ಗುಂಡಿನ ದಾಳಿ ನಡೆದ ಶಾಲೆ ಬಳಿಯಿರುವ ಪೊಲೀಸರ ಚಿತ್ರ 
ವಿದೇಶ

ಬೆಲ್‌ಗ್ರೇಡ್ ಪ್ರಾಥಮಿಕ ಶಾಲೆಯಲ್ಲಿ ಗುಂಡಿಕ್ಕಿ 8 ಮಕ್ಕಳು, ಭದ್ರತಾ ಸಿಬ್ಬಂದಿ ಹತ್ಯೆ, ಹದಿಹರೆಯದ ವಿದ್ಯಾರ್ಥಿ ಬಂಧನ

ಸರ್ಬಿಯಾದ ರಾಜಧಾನಿ ಬೆಲ್‌ಗ್ರೇಡ್‌ನಲ್ಲಿ ಬುಧವಾರ ಶಾಲೆಯೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ 8 ವಿದ್ಯಾರ್ಥಿಗಳು ಮತ್ತು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಆಂತರಿಕ ಸಚಿವಾಲಯ ತಿಳಿಸಿದೆ. ದಾಳಿ  ನಡೆಸಿದ ಶಂಕಿತ ಹದಿಹರೆಯದ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯು ಬಾಲ್ಕನ್ ರಾಷ್ಟ್ರವನ್ನು ಬೆಚ್ಚಿಬೀಳಿಸಿದೆ.

ಬೆಲ್‌ಗ್ರೇಡ್: ಸರ್ಬಿಯಾದ ರಾಜಧಾನಿ ಬೆಲ್‌ಗ್ರೇಡ್‌ನಲ್ಲಿ ಬುಧವಾರ ಶಾಲೆಯೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ 8 ವಿದ್ಯಾರ್ಥಿಗಳು ಮತ್ತು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಆಂತರಿಕ ಸಚಿವಾಲಯ ತಿಳಿಸಿದೆ. ದಾಳಿ  ನಡೆಸಿದ ಶಂಕಿತ ಹದಿಹರೆಯದ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯು ಬಾಲ್ಕನ್ ರಾಷ್ಟ್ರವನ್ನು ಬೆಚ್ಚಿಬೀಳಿಸಿದೆ.

ಬೆಲ್‌ಗ್ರೇಡ್‌ನ ಡೌನ್‌ಟೌನ್ ವ್ರಾಕಾರ್ ಜಿಲ್ಲೆಯ ಪ್ರಾಥಮಿಕ ಶಾಲೆಯಲ್ಲಿ ಬೆಳಿಗ್ಗೆ 8:40ಕ್ಕೆ ಗುಂಡಿನ ದಾಳಿ ಸಂಭವಿಸಿದ್ದು, ಘಟನೆಯಲ್ಲಿ 8 ಮಕ್ಕಳು ಮತ್ತು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಆರು ಮಕ್ಕಳು ಮತ್ತು ಒಬ್ಬ ಶಾಲಾ ಶಿಕ್ಷಕ ಗಾಯಗೊಂಡಿದ್ದಾರೆ ಎಂದು ಆಂತರಿಕ ಸಚಿವಾಲಯ ತಿಳಿಸಿದೆ. ಘಟನೆ ತಿಳಿಯುತ್ತಿದ್ದಂತೆಯೇ ಪೊಲೀಸ್ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ದುರಂತಕ್ಕೆ ಕಾರಣವಾದ ಎಲ್ಲಾ ಸಂಗತಿ ತಿಳಿಯುವ ನಿಟ್ಟಿನಲ್ಲಿ ಕಾರ್ಯೋನ್ಮಖವಾಗಿವೆ.

ಶಾಲೆಯ ಭದ್ರತಾ ಸಿಬ್ಬಂದಿ  ಶೂಟರ್‌ನ ಮುಂದೆ ನಿಲ್ಲುವ ಮೂಲಕ ಹೆಚ್ಚಿನ ಸಾವುಗಳನ್ನು ತಡೆಗಟ್ಟಿರುವ ಸಾಧ್ಯತೆಯಿದೆ ಎಂದು ಗುಂಡಿನ ದಾಳಿ ನಡೆದಿದ್ದ  ಬೆಲ್‌ಗ್ರೇಡ್‌ನ ವ್ರಾಕಾರ್ ಜಿಲ್ಲೆಯ ಅಧ್ಯಕ್ಷ ಮಿಲನ್ ನೆಡೆಲ್ಜ್ಕೋವಿಕ್ ತಿಳಿಸಿದ್ದಾರೆ.ಪೊಲೀಸರು ಕಟ್ಟಡ  ಸುತ್ತುವರಿದಿದ್ದರಿಂದ ಆತಂಕಗೊಂಡ ಪೋಷಕರು ಶಾಲೆಯ ಬಳಿ ತಮ್ಮ ಮಕ್ಕಳಿಗಾಗಿ ಕಾಯುತ್ತಿರುವ ದೃಶ್ಯ ಟಿವಿ ಚಾನೆಲ್ ಗಳಲ್ಲಿ ಕಂಡುಬಂದಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT