ನ್ಯೂಯಾರ್ಕ್ ನಲ್ಲಿ ಎಲೋನ್ ಮಸ್ಕ್-ಪಿಎಂ ಮೋದಿ ಭೇಟಿ 
ವಿದೇಶ

'ನಾನು ಮೋದಿಯವರ ಬಹಳ ದೊಡ್ಡ ಅಭಿಮಾನಿ, ಭಾರತದ ಭವಿಷ್ಯ ಉಜ್ವಲವಾಗಿದೆ': ಟೆಸ್ಲಾ ಸಿಇಒ ಎಲೋನ್ ಮಸ್ಕ್

ಭಾರತವು ಇತರ ದೊಡ್ಡ ದೇಶಗಳಿಗಿಂತ ಭವಿಷ್ಯದ ಮಟ್ಟಿಗೆ ನೋಡಿದರೆ ಹೆಚ್ಚಿನ ಭರವಸೆಯನ್ನು ಹೊಂದಿದೆ. ಭಾರತದ ಭವಿಷ್ಯದ ಬಗ್ಗೆ ನೋಡಲು ಹಾಗೂ ತಿಳಿದುಕೊಳ್ಳಲು ತೀವ್ರ ಉತ್ಸುಕನಾಗಿದ್ದೇನೆ ಎಂದು ಟೆಸ್ಲಾ ಸಿಇಒ ಎಲೋನ್ ಮಸ್ಕ್ ಹೇಳಿದ್ದಾರೆ. ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಪ್ರಧಾನ ಮಂತ್ರಿ ನ್ಯೂಯಾರ್ಕ್ ನಲ್ಲಿ ಎಲೋನ್ ಮಸ್ಕ್ ಸೇರಿದಂತೆ 

ನ್ಯೂಯಾರ್ಕ್: ಭಾರತವು ಇತರ ದೊಡ್ಡ ದೇಶಗಳಿಗಿಂತ ಭವಿಷ್ಯದ ಮಟ್ಟಿಗೆ ನೋಡಿದರೆ ಹೆಚ್ಚಿನ ಭರವಸೆಯನ್ನು ಹೊಂದಿದೆ. ಭಾರತದ ಭವಿಷ್ಯದ ಬಗ್ಗೆ ನೋಡಲು ಹಾಗೂ ತಿಳಿದುಕೊಳ್ಳಲು ತೀವ್ರ ಉತ್ಸುಕನಾಗಿದ್ದೇನೆ ಎಂದು ಟೆಸ್ಲಾ ಸಿಇಒ ಎಲೋನ್ ಮಸ್ಕ್ ಹೇಳಿದ್ದಾರೆ. ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಪ್ರಧಾನ ಮಂತ್ರಿ ನ್ಯೂಯಾರ್ಕ್ ನಲ್ಲಿ ಎಲೋನ್ ಮಸ್ಕ್ ಸೇರಿದಂತೆ ವಿವಿಧ ಉದ್ಯಮಿಗಳನ್ನು ಭೇಟಿ ಮಾಡಿದ್ದು ಅವರಾಡಿರುವ ಮಾತುಗಳು ಭಾರೀ ವೈರಲ್ ಆಗುತ್ತಿವೆ.

ನಿನ್ನೆ ಅವರು ನ್ಯೂಯಾರ್ಕ್ ನಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಸ್ಕ್, ತಮ್ಮ ಸಾಮಾಜಿಕ ಮಾಧ್ಯಮ ಸಂಸ್ಥೆ ಟ್ವಿಟರ್‌ಗೆ ಸ್ಥಳೀಯ ಸರ್ಕಾರವನ್ನು ಅನುಸರಿಸುವುದನ್ನು ಬಿಟ್ಟು ಬೇರೆ ಆಯ್ಕೆ ಇಲ್ಲ ಅಥವಾ ಅದನ್ನು ಮುಚ್ಚಬೇಕಾಗುತ್ತದೆ ಎಂದರು. ಟ್ವಿಟ್ಟರ್ ಕಂಪನಿಯ ಮಾಜಿ ಮಾಲೀಕ ಮತ್ತು ಸಿಇಒ ಜಾಕ್ ಡಾರ್ಸೆ ಅವರ ಇತ್ತೀಚಿನ ಭಾರತ ಸರ್ಕಾರದ ವಿರುದ್ಧದ ಆರೋಪದ ಬಗ್ಗೆ ಕೇಳಿದಾಗ ಎಲೋನ್ ಮಸ್ಕ್ ಈ ರೀತಿ ಹೇಳಿದ್ದಾರೆ. 

ನಾವು ಯಾವುದೇ ದೇಶದಲ್ಲಿರಲಿ ಅಲ್ಲಿನ ಕಾನೂನು, ರೀತಿ ನೀತಿಗಳನ್ನು ಅನುಸರಿಸುವುದು ನಾವು ಮಾಡಬಹುದಾದ ಅತ್ಯುತ್ತಮ ಕೆಲಸವಾಗಿದೆ. ಅದಕ್ಕಿಂತ ಹೆಚ್ಚು ನಮಗೆ ಮಾಡಲು ಸಾಧ್ಯವಿಲ್ಲ. ವಿವಿಧ ರೀತಿಯ ಸರ್ಕಾರಗಳಿಗೆ ವಿಭಿನ್ನ ನಿಯಮಗಳು ಮತ್ತು ನಿಬಂಧನೆಗಳು ಇರುತ್ತವೆ. ಕಾನೂನಿನಡಿಯಲ್ಲಿ ಮುಕ್ತವಾಗಿ ವ್ಯವಹರಿಸಲು ನಮ್ಮ ಕೈಲಾದ ಪ್ರತ್ನ ಮಾಡುತ್ತೇವೆ ಎಂದರು.

ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸುತ್ತದೆಯೇ ಎಂಬ ಪ್ರಶ್ನೆಗೆ, ಮುಂದಿನ ವರ್ಷ ಭಾರತ ದೇಶಕ್ಕೆ ಭೇಟಿ ನೀಡಲು ಯೋಜಿಸುತ್ತಿರುವುದಾಗಿ ಮಸ್ಕ್ ಹೇಳಿದರು. ಸದ್ಯದಲ್ಲಿಯೇ ಭಾರತದಲ್ಲಿನ ಯೋಜನೆ ಬಗ್ಗೆ ಘೋಷಿಸುತ್ತೇವೆ, ಅದಕ್ಕೆ ಅಲ್ಲಿನ ಪ್ರಧಾನಿ ಮೋದಿಯವರಿಗೆ ಧನ್ಯವಾದಗಳು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಆಳಂದದಲ್ಲಿ 6000 ಮತ ಡಿಲೀಟ್ ಆರೋಪ: ಎಲ್ಲಾ ಮಾಹಿತಿ ಈಗಾಗಲೇ ಕಲಬುರಗಿ ಎಸ್‌ಪಿ ಜೊತೆ ಹಂಚಿಕೊಳ್ಳಲಾಗಿದೆ: ಕರ್ನಾಟಕ ಸಿಇಒ

ಬೆಂಗಳೂರು ನಮ್ಮ ಮನೆ, ಬೇರೆ ಏರಿಯಾಗೆ ಸ್ಥಳಾಂತರ ಅಷ್ಟೇ: ಡಿಸಿಎಂ DKS ಎಚ್ಚರಿಕೆಗೆ ಬೆದರಿದ BlackBuck ಸಿಇಒ

ಮುಡಾ ನಿವೇಶನ ಹಂಚಿಕೆಯಲ್ಲಿ ದೊಡ್ಡ ಪ್ರಮಾಣದ ಹಗರಣ ನಡೆದಿದೆ: ED

Operation Sindoor: ಮಧ್ಯರಾತ್ರಿ ಪಾಕಿಸ್ತಾನದಲ್ಲಿ ದಾಳಿ ಮಾಡಿದ್ದೇಕೆ? ರಹಸ್ಯ ಬಿಚ್ಚಿಟ್ಟ CDS ಅನಿಲ್ ಚೌಹಾಣ್

Hindenburg: Gautam Adani ಗೆ ಬಿಗ್ ರಿಲೀಫ್, SEBI ಕ್ಲೀನ್ ಚಿಟ್!

SCROLL FOR NEXT