ಜೋ-ಬೈಡನ್, ಪ್ರಧಾನಿ ಮೋದಿ 
ವಿದೇಶ

ಜೋ- ಬೈಡನ್ ಕುಟುಂಬದಿಂದ ಪ್ರಧಾನಿ ಮೋದಿಗೆ ಔತಣಕೂಟ ಆಯೋಜನೆ!

ಶ್ವೇತಭವನದಲ್ಲಿ ಆಯೋಜನೆಯಾಗಿರುವ ಸ್ಟೇಟ್  ಡಿನ್ನರ್ ಗೂ ಮುನ್ನಾ ಜೂನ್ 21 ರಂದು ಪ್ರಧಾನಿ ನರೇಂದ್ರ ಮೋದಿಗೆ  ಔತಣಕೂಟ ಆಯೋಜಿಸಲು  ಅಮೆರಿಕ ಅಧ್ಯಕ್ಷ ಜೋ-ಬೈಡನ್ ಕುಟುಂಬ ಯೋಜಿಸುತ್ತಿದೆ ಎಂದು ಹಿರಿಯ ಆಡಳಿತಾ ಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಾಷಿಂಗ್ಟನ್: ಅಮೆರಿಕದ ಶ್ವೇತಭವನದಲ್ಲಿ ಆಯೋಜನೆಯಾಗಿರುವ ಸ್ಟೇಟ್  ಡಿನ್ನರ್ ಗೂ ಮುನ್ನಾ ಜೂನ್ 21 ರಂದು ಪ್ರಧಾನಿ ನರೇಂದ್ರ ಮೋದಿಗೆ  ಔತಣಕೂಟ ಆಯೋಜಿಸಲು ಅಮೆರಿಕ ಅಧ್ಯಕ್ಷ ಜೋ-ಬೈಡನ್ ಕುಟುಂಬ ಯೋಜಿಸುತ್ತಿದೆ ಎಂದು ಹಿರಿಯ ಆಡಳಿತಾಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರನ್ನು ಜೋ- ಬೈಡನ್ ಹಾಗೂ ಪ್ರಥಮ ಮಹಿಳೆ ಜಿಲ್ ಬೈಡನ್  ಅವರು ಅಧಿಕೃತ ರಾಜ್ಯ ಭೇಟಿಗೆ ಆಹ್ವಾನಿಸಿದ್ದಾರೆ.

ಈ  ಐತಿಹಾಸಿಕ ಭೇಟಿ ವೇಳೆಯಲ್ಲಿ ಇತರ ವಿಷಯಗಳ ಜೊತೆಗೆ ಜೂನ್ 22 ರಂದು ಸೌತ್ ಲಾನ್ಸ್‌ನಲ್ಲಿ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ ಸಮಾರಂಭ ಸೇರಿದಂತೆ  ಅತ್ಯುತ್ತಮ ಮನೋರಂಜನೆಯೊಂದಿಗೆ ಸ್ಟೇಟ್ ಡಿನ್ನರ್ ಆಯೋಜಿಸಲಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ. 

ಶ್ವೇತಭವನದ ಹುಲ್ಲುಹಾಸಿನ ಮೇಲೆ ನಡೆಯಲಿರುವ ಸಮಾರಂಭದಲ್ಲಿ ಕೆಲವೇ ಮಂದಿ ಪಾಲ್ಗೊಳ್ಳಲಿದ್ದಾರೆ. ಈ ಸಮಾರಂಭಕ್ಕೂ ಮುನ್ನಾ ಪ್ರಧಾನಿ ಮೋದಿ ಮತ್ತು ಜೋ-ಬೈಡನ್ ಮತ್ತು ಅವರ ಕುಟುಂಬದೊಂದಿಗೆ ಕೆಲ ಕ್ಷಣಗಳನ್ನು ಕಳೆಯಲಿದ್ದಾರೆ ಎಂದು ಅವರು ಹೇಳಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಔತಣಕೂಟದ ಮೆನು ವಿವರ ತಿಳಿದುಬಂದಿಲ್ಲ. ವಿಶ್ವಸಂಸ್ಥೆ ಪ್ರಧಾನ ಕಚೇರಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡ ಬಳಿಕ ಜೂನ್ 21 ರಂದು ಪ್ರಧಾನಿ ನರೇಂದ್ರ ಮೋದಿ ವಾಷಿಂಗ್ಟನ್ ಡಿಸಿಗೆ ಆಗಮಿಸುವ ನಿರೀಕ್ಷೆಯಿದೆ. ಜೂನ್ 22 ರಂದು ಸ್ಟೇಟ್ ಡಿನ್ನರ್ ಆಯೋಜಿಸಲಾಗಿದೆ. ಅಂದು ಸಂಜೆ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಗಣ್ಯರ ಪಟ್ಟಿ ಬಿಡುಗಡೆಯಾಗಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಹಾರದ ಲಖಿಸರಾಯಿ ದೇವಾಲಯದ ಬಳಿ ಭೀಕರ ಕಾಲ್ತುಳಿತ: 7 ಭಕ್ತರ ಸಾವು, ಹಲವರಿಗೆ ಗಾಯ

ಬೆಂಗಳೂರಿನ ಕ್ಲಾರೆನ್ಸ್ ಶಾಲೆಯಲ್ಲಿ H1N1 ಫ್ಲೂ ಆತಂಕ: ಇಬ್ಬರಲ್ಲಿ ಸೋಂಕು ದೃಢ, 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರು, ಕಬಾಬ್ ಅಂಗಡಿಗಳ ತೆರವಿಗೆ ಆಗ್ರಹ!

'ನಾನು ನಲ್ಸಾರ್ ಆಹ್ವಾನವನ್ನೇ ಸ್ವೀಕರಿಸಿಲ್ಲ; ಅಲ್ಲಿಗೆ ಹೋಗುವ ಪ್ರಶ್ನೆಯೇ ಇಲ್ಲ': CJI ಸೂರ್ಯಕಾಂತ್ ಸ್ಪಷ್ಟನೆ

ಚಾಮರಾಜನಗರ ಶೂಟೌಟ್‌ ಕೇಸ್: ‘ಮೃತರು ರೈತರೇ ಹೊರತು ಬೇಟೆಗಾರರಲ್ಲ’; ಮೂವರು ತಮಿಳರ ಹತ್ಯೆಗೆ ಸಿಎಂ ವಿಜಯ್ ತೀವ್ರ ಖಂಡನೆ, ಉನ್ನತ ಮಟ್ಟದ ತನಿಖೆಗೆ ಆಗ್ರಹ..!

ಪರೀಕ್ಷೆ ಅಕ್ರಮ; ಜಾರ್ಖಂಡ್ ಸಿಎಂ ಸೊರೇನ್, ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಪ್ರತಿಕೃತಿ ದಹಿಸಿ JPSC-JSSC ಆಕಾಂಕ್ಷಿಗಳ ಪ್ರತಿಭಟನೆ