ಇಮ್ರಾನ್ ಖಾನ್ 
ವಿದೇಶ

ಇಸ್ಲಾಮಾಬಾದ್‌ನಲ್ಲಿ ಕೋರ್ಟ್ ವಿಚಾರಣೆ ವೇಳೆ ಲಾಹೋರ್ ನಿವಾಸಕ್ಕೆ ನುಗ್ಗಿದ ಪೊಲೀಸರು: ಇಮ್ರಾನ್ ಖಾನ್ ಅಳಲು

ಭ್ರಷ್ಟಾಚಾರ ಪ್ರಕರಣದ ವಿಚಾರಣೆಗೆ ಹಾಜರಾಗಲು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್  ಇಸ್ಲಾಮಾಬಾದ್‌ನಲ್ಲಿ ಇರುವಾಗಲೇ ಲಾಹೋರ್ ನಲ್ಲಿರುವ ಅವರ ನಿವಾಸದ ಮೇಲೆ 10,000ಕ್ಕೂ ಹೆಚ್ಚು ಪೊಲೀಸರು ದಾಳಿ ಮಾಡಿದ್ದು, ಡಜನ್ ಗಟ್ಟಲೇ ಅವರ ಪಕ್ಷದ ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಲಾಹೋರ್: ಭ್ರಷ್ಟಾಚಾರ ಪ್ರಕರಣದ ವಿಚಾರಣೆಗೆ ಹಾಜರಾಗಲು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್  ಇಸ್ಲಾಮಾಬಾದ್‌ನಲ್ಲಿ ಇರುವಾಗಲೇ ಲಾಹೋರ್ ನಲ್ಲಿರುವ ಅವರ ನಿವಾಸದ ಮೇಲೆ 10,000ಕ್ಕೂ ಹೆಚ್ಚು ಪೊಲೀಸರು ದಾಳಿ ಮಾಡಿದ್ದು, ಡಜನ್ ಗಟ್ಟಲೇ ಅವರ ಪಕ್ಷದ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್  ಪಕ್ಷದ ಮುಖ್ಯಸ್ಥರ ನಿವಾಸದ ಪ್ರವೇಶದ್ವಾರದಿಂದ ಬ್ಯಾರಿಕೇಡ್‌ಗಳು ಮತ್ತು ಪಕ್ಷದ ನಾಯಕರು ತಮ್ಮ ನಾಯಕನ ರಕ್ಷಣೆಗಾಗಿ ಮಾಡಲಾಗಿದ್ದ ಎಲ್ಲ ಶಿಬಿರಗಳನ್ನು ಪೊಲೀಸರು ತೆರವುಗೊಳಿಸಿದ್ದಾರೆ. 

ಕಾರ್ಯಾಚರಣೆ ವೇಳೆ ಸುಮಾರು 10 ಕಾರ್ಮಿಕರು ಗಾಯಗೊಂಡಿದ್ದು,  30 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಇಮ್ರಾನ್ ಖಾನ್ ಅವರ ನಿವಾಸಕ್ಕೆ ಆಗಮಿಸಿದ ನಂತರ ಪಿಟಿಐ ಕಾರ್ಯಕರ್ತರನ್ನು ಪೊಲೀಸರು ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಲ್ಲಿ ತನ್ನ ಪತ್ನಿ ಬುಶ್ರಾ ಬೀಬಿ ಕೂಡಾ ಇದ್ದರು ಎಂದು ಇಮ್ರಾನ್ ಖಾನ್ ಹೇಳಿಕೊಂಡಿದ್ದಾರೆ. ಜಮಾನ್ ಪಾರ್ಕ್ ಪ್ರದೇಶವನ್ನು ತೆರವುಗೊಳಿಸಲು ಪೊಲೀಸರು ಕಾರ್ಯಾಚರಣೆ ನಡೆಸಿರುವುದಾಗಿ ಪಂಜಾಬ್ ಹಂಗಾಮಿ ಸರ್ಕಾರದ ಮಾಹಿತಿ ಸಚಿವ ಅಮಿರ್  ಮಿರ್ ಸುದ್ದಿಗಾರರಿಗೆ ತಿಳಿಸಿದ್ದಾರೆ. 

ಜಮಾನ್ ಪಾರ್ಕ್ ಪ್ರದೇಶವನ್ನು ತೆರವುಗೊಳಿಸಲು 10,000 ಪೊಲೀಸರಿಂದ ದಾಳಿ ನಡೆಸಲಾಗಿದೆ. ನಿಷೇಧಿತ ಸಂಘಟನೆಗಳ ಸದಸ್ಯರು ಅಲ್ಲಿದ್ದ ಬಗ್ಗೆ ವರದಿಯಾಗಿದ್ದು, ಹಲವು ಪಿಟಿಐ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಕಾರ್ಯಾಚರಣೆ ವೇಳೆ, ಮೂವರು ಪೊಲೀಸರು, ಆರು ಪಿಟಿಐ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಇಮ್ರಾನ್ ಖಾನ್ ನಿವಾಸಕ್ಕಾಗಿ ಪೊಲೀಸರು ಸರ್ಚ್ ವಾರೆಂಟ್ ಪಡೆದಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.  ನವಾಜ್ ಷರೀಪ್ ಅವರ ಒತ್ತಾಯದಿಂದಾಗಿ ತಮ್ಮನ್ನು ಜೈಲಿಗೆ ಸೇರಿಸಲು ಹಾಲಿ ಸರ್ಕಾರ ಬಯಸಿದೆ ಎಂದು ಖಾನ್ ಸಂದೇಶದಲ್ಲಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ