ಕಖೋವ್ಕಾ ಜಲವಿದ್ಯುತ್ ಸ್ಥಾವರದಲ್ಲಿನ ಅಣೆಕಟ್ಟು ಧ್ವಂಸ 
ವಿದೇಶ

ಉಕ್ರೇನಿನ ಸೋವಿಯತ್ ಕಾಲದ ಹಳೆಯ ಡ್ಯಾಂ ಧ್ವಂಸ ಮಾಡಿದ ರಷ್ಯಾ, ತುರ್ತು ಸಭೆ ಕರೆದ ಝೆಲೆನ್ಸ್ಕಿ

ರಷ್ಯಾ ಮತ್ತು ಉಕ್ರೇನ್ ನಡುವಿನ ಸಂಘರ್ಷ ಮತ್ತೆ ತಾರಕಕ್ಕೇರಿದ್ದು, ಉಕ್ರೇನ್ ನಲ್ಲಿರುವ ಸೋವಿಯತ್ ಕಾಲದ ಬೃಹತ್ ಡ್ಯಾಂ ಅನ್ನು ರಷ್ಯಾ ಸೇನೆ ಧ್ವಂಸ ಮಾಡಿದೆ ಎಂದು ಉಕ್ರೇನ್ ಆರೋಪಿಸಿದೆ.

ನವದೆಹಲಿ: ರಷ್ಯಾ ಮತ್ತು ಉಕ್ರೇನ್ ನಡುವಿನ ಸಂಘರ್ಷ ಮತ್ತೆ ತಾರಕಕ್ಕೇರಿದ್ದು, ಉಕ್ರೇನ್ ನಲ್ಲಿರುವ ಸೋವಿಯತ್ ಕಾಲದ ಬೃಹತ್ ಡ್ಯಾಂ ಅನ್ನು ರಷ್ಯಾ ಸೇನೆ ಧ್ವಂಸ ಮಾಡಿದೆ ಎಂದು ಉಕ್ರೇನ್ ಆರೋಪಿಸಿದೆ.

ದಕ್ಷಿಣ ಉಕ್ರೇನ್‌ನ ಕಖೋವ್ಕಾ ಜಲವಿದ್ಯುತ್ ಸ್ಥಾವರದಲ್ಲಿನ ಅಣೆಕಟ್ಟು ಧ್ವಂಸಗೊಂಡಿದ್ದು, ರಷ್ಯಾ ಸೇನೆಯೇ ಈ ದೃಷ್ಕೃತ್ಯ ನಡೆಸಿದೆ ಎಂದು ಉಕ್ರೇನ್ ಆರೋಪಿಸಿದೆ. ಆದರೆ ಈ ಆರೋಪವನ್ನು ನಿರಾಕರಿಸಿರುವ ರಷ್ಯಾ, ಉಕ್ರೇನ್ ಸೈನಿಕರೇ ಡ್ಯಾಂ ಧ್ವಂಸ ಮಾಡಿದ್ದಾರೆ ಎಂದು ಆರೋಪಿಸಿದೆ. ಅಣೆಕಟ್ಟು ಸ್ಫೋಟಗೊಂಡಿರುವುದರಿಂದ ಯುದ್ಧ ವಲಯದಲ್ಲಿ ಪ್ರವಾಹದ ನೀರು ಹರಿದಿದೆ.

ಇನ್ನು ಉಕ್ರೇನ್‌ನ ಅಧ್ಯಕ್ಷೀಯ ಆಡಳಿತದ ಮುಖ್ಯಸ್ಥರು ಮಂಗಳವಾರ ಈ ಡ್ಯಾಂ ಸ್ಫೋಟವನ್ನು ರಷ್ಯಾದ ಪಡೆಗಳು ಮಾಡಿದ "ಪರಿಸರ ಹತ್ಯೆ" ಎಂದು ಬಣ್ಣಿಸಿದ್ದಾರೆ. ಇತ್ತ ರಷ್ಯಾ ಕೂಡ ಘಟನೆಗೆ ಉಕ್ರೇನ್ ಹೊಣೆ ಎಂದು ಆರೋಪಿಸಿದೆ. ಡ್ಯಾಂ ಸ್ಫೋಟದಿಂದ ಮುಂದಿನ ಐದು ಗಂಟೆಗಳಲ್ಲಿ ನೀರು ನಿರ್ಣಾಯಕ ಮಟ್ಟವನ್ನು ತಲುಪಬಹುದು ಎಂದು ಉಕ್ರೇನ್ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. 'ಐದು ಗಂಟೆಗಳಲ್ಲಿ ನೀರು ನಿರ್ಣಾಯಕ ಮಟ್ಟವನ್ನು ತಲುಪುತ್ತದೆ" ಎಂದು ಪ್ರಾದೇಶಿಕ ಗವರ್ನರ್ ಒಲೆಕ್ಸಾಂಡರ್ ಪ್ರೊಕುಡಿನ್ ತಮ್ಮ ಟೆಲಿಗ್ರಾಮ್ ಚಾನೆಲ್‌ನಲ್ಲಿ ವೀಡಿಯೊದಲ್ಲಿ ತಿಳಿಸಿದ್ದಾರೆ.

ಪರಿಣಾಮ ಡ್ನಿಪ್ರೊದ ಪಶ್ಚಿಮ ದಂಡೆಯಲ್ಲಿರುವ ಹತ್ತು ಹಳ್ಳಿಗಳು ಮತ್ತು ಖರ್ಸನ್ ನಗರದ ಒಂದು ಭಾಗವು ಪ್ರವಾಹದ ಅಪಾಯಕ್ಕೆ ಸಿಲುಕಿವೆ. ಪ್ರಸ್ತುತ ಕಾರ್ಯನಿರತರಾಗಿರುವ ಅಧಿಕಾರಿಗಳು ಜನರನ್ನು ಸ್ಥಳಾಂತರಿಸಲು ಸೂಚನೆ ನೀಡಿದ್ದಾರೆ.  ಸಾಮಾಜಿಕ ಜಾಲತಾಣಗಳಲ್ಲಿ ಡ್ಯಾ ಸ್ಫೋಟದದ ವಿಡಿಯೋಗಳು ಹರಿದಾಡುತ್ತಿದ್ದು, ಅಣೆಕಟ್ಟಿನ ಅವಶೇಷಗಳ ಮೂಲಕ ನೀರು ಉಕ್ಕಿ ಹರಿಯುತ್ತಿರುವುದು ಕಂಡುಬಂದಿದೆ. ಡ್ಯಾಂ ಸ್ಫೋಟದ ಬೆನ್ನಲ್ಲೇ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಉಕ್ರೇನ್‌ನ ರಾಷ್ಟ್ರೀಯ ಭದ್ರತೆ ಮತ್ತು ರಕ್ಷಣಾ ಮಂಡಳಿಯ ತುರ್ತು ಸಭೆ ಕರೆದಿದ್ದಾರೆ.

ಉಕ್ರೇನ್‌ನಲ್ಲಿ ರಷ್ಯಾದ ಆಕ್ರಮಣದ ಪ್ರಾರಂಭದಲ್ಲಿ ವಶಪಡಿಸಿಕೊಂಡ ಕಾಖೋವ್ಕಾ ಅಣೆಕಟ್ಟು, ಗಮನಾರ್ಹವಾಗಿ ಕ್ರಿಮಿಯನ್ ಪರ್ಯಾಯ ದ್ವೀಪಕ್ಕೆ ನೀರನ್ನು ಪೂರೈಸುತ್ತದೆ, ಇದನ್ನು ಮಾಸ್ಕೋ 2014 ರಲ್ಲಿ ಸ್ವಾಧೀನಪಡಿಸಿಕೊಂಡಿತ್ತು. ಈ ಜಲಾಶಯವು ಜಪೋರಿಝಿಯಾ ಪರಮಾಣು ಸ್ಥಾವರಕ್ಕೆ ನೀರನ್ನು ಸಹ ಪೂರೈಸುತ್ತದೆ. ಅಣೆಕಟ್ಟು ಸ್ಫೋಟದಿಂದ ಜಪೋರಿಝಿಯಾ ಪರಮಾಣು ಸ್ಥಾವರದಲ್ಲಿ ತಕ್ಷಣಕ್ಕೆ ಪರಮಾಣು ಸುರಕ್ಷತೆಯ ಅಪಾಯವಿಲ್ಲ.. ಆದರೆ ಅದು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಅಂತಾರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ (IAEA) ಹೇಳಿದೆ.

ಅಣೆಕಟ್ಟೆಯ ಮೇಲೆ ಒಂದಕ್ಕಿಂತ ಹೆಚ್ಚುಬಾರಿ ಕ್ಷಿಪಣಿ ದಾಳಿಯಾಗಿದ್ದು, ಇದೇ ಡ್ಯಾಂ ಧ್ವಂಸಕ್ಕೆ ಕಾರಣ ಎಂದು ಉಕ್ರೇನ್ ಆರೋಪಿಸಿದೆ. ಡ್ಯಾಂ ಧ್ವಂಸಗೊಳಿಸುವ ಮೂಲಕ ಕೆಳ ಭಾಗದಲ್ಲಿರುವ ಉಕ್ರೇನ್ ಸೇನೆಯನ್ನು ನಾಶ ಪಡಿಸಲು ರಷ್ಯಾ ಸೇನೆ ಸಂಚು ರೂಪಿಸಿತ್ತು.

ದಕ್ಷಿಣ ಮತ್ತು ಪೂರ್ವ ಉಕ್ರೇನ್‌ನಾದ್ಯಂತ ರಷ್ಯಾ ಪಡೆಗಳ ವಿರುದ್ಧ ಉಕ್ರೇನ್‌ನ ದೀರ್ಘ-ಯೋಜಿತ ಪ್ರತಿದಾಳಿಯ ಹಿನ್ನಲೆಯಲ್ಲಿ ಈ ದಾಳಿ ಮಾಡಲಾಗಿದೆ. ಪ್ರವಾಹದ ನೀರು ಹೇಗೆ ಪರಿಣಾಮ ಬೀರುತ್ತದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಸೋವಿಯತ್ ಕಾಲದಲ್ಲಿ 1956 ರಲ್ಲಿ ಡ್ನಿಪ್ರೊ ನದಿಯ ಮೇಲೆ ನಿರ್ಮಿಸಲಾದ ಈ ಡ್ಯಾಂ ಉಕ್ರೇನ್ ಮಾತ್ರವಲ್ಲದೇ ರಷ್ಯಾದ ಹಲವು ಭಾಗಗಳಿಗೆ ನೀರು ಪೂರೈಸುತ್ತಿತ್ತು. ಈ ಡ್ಯಾಂ ನಾಶದಿಂದ ಉಕ್ರೇನ್‌ನಲ್ಲಿ  ಮೂಲಸೌಕರ್ಯಕ್ಕೆ ಅತಿದೊಡ್ಡ ಹೊಡೆತ ಬಿದ್ದಂತಾಗಿದೆ ಎಂದು ಹೇಳಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT