ಸಿಡ್ನಿಯ ರೋಸ್‌ಹಿಲ್‌ನಲ್ಲಿರುವ ಶ್ರೀ ಸ್ವಾಮಿನಾರಾಯಣ ಮಂದಿರ 
ವಿದೇಶ

ಮೆಲ್ಬೋರ್ನ್‌ನ ಸ್ವಾಮಿನಾರಾಯಣ ದೇವಸ್ಥಾನ ವಿರೂಪ; ದುಷ್ಕರ್ಮಿಗಳಿಂದ ಭಾರತ ವಿರೋಧಿ ಗೀಚುಬರಹ!

ಈ ತಿಂಗಳಾಂತ್ಯಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ನೀಡುವ ಮುನ್ನ ಆಸ್ಟ್ರೇಲಿಯಾದಲ್ಲಿ ಪ್ರಮುಖ ಹಿಂದೂ ದೇವಾಲಯವನ್ನು ದುಷ್ಕರ್ಮಿಗಳು ವಿರೂಪಗೊಳಿಸಿರುವ ಘಟನೆ ನಡೆದಿದೆ. ಸಿಡ್ನಿಯಲ್ಲಿರುವ ಪ್ರಮುಖ ಹಿಂದೂ ದೇವಾಲಯದ ಗೋಡೆ ಮೇಲೆ ಭಾರತ ವಿರೋಧಿ ಗೀಚುಬರಹದ ಮೂಲಕ ವಿರೂಪಗೊಳಿಸಿದ್ದಾರೆ. 

ಮೆಲ್ಬೋರ್ನ್: ಈ ತಿಂಗಳಾಂತ್ಯಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ನೀಡುವ ಮುನ್ನ ಆಸ್ಟ್ರೇಲಿಯಾದಲ್ಲಿ ಪ್ರಮುಖ ಹಿಂದೂ ದೇವಾಲಯವನ್ನು ದುಷ್ಕರ್ಮಿಗಳು ವಿರೂಪಗೊಳಿಸಿರುವ ಘಟನೆ ನಡೆದಿದೆ. ಸಿಡ್ನಿಯಲ್ಲಿರುವ ಪ್ರಮುಖ ಹಿಂದೂ ದೇವಾಲಯದ ಗೋಡೆ ಮೇಲೆ ಭಾರತ ವಿರೋಧಿ ಗೀಚುಬರಹದ ಮೂಲಕ ವಿರೂಪಗೊಳಿಸಿದ್ದಾರೆ. 

ಸಿಡ್ನಿಯ ರೋಸ್‌ಹಿಲ್‌ನಲ್ಲಿರುವ ಬಿಎಪಿಎಸ್ ಶ್ರೀ ಸ್ವಾಮಿನಾರಾಯಣ ಮಂದಿರದಲ್ಲಿ ಈ ಘಟನೆ ನಡೆದಿದೆ. ದೇವಾಲಯದ ಅಧಿಕಾರಿಗಳು ಗೇಟ್ ಮೇಲೆ ನೇತಾಡುತ್ತಿರುವ ಖಲಿಸ್ತಾನಿ ಧ್ವಜವನ್ನು ಕಂಡು, ನ್ಯೂ ಸೌತ್ ವೇಲ್ಸ್ (NSW) ಪೊಲೀಸರಿಗೆ ವಿಷಯ ತಿಳಿಸಿದ್ದಾರೆ ಎಂದು ಆಸ್ಟ್ರೇಲಿಯಾ ಟುಡೇ ಪತ್ರಿಕೆ ವರದಿ ಮಾಡಿದೆ.

ಸಿಡ್ನಿಯ ರೋಸ್‌ಹಿಲ್‌ನಲ್ಲಿರುವ ಬಿಎಪಿಎಸ್ ಶ್ರೀ ಸ್ವಾಮಿನಾರಾಯಣ ಮಂದಿರದ ಗೋಡೆಗಳ ಮೇಲೆ ಸಮಾಜ ವಿರೋಧಿ ಶಕ್ತಿಗಳಿಂದ ಭಾರತ-ವಿರೋಧಿ ಗೀಚುಬರಹ ಕಂಡು ನಮಗೆ ಬಹಳ ಬೇಸರವಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.

ಘಟನೆಯ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ವರ್ಷದ ಆರಂಭದಲ್ಲಿ ಮೆಲ್ಬೋರ್ನ್‌ನಲ್ಲಿ ಮೂರು ಹಿಂದೂ ದೇವಾಲಯಗಳು ಮತ್ತು ಬ್ರಿಸ್ಬೇನ್‌ನ ಎರಡು ಹಿಂದೂ ದೇವಾಲಯಗಳನ್ನು ಖಾಲಿಸ್ತಾನ್ ಬೆಂಬಲಿಗರು ಧ್ವಂಸಗೊಳಿಸಿದ್ದರು.

ಮೇ 24 ರಂದು ಕ್ವಾಡ್ ಶೃಂಗಸಭೆಗಾಗಿ ಪ್ರಧಾನಿ ಮೋದಿ ಸಿಡ್ನಿಗೆ ಭೇಟಿ ನೀಡಲಿದ್ದಾರೆ. ಮಾರ್ಚ್‌ನಲ್ಲಿ, ಪ್ರಧಾನಿ ಆಂಥೋನಿ ಅಲ್ಬನೀಸ್ ಅವರ ಭಾರತ ಭೇಟಿಯ ಸಂದರ್ಭದಲ್ಲಿ, ಪ್ರಧಾನಿ ಮೋದಿ ಅವರೊಂದಿಗೆ ಹಿಂದೂ ದೇವಾಲಯಗಳ ಮೇಲೆ ಆಗಾಗ್ಗೆ ದಾಳಿಗಳ ವಿಷಯವನ್ನು ಪ್ರಸ್ತಾಪಿಸಿದ್ದರು. 

ಧಾರ್ಮಿಕ ಸ್ಥಳಗಳ ಮೇಲಿನ ದಾಳಿಯನ್ನು ಆಸ್ಟ್ರೇಲಿಯಾ ಸಹಿಸುವುದಿಲ್ಲ ಮತ್ತು ಅಂತಹ ಚಟುವಟಿಕೆಗಳಿಗೆ ಹೊಣೆಯಾದವರು ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಅಲ್ಬನೀಸ್ ಮೋದಿಗೆ ಭರವಸೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT