ಲಿ ಸ್ನೇಹ ಬೆಳೆಸಿದ ಮತ್ತು ಪ್ರೀತಿಸುತ್ತಿದ್ದ ಸ್ನೇಹಿತನನ್ನು ಭೇಟಿಯಾಗಲು ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಕ್ವಾ ಪ್ರಾಂತ್ಯಕ್ಕೆ ತೆರಳಿರುವುದಾಗಿ ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಖೈಬರ್ ಪಖ್ತುಂಕಾ: ಭಾರತದ ವಿವಾಹಿತ ಮಹಿಳೆಯೊಬ್ಬರು ತಾನು ಫೇಸ್‌ಬುಕ್‌ನಲ್ಲಿ ಸ್ನೇಹ ಬೆಳೆಸಿದ ಮತ್ತು ಪ್ರೀತಿಸುತ್ತಿದ್ದ ಸ್ನೇಹಿತನನ್ನು ಭೇಟಿಯಾಗಲು ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಕ್ವಾ ಪ್ರಾಂತ್ಯಕ್ಕೆ ತೆರಳಿರುವುದಾಗಿ ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಕೈಲೋರ್ ಗ್ರಾಮದಲ್ಲಿ ಜನಿಸಿ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ವಾಸಿಸುತ್ತಿದ್ದ 34 ವರ್ಷದ ಅಂಜು ತನ್ನ 29 ವರ್ಷದ ಪಾಕಿಸ್ತಾನಿ ಸ್ನೇಹಿತ ನಸ್ರುಲ್ಲಾನನ್ನು ಭೇಟಿಯಾಗಲು ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ಅಪ್ಪರ್ ದಿರ್ ಜಿಲ್ಲೆಗೆ ತೆರಳಿದ್ದಾರೆ.  ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ನಸ್ರುಲ್ಲಾ ಮತ್ತು ಅಂಜು ಕೆಲವು ತಿಂಗಳ ಹಿಂದೆ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಸ್ನೇಹಿತರಾಗಿದ್ದರು ಎಂದು ಎಆರ್ ವೈ ನ್ಯೂಸ್ ವರದಿ ಮಾಡಿದೆ.

ಅಂಜು ಆರಂಭದಲ್ಲಿ ಪೊಲೀಸರ ವಶದಲ್ಲಿದ್ದರು ಆದರೆ ಅವರ ಪ್ರಯಾಣ ದಾಖಲೆಗಳನ್ನು ಜಿಲ್ಲಾ ಪೊಲೀಸರು ಪರಿಶೀಲಿಸಿದ ನಂತರ ಬಿಡುಗಡೆ ಮಾಡಿದ್ದಾರೆ. ಎಲ್ಲಾ ಪ್ರಯಾಣದ ದಾಖಲೆಗಳು ಸರಿಯಾಗಿವೆ ಎಂದು ಕಂಡುಬಂದ ನಂತರ ಆಕೆಯ ಭೇಟಿಗೆ ಅನುಮತಿ ನೀಡಲಾಗಿದೆ. ದೇಶಕ್ಕೆ ಕೆಟ್ಟ ಹೆಸರು ತರುವಂತಹ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಅವರಿಗೆ ಭದ್ರತೆಯನ್ನು ಒದಗಿಸಲಾಗಿದೆ ಎಂದು ಮೂಲವೊಂದು ಪಿಟಿಐಗೆ ತಿಳಿಸಿದೆ.

ಮಾಧ್ಯಮ ವರದಿಗಳ ನಂತರ ರಾಜಸ್ಥಾನ ಪೊಲೀಸರ ತಂಡವು ಅಂಜು ಅವರ ಬಗ್ಗೆ ವಿಚಾರಿಸಲು ಭಿವಾಡಿಯ ಮನೆಗೆ ತಲುಪಿದೆ. ಜೈಪುರಕ್ಕೆ ಹೋಗುವ ನೆಪದಲ್ಲಿ ಗುರುವಾರ ಮನೆಯಿಂದ ಹೊರ ಹೋಗಿದ್ದಳು ಆದರೆ ಆಕೆ ಪಾಕಿಸ್ತಾನದಲ್ಲಿದ್ದಾಳೆ ಎಂದು ಮನೆಯವರಿಗೆ ನಂತರ ಗೊತ್ತಾಗಿದೆ ಎಂದು ಆಕೆಯ ಪತಿ ಅರವಿಂದ್ ಪೊಲೀಸರಿಗೆ ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಅವಳೊಂದಿಗೆ ವಾಟ್ಸಾಪ್‌ನಲ್ಲಿ ಮಾತನಾಡಿದಾಗ ಆಕೆ ಲಾಹೋರ್ ನಲ್ಲಿ ಇರುವುದಾಗಿ ತಿಳಿಯಿತು ಎಂದುಅರವಿಂದ್ ಪೊಲೀಸರಿಗೆ ತಿಳಿಸಿದ್ದಾರೆ.ಅರವಿಂದ್ ಮತ್ತು ಅಂಜು 2007 ರಲ್ಲಿ ವಿವಾಹವಾಗಿದ್ದು, ಅವರಿಗೆ ಅವರಿಗೆ 15 ವರ್ಷದ ಹುಡುಗಿ ಮತ್ತು ಆರು ವರ್ಷದ ಮಗನಿದ್ದಾರೆ. ಆಕೆ ಸೋಷಿಯಲ್ ಮೀಡಿಯಾದಲ್ಲಿ ಯಾರೊಂದಿಗೂ ಸಂಪರ್ಕದಲ್ಲಿರುತ್ತಾಳೆ ಎಂಬುದೇ ತನಗೆ ತಿಳಿದಿರಲಿಲ್ಲ ಎಂದು ಅರವಿಂದ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT