ಭಾರತೀಯ ಮೂಲದ ಎಂಜಿನಿಯರ್ ಐಶ್ವರ್ಯಾ 
ವಿದೇಶ

ಅಮೆರಿಕಾದಲ್ಲಿ ಶೂಟೌಟ್: ಹೈದ್ರಾಬಾದ್ ಮಹಿಳೆ ಸೇರಿದಂತೆ 9 ಮಂದಿಯ ಹತ್ಯೆ

ಅಮೆರಿಕಾದ ದಲ್ಲಾಸ್ ನಲ್ಲಿ ಶನಿವಾರ ನಡೆದ ಶೂಟೌಟ್ ನಲ್ಲಿ ಹೈದ್ರಾಬಾದ್ ಮೂಲದ ಮಹಿಳೆ ಸೇರಿದಂತೆ 9 ಮಂದಿ ಹತ್ಯೆಯಾಗಿದ್ದಾರೆ. ದಲ್ಲಾಸ್ ನ ಮಾಲ್ ವೊಂದರ ಹೊರಗೆ ಬಂದೂಕು ದಾರಿ ವ್ಯಕ್ತಿಯೊಬ್ಬ ಗುಂಡು ಹಾರಿಸಿದ ನಂತರ ಹತ್ಯೆಗೀಡಾದ ಒಂಬತ್ತು ಜನರ ಪೈಕಿ ಭಾರತೀಯ ಮೂಲದ ಇಂಜಿನಿಯರ್ ಐಶ್ವರ್ಯಾ ತಾಟಿಕೊಂಡ ಕೂಡ ಒಬ್ಬರಾಗಿದ್ದಾರೆ.

ದಲ್ಲಾಸ್: ಅಮೆರಿಕಾದ ದಲ್ಲಾಸ್ ನಲ್ಲಿ ಶನಿವಾರ ನಡೆದ ಶೂಟೌಟ್ ನಲ್ಲಿ ಹೈದ್ರಾಬಾದ್ ಮೂಲದ ಮಹಿಳೆ ಸೇರಿದಂತೆ 9 ಮಂದಿ ಹತ್ಯೆಯಾಗಿದ್ದಾರೆ. ದಲ್ಲಾಸ್ ನ ಮಾಲ್ ವೊಂದರ ಹೊರಗೆ ಬಂದೂಕು ದಾರಿ ವ್ಯಕ್ತಿಯೊಬ್ಬ ಗುಂಡು ಹಾರಿಸಿದ ನಂತರ ಹತ್ಯೆಗೀಡಾದ ಒಂಬತ್ತು ಜನರ ಪೈಕಿ ಭಾರತೀಯ ಮೂಲದ ಇಂಜಿನಿಯರ್ ಐಶ್ವರ್ಯಾ ತಾಟಿಕೊಂಡ ಕೂಡ ಒಬ್ಬರಾಗಿದ್ದಾರೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ.

ಖಾಸಗಿ ಕಂಪನಿಯಲ್ಲಿ ಪ್ರಾಜೆಕ್ಟ್ ಮ್ಯಾನೇಜರ್ ಆಗಿದ್ದ ತಾಟಿಕೊಂಡ ಹೈದರಾಬಾದ್‌ನ ಸರೂರ್‌ನಗರ ನಿವಾಸಿಯಾಗಿದ್ದು, ಭಾರತದಿಂದ ಅಮೆರಿಕಕ್ಕೆ ತೆರಳಿದ್ದರು. 27 ವರ್ಷದ ತಾಟಿಕೊಂಡ ದಲ್ಲಾಸ್ ಹೊರವಲಯ ಅಲ್ಲೆನ್ ಪ್ರೀಮಿಯಂನ ಮಳಿಗೆಯೊಂದರಲ್ಲಿ ಶಾಫಿಂಗ್ ಮಾಡುತ್ತಿದ್ದಾಗ ಬಂದೂಕುದಾರಿ ಗುಂಡಿನ ದಾಳಿ ನಡೆಸಿದ್ದಾನೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. 

ಹಂತಕನನ್ನು ಮಾರಿಸಿಯೊ ಗಾರ್ಸಿಯಾ ಎಂದು ಗುರುತಿಸಲಾಗಿದೆ. ನಂತರ ಪೊಲೀಸ್ ಅಧಿಕಾರಿಯೊಬ್ಬರು ಗುಂಡಿಕ್ಕಿ ಆತನನ್ನು ಕೊಂದಿದ್ದಾರೆ. ತಾಟಿಕೊಂಡ ಟೆಕ್ಸಾಸ್‌ನ ಮೆಕಿನ್ನಿಯಲ್ಲಿ ವಾಸಿಸುತ್ತಿದ್ದರು. ಆಕೆಯ  ಕುಟುಂಬ ಭಾರತದಲ್ಲಿತ್ತು ಎಂದು ವಾಹಿನಿಯೊಂದು ವರದಿ ಮಾಡಿದೆ.  

ದಲ್ಲಾಸ್ ನಲ್ಲಿ ಎರಡು ವರ್ಷಗಳಿಂದ ಕೆಲಸ ಮಾಡುತ್ತಿದ್ದ ತಾಟಿಕೊಂಡ ಮಾಲ್ ವೊಂದರಲ್ಲಿ ಆಕೆ ಶಾಫಿಂಗ್ ಮಾಡುತ್ತಿದ್ದಾಗ ಗುಂಡಿನ ದಾಳಿ ನಡೆದಿದೆ. ಆಕೆಯ ಸ್ನೇಹಿತೆ ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಾಟಿಕೊಂಡ ಮೃತದೇಹವನ್ನು ಭಾರತಕ್ಕೆ ತರಲು ಆಕೆಯ ಕುಟುಂಬ ಯೋಜನೆ ಮಾಡುತ್ತಿದೆ ಎಂದು ಪ್ರತಿನಿಧಿಯೊಬ್ಬರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT