ರಷ್ಯಾದ ಪಾಪ್ ತಾರೆ ನಿಗೂಢ ಸಾವು 
ವಿದೇಶ

ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಟೀಕಿಸಿ ಹಾಡಿದ್ದ ರಷ್ಯಾದ ಪಾಪ್ ತಾರೆ ನಿಗೂಢ ಸಾವು!

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಟೀಕಿಸಿ ಹಾಡುಗಳ ಬರೆದು ಹಾಡಿದ್ದ 35 ವರ್ಷದ ಪಾಪ್ ತಾರೆ ಡಿಮಾ ನೋವಾ ನಿಗೂಢ ಸಾವಿಗೀಡಾಗಿದ್ದಾರೆ.

ಮಾಸ್ಕೋ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಟೀಕಿಸಿ ಹಾಡುಗಳ ಬರೆದು ಹಾಡಿದ್ದ 35 ವರ್ಷದ ಪಾಪ್ ತಾರೆ ಡಿಮಾ ನೋವಾ ನಿಗೂಢ ಸಾವಿಗೀಡಾಗಿದ್ದಾರೆ.

ರಷ್ಯಾದ ಪಾಪ್ ತಾರೆ ದಿಮಾ ನೋವಾ ಹಠಾತ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದ್ದು, ನ್ಯೂಸ್‌ವೀಕ್ ಪ್ರಕಾರ, ಡಿಮಾ ಪಾಪ್ ಗುಂಪಿನ ಸಂಸ್ಥಾಪಕರಾಗಿದ್ದರು, ಅವರ ಹಾಡುಗಳು ರಷ್ಯಾದಲ್ಲಿ ಯುದ್ಧ-ವಿರೋಧಿ ಪ್ರತಿಭಟನೆಗಳ ಸಮಯದಲ್ಲಿ ಜನಪ್ರಿಯವಾಗಿದ್ದವು. 

ಕ್ರೀಮ್ ಸೋಡಾ ಗುಂಪಿನ ಸಂಸ್ಥಾಪಕರಾದ ಡಿಮಾ ನೋವಾ ತಮ್ಮ ಹಾಡಿನಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ 1.3 ಬಿಲಿಯನ್ ಡಾಲರ್ ಅರಮನೆಯವನ್ನು ಟೀಕಿಸಿದ್ದಾರೆ. ಇದೇ "ಆಕ್ವಾ ಡಿಸ್ಕೋ" ಹಾಡಿನಲ್ಲಿ ಮಾಸ್ಕೋದ ಉಕ್ರೇನ್ ಆಕ್ರಮಣದ ವಿರುದ್ಧ ಪ್ರತಿಭಟಿಸಿ ಆಗಾಗ್ಗೆ ಪ್ರದರ್ಶನ ನೀಡುತ್ತಿದ್ದರು. ಇದಕ್ಕೆ "ಆಕ್ವಾ ಡಿಸ್ಕೋ ಪಾರ್ಟಿ" ಎಂದೇ ಕರೆಯಲಾಗುತ್ತಿತ್ತು. ಮಾಸ್ಕೋದ ಉಕ್ರೇನ್ ಆಕ್ರಮಣದ ವಿರುದ್ಧ ಪ್ರತಿಭಟಿಸಲು ಆಗಾಗ್ಗೆ ಈ ಹಾಡನ್ನು ಹಾಡಲಾಗುತ್ತಿತ್ತು.  

ನೀರಿನಲ್ಲಿ ಮುಳುಗಿ ಸಾವು
ಯಾರೋಸ್ಲಾವ್ಲ್ ಪ್ರದೇಶದಲ್ಲಿ ರಷ್ಯಾದ ವೋಲ್ಗಾ ನದಿಯನ್ನು ದಾಟುವಾಗ ಡಿಮಾ ನೋವಾ ಹಿಮ ನದಿಯಲ್ಲಿ ಬಿದ್ದಿದ್ದಾರೆ ಎಂದು ರಷ್ಯಾದ ಸುದ್ದಿ ವೆಬ್‌ಸೈಟ್ ಪೀಪಲ್‌ಟಾಕ್ ವರದಿ ಮಾಡಿದೆ. ಅಪಘಾತದ ಸಮಯದಲ್ಲಿ ಅವರ ಸಹೋದರ ರೋಮಾ ಮತ್ತು ಇಬ್ಬರು ಸ್ನೇಹಿತರು ಜೊತೆಗಿದ್ದರು ಎಂದು ಹೇಳಲಾಗಿದ್ದು, ಪಾಪ್ ಗ್ರೂಪ್ ಕ್ರೀಮ್ ಸೋಡಾ ಇನ್‌ಸ್ಟಾಗ್ರಾಮ್‌ನಲ್ಲಿ ಡಿಮಾ ನೋವಾ ಅವರ ಮರಣವನ್ನು ಪ್ರಕಟಿಸುವ ಪೋಸ್ಟ್ ಅನ್ನು ಹಂಚಿಕೊಂಡಿದೆ.

"ಕಳೆದ ರಾತ್ರಿ ನಮಗೆ ದುರಂತ ಸಂಭವಿಸಿದೆ. ಸ್ನೇಹಿತರನ್ನು ಭೇಟಿ ಮಾಡುತ್ತಿದ್ದ ನಮ್ಮ ದಿಮಾ ನೋವಾ, ವೋಲ್ಗಾ ನದಿಯನ್ನು ದಾಟುತ್ತಿದ್ದರು ಮತ್ತು ಇದ್ದಕ್ಕಿದ್ದಂತೆ ಮಂಜುಗಡ್ಡೆಯಡಿ ಬಿದ್ದಿದ್ದಾರೆ" ಎಂದು ಗುಂಪು ಪೋಸ್ಟ್‌ನಲ್ಲಿ ಬರೆದಿದೆ. ಅದರಲ್ಲಿ, "ತುರ್ತು ಪರಿಸ್ಥಿತಿಗಳ ಸಚಿವಾಲಯವು ಇನ್ನೂ ಅವನ ಸಹೋದರ ರೋಮಾ ಮತ್ತು ಸ್ನೇಹಿತ ಗೋಶಾ ಕಿಸೆಲೆವ್‌ಗಾಗಿ ಹುಡುಕುತ್ತಿದೆ. ಹಿಮದಲ್ಲಿ ಬಿದ್ದಿದ್ದ ಅವರನ್ನು ಇನ್ನೊಬ್ಬ ಸ್ನೇಹಿತ ಅರಿಸ್ಟಾರ್ಕಸ್ ನೆರವಿನಿಂದ ಹೊರತೆಗೆಯಲಾಯಿತು, ಆದರೆ ಜೀವ ಉಳಿಸಲಾಗಲಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT