ಯುಎಸ್ 
ವಿದೇಶ

ಅಮೇರಿಕಾದಲ್ಲಿನ ದ್ವೇಷ ಅಪರಾಧಗಳು, ಮಾನವ ಹಕ್ಕುಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಭಾರತ!

ಅಮೇರಿಕಾದಲ್ಲಿ ನಡೆಯುತ್ತಿರುವ ದ್ವೇಷ ಪೂರಿತ ಅಪರಾಧಗಳು, ಮಾನವ ಹಕ್ಕುಗಳ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿದೆ ಎಂದು ಬೈಡನ್ ಆಡಳಿತದ ಪ್ರಮುಖ ಅಧಿಕಾರಿಗಳು ತಿಳಿಸಿದ್ದಾರೆ.

ವಾಷಿಂಗ್ ಟನ್: ಅಮೇರಿಕಾದಲ್ಲಿ ನಡೆಯುತ್ತಿರುವ ದ್ವೇಷ ಪೂರಿತ ಅಪರಾಧಗಳು, ಮಾನವ ಹಕ್ಕುಗಳ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿದೆ ಎಂದು ಬೈಡನ್ ಆಡಳಿತದ ಪ್ರಮುಖ ಅಧಿಕಾರಿಗಳು ತಿಳಿಸಿದ್ದಾರೆ.

ಭಾರತದೊಂದಿಗೆ ಅಮೇರಿಕಾದ ದ್ವಿಪಕ್ಷೀಯ ಸಂಬಂಧ ಗಾಢವಾಗುತ್ತಿರುವ ಹಿನ್ನೆಲೆಯಲ್ಲಿ ಭಾರತ ಎತ್ತಿರುವ ಅಂಶಗಳು ಅಮೇರಿಕಾದ ರಾಷ್ಟ್ರೀಯ ಭದ್ರತೆಗೆ ಪ್ರಮುಖವಾಗಿದೆ ಎಂದು ಅಲ್ಲಿನ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಉದಯೋನ್ಮುಖ ಭಾರತದೊಂದಿಗೆ ನಾವು ವ್ಯವಹರಿಸುತ್ತಿದ್ದು, ಅಮೇರಿಕಾದ ರಾಷ್ಟ್ರೀಯ ಭದ್ರತೆ ಹಾಗೂ ಆರ್ಥಿಕ ಸಮೃದ್ಧಿಗಳಿಗೆ ಇದು ಪ್ರಮುಖವಾದ ಅಂಶವಾಗಿದೆ. ಇದೇ ವೇಳೆ ಓರ್ವ ನೈಜ ಪಾಲುದಾರ, ಸ್ನೇಹಿತನಾಗಿರುವ ಭಾರತದೊಂದಿಗೆ ನಾವು ವ್ಯತ್ಯಾಸಗಳಿರುವ ಕ್ಷೇತ್ರಗಳ ಬಗ್ಗೆ ಪ್ರಾಮಾಣಿಕವಾಗಿ ಮತ್ತು ರಚನಾತ್ಮಕವಾಗಿ ಮಾತನಾಡುತ್ತೇವೆ, ಭಾರತ ಖಂಡಿತವಾಗಿಯೂ ನಮ್ಮೊಂದಿಗೆ ಅದನ್ನೇ ಮಾಡುತ್ತದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಭಾರತ ಅಮೇರಿಕಾದಲ್ಲಿನ ಮಾನವ ಹಕ್ಕುಗಳು ಹಾಗೂ ಧಾರ್ಮಿಕ ಪ್ರೇರಿತ ದ್ವೇಷದ ಅಪರಾಧಗಳ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ನಾವು ಸಹ ಆಗಗ್ಗೆ ಭಾರತದಲ್ಲಿನ ಮಾನವ ಹಕ್ಕುಗಳ ವಿಚಾರವಾಗಿ ವಿಷಯ ಪ್ರಸ್ತಾಪಿಸಿದ್ದೇವೆ. ಇದು ಪರಸ್ಪರ ಗೌರವದ ವಾತಾವರಣದಲ್ಲೇ ನಡೆಯುತ್ತಿದೆ ಎಂದು ಅಮೇರಿಕಾ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಭಾರತವು ಉತ್ಸಾಹಭರಿತ ನಾಗರಿಕ ಸಮಾಜವಾಗಿದ್ದು, ಮುಕ್ತ ಪತ್ರಿಕಾ ಮತ್ತು ಸ್ವತಂತ್ರ ನ್ಯಾಯಾಂಗದೊಂದಿಗೆ ನಿಜವಾದ ಪ್ರಜಾಪ್ರಭುತ್ವವಾಗಿದೆ ಎಂದು ಅಮೆರಿಕಾ ಅಧಿಕಾರಿಗಳು ಭಾರತವನ್ನು ಹಾಡಿ ಹೊಗಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT