ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ 
ವಿದೇಶ

'ಆಡಳಿತ ಬದಲಿಸಿದ ಪಿತೂರಿ'ಗೆ ಪಾಕಿಸ್ತಾನಿಗಳು ಭಾರೀ ಬೆಲೆ ತೆರುತ್ತಿದ್ದಾರೆ: ಮಾಜಿ ಪ್ರಧಾನಿ ಇಮ್ರಾನ್ ಖಾನ್

ಆಡಳಿತ ಬದಲಾವಣೆಯ ಪಿತೂರಿಗೆ ಇಂದು ಪಾಕಿಸ್ತಾನದ ಜನರು ಭಾರೀ ಬೆಲೆ ತೆರುತ್ತಿದ್ದಾರೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಆರೋಪಿಸಿದ್ದಾರೆ. 

ಇಸ್ಲಾಮಾಬಾದ್: ಆಡಳಿತ ಬದಲಾವಣೆಯ ಪಿತೂರಿಗೆ ಇಂದು ಪಾಕಿಸ್ತಾನದ ಜನರು ಭಾರೀ ಬೆಲೆ ತೆರುತ್ತಿದ್ದಾರೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಆರೋಪಿಸಿದ್ದಾರೆ. 

ಮಾಜಿ ಸೇನಾ ಮುಖ್ಯಸ್ಥ ಖಮರ್ ಜಾವೇದ್ ಬಾಜ್ವಾ ಮತ್ತೊಮ್ಮೆ ಕೆಲವು ಅಪರಾಧಿಗಳು ಅಧಿಕಾರಕ್ಕೆ ಬರಲು ಸಹಾಯ ಮಾಡಿದ್ದಾರೆ ಎಂದು ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಪಕ್ಷದ ಅಧ್ಯಕ್ಷ ಇಮ್ರಾನ್ ಖಾನ್ ಆರೋಪಿಸಿದ್ದು ಸರ್ಕಾರದ ಸಾಲವನ್ನು ಹೆಚ್ಚಿಸಿದೆ ಮತ್ತು ಹಣದುಬ್ಬರವು ಕಾಡಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಅಂತರ್ ಬ್ಯಾಂಕ್ ಮಾರುಕಟ್ಟೆಯಲ್ಲಿ ಡಾಲರ್ ಎದುರು ಪಾಕಿಸ್ತಾನದ ರೂಪಾಯಿ 18.74 ಪಾಯಿಂಟ್ ಗಳ ಕುಸಿತ ಕಂಡಿದೆ. ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್)ಗೆ ಸರ್ಕಾರದ ನಿಲುವು ಇದಕ್ಕೆ ಕಾರಣ ಎಂದು ವಿಶ್ಲೇಷಕರು ಹೇಳಿದ್ದಾರೆ. ಪಾಕಿಸ್ತಾನದ ಆರ್ಥಿಕತೆಯು ನಗದು ಕೊರತೆಯನ್ನು ಎದುರಿಸುತ್ತಿರುವ ಅಸ್ಥಿರ ಸ್ಥಿತಿಯಲ್ಲಿದೆ. ಕೆಲವು ವಾರಗಳ ಹಿಂದೆ, ಇಲ್ಲಿನ ವಿದೇಶೀ ವಿನಿಮಯ ಸಂಗ್ರಹವು ಸಾರ್ವಕಾಲಿಕ ಕನಿಷ್ಠ $2.9 ಶತಕೋಟಿಗೆ ಕುಸಿಯಿತು ಎಂದರು.

ಇಮ್ರಾನ್ ಖಾನ್ ಅವರನ್ನು ಏಪ್ರಿಲ್‌ನಲ್ಲಿ ಅವಿಶ್ವಾಸ ನಿರ್ಣಯದ ಮೂಲಕ ಅಧಿಕಾರದಿಂದ ಹೊರಹಾಕಲಾಯಿತು. ಅಂದಿನಿಂದ ಅವರ ಮತ್ತು ಬಾಜ್ವಾ ನಡುವಿನ ಸಂಬಂಧಗಳು ಹದಗೆಟ್ಟಿದ್ದವು. ಮಾಜಿ ಸೇನಾ ಮುಖ್ಯಸ್ಥ ತನ್ನನ್ನು ಕೊಲ್ಲಲು ಮತ್ತು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಲು ಬಯಸಿದ್ದರು ಎಂದು ಖಾನ್ ಈ ಹಿಂದೆ ಆರೋಪಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT