ಸಾಂದರ್ಭಿಕ ಚಿತ್ರ 
ವಿದೇಶ

9 ಭಾರತೀಯ ಮೀನುಗಾರರ ಬಂಧಿಸಿದ ಶ್ರೀಲಂಕಾ ನೌಕಾಪಡೆ

ತಮಿಳುನಾಡಿನ ಮಂಡಪಂ ನಿವಾಸಿಗಳಾದ ಮೀನುಗಾರರು ಅಂತರಾಷ್ಟ್ರೀಯ ಸಮುದ್ರ ಗಡಿ ಉಲ್ಲಂಘಿಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದಾರೆ ಎಂದು ರಾಜ್ಯ ಮೀನುಗಾರಿಕೆ ಇಲಾಖೆ ಅಧಿಕಾರಿಯೊಬ್ಬರು  ತಿಳಿಸಿದ್ದಾರೆ

ಕೊಲೊಂಬೋ: ಸಮುದ್ರದ ಗಡಿಯನ್ನು ಉಲ್ಲಂಘಿಸಿದ ಆರೋಪದ ಮೇಲೆ 9 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ.

ತಮಿಳುನಾಡಿನ ಮಂಡಪಂ ನಿವಾಸಿಗಳಾದ ಮೀನುಗಾರರು ಅಂತರಾಷ್ಟ್ರೀಯ ಸಮುದ್ರ ಗಡಿ ಉಲ್ಲಂಘಿಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದಾರೆ ಎಂದು ರಾಜ್ಯ ಮೀನುಗಾರಿಕೆ ಇಲಾಖೆ ಅಧಿಕಾರಿಯೊಬ್ಬರು  ತಿಳಿಸಿದ್ದಾರೆ.

ಮೀನುಗಾರರು ಸೋಮವಾರ ಬೆಳಗ್ಗೆ ಮೀನುಗಾರಿಕೆಗೆ ತೆರಳಿದ್ದರು ಮತ್ತು ನಿನ್ನೆ ತಡರಾತ್ರಿ ಕಚ್ಚತೀವು ಮತ್ತು ನೆಡುಂತೀವು ನಡುವೆ ಬಂಧಿಸಲಾಗಿದೆ ಎರಡು ಯಾಂತ್ರೀಕೃತ ದೋಣಿಗಳನ್ನೂ ವಶಪಡಿಸಿಕೊಳ್ಳಲಾಗಿದೆ ಹೇಳಿದ್ದಾರೆ.  ಈ ತಿಂಗಳಿನಲ್ಲಿ ನಡೆದ ಎರಡನೇ ಘಟನೆಯಾಗಿದೆ.

ಶ್ರೀಲಂಕಾ ನೌಕಾಪಡೆ ಮತ್ತು ಕರಾವಳಿ ಸಿಬ್ಬಂದಿ ಜುಲೈ 24 ರ ರಾತ್ರಿ ಶ್ರೀಲಂಕಾದ ಸಮುದ್ರದಿಂದ ಭಾರತೀಯ ಮೀನುಗಾರರನ್ನು ಓಡಿಸಲು ವಿಶೇಷ ಕಾರ್ಯಾಚರಣೆ ನಡೆಸಿದರು" ಎಂದು ಶ್ರೀಲಂಕಾ ನೌಕಾಪಡೆ ಹೇಳಿಕೆಯಲ್ಲಿ ತಿಳಿಸಿದೆ.

ವಿದೇಶಿ ಮೀನುಗಾರಿಕಾ ಟ್ರಾಲರ್‌ಗಳ ಅಕ್ರಮ ಮೀನುಗಾರಿಕೆ  ತಡೆಯಲು ನೌಕಾಪಡೆಯು ಶ್ರೀಲಂಕಾದ ನೀರಿನಲ್ಲಿ ನಿಯಮಿತ ಗಸ್ತು ತಿರುಗುತ್ತಿದ್ದು ರ್ಯಾಚರಣೆಗಳನ್ನು ನಡೆಸುತ್ತಿದೆ ಎಂದು ಹೇಳಿಕೆ ತಿಳಿಸಿದೆ.

ಕಳೆದ ವಾರ ಶ್ರೀಲಂಕಾ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರನಿಲ್ ವಿಕ್ರಮಸಿಂಘೆ ನಡುವಿನ ಮಾತುಕತೆಯ ಸಂದರ್ಭದಲ್ಲೂ ಮೀನುಗಾರರ ಸಮಸ್ಯೆ ಕಾಣಿಸಿಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT