ವ್ಯಾಗ್ನರ್ ಸೇನೆ 
ವಿದೇಶ

ರಷ್ಯಾ ಬಂಡಾಯ ಶಮನ: ಮಾಸ್ಕೋದತ್ತ ತೆರಳದಂತೆ ತನ್ನ ಸೈನಿಕರಿಗೆ ಆದೇಶಿಸಿದ ವ್ಯಾಗ್ನರ್ ಮುಖ್ಯಸ್ಥ

ರಷ್ಯಾದಲ್ಲಿ ರಕ್ತಪಾತ ತಪ್ಪಿಸಲು ಮಾಸ್ಕೋದತ್ತ ತೆರಳದಂತೆ ಮತ್ತು ಉಕ್ರೇನ್‌ನಲ್ಲಿರುವ ಬೇಸ್ ಕ್ಯಾಂಪ್ ಗೆ ವಾಪಸ್ ಆಗುವಂತೆ ತನ್ನ ಸೈನಿಕರಿಗೆ ಆದೇಶ ನೀಡಿರುವುದಾಗಿ ವ್ಯಾಗ್ನರ್ ಪಡೆಯ ಮುಖ್ಯಸ್ಥ ಶನಿವಾರ ಹೇಳಿದ್ದಾರೆ.

ಮಾಸ್ಕೋ: ರಷ್ಯಾದಲ್ಲಿ ರಕ್ತಪಾತ ತಪ್ಪಿಸಲು ಮಾಸ್ಕೋದತ್ತ ತೆರಳದಂತೆ ಮತ್ತು ಉಕ್ರೇನ್‌ನಲ್ಲಿರುವ ಬೇಸ್ ಕ್ಯಾಂಪ್ ಗೆ ವಾಪಸ್ ಆಗುವಂತೆ ತನ್ನ ಸೈನಿಕರಿಗೆ ಆದೇಶ ನೀಡಿರುವುದಾಗಿ ವ್ಯಾಗ್ನರ್ ಪಡೆಯ ಮುಖ್ಯಸ್ಥ ಶನಿವಾರ ಹೇಳಿದ್ದಾರೆ.

ಖಾಸಗಿ ಸೇನೆ ವಾಗ್ನರ್ ನ ಮುಖ್ಯಸ್ಥ ಯೆವ್ಗೆನಿ ಪ್ರಿಗೊಜಿನ್ ಅವರ ಈ ಹೇಳಿಕೆಯು ಹೆಚ್ಚುತ್ತಿರುವ ಬಂಡಾಯವನ್ನು ಶಮನಗೊಳಿಸುವ ಸೂಚನೆ ನೀಡಿದೆ. 

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ವಿರುದ್ಧವೇ ತಿರುಗಿಬಿದ್ದಿರುವ ರಷ್ಯಾದ ಖಾಸಗಿ ಸೇನಾಪಡೆ ವ್ಯಾಗ್ನರ್ ಗ್ರೂಪ್ ಮುಖ್ಯಸ್ಥ ಪ್ರಿಗೊಜಿನ್, ಪುಟಿನ್ ಕಠಿಣ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು.

ಪ್ರಿಗೊಜಿನ್ ಅವರು ಮಾಸ್ಕೋದಿಂದ ಕೇವಲ 200 ಕಿಲೋಮೀಟರ್(120 ಮೈಲುಗಳು) ದೂರದಲ್ಲಿರುವಾಗ, "ರಷ್ಯಾದಲ್ಲಿ ರಕ್ತಪಾತ" ತಪ್ಪಿಸಲು ತನ್ನ ಖಾಸಗಿ ಸೇನೆ ವಾಪಸ್ ಪಡೆಯಲು ನಿರ್ಧರಿಸಿದರು.

ಇದಕ್ಕು ಮುನ್ನ ದಕ್ಷಿಣ ರಷ್ಯಾದ ಸೇನಾ ಕೇಂದ್ರ ಕಚೇರಿಯನ್ನು ವಶಪಡಿಸಿಕೊಂಡಿರುವುದಾಗಿ ಹೇಳಿದ್ದ ವಾಗ್ನರ್, ತಮಗೆ ಸ್ಥಳೀಯರ ಬೆಂಬಲವೂ ಇದೆ ಎಂದು ತಿಳಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT