ಬಂಧನಕ್ಕೆ ಮುನ್ನ ಇಮ್ರಾನ್ ಖಾನ್ 
ವಿದೇಶ

'ನನ್ನ ಮೇಲೆ ಯಾವುದೇ ಕೇಸ್ ಇಲ್ಲದಿದ್ದರೂ ಜೈಲಿಗೆ ಹಾಕಲು ಸಂಚು, ಹೋರಾಟಕ್ಕೆ ನಾನು ಸಿದ್ಧ': ಇಮ್ರಾನ್ ಖಾನ್

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಪಾಕಿಸ್ತಾನದ ರೇಂಜರ್‌ಗಳು ಮಂಗಳವಾರ ಇಸ್ಲಾಮಾಬಾದ್ ಹೈಕೋರ್ಟ್‌ನ ಹೊರಗೆ ಬಂಧಿಸಿದ್ದಾರೆ.

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಪಾಕಿಸ್ತಾನದ ರೇಂಜರ್‌ಗಳು ಮಂಗಳವಾರ ಇಸ್ಲಾಮಾಬಾದ್ ಹೈಕೋರ್ಟ್‌ನ ಹೊರಗೆ ಬಂಧಿಸಿದ್ದಾರೆ.

ಅಲ್ ಖಾದಿರ್ ಟ್ರಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾನ್ ಅವರನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (PTI) ಇಮ್ರಾನ್ ಖಾನ್ ಅವರನ್ನು ಬಂಧಿಸುವ ಸಂದರ್ಭದಲ್ಲಿ ಪಾಕಿಸ್ತಾನಿ ರೇಂಜರ್‌ಗಳು ತಳ್ಳಿದರು ಇದರಿಂದ ಅವರು ಗಾಯಗೊಂಡರು ಎಂದು ಹಲವು ವಿಡಿಯೊ ಮತ್ತು ಫೋಟೋಗಳನ್ನು ಪಕ್ಷ ಬಿಡುಗಡೆ ಮಾಡಿದೆ. 

ಇಮ್ರಾನ್ ಖಾನ್ ಅವರ ನಾಟಕೀಯ ಬಂಧನದ ಹಲವಾರು ಫೋಟೋ-ವಿಡಿಯೊಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದೆ. 

ಈ ಮಧ್ಯೆ, ಪಾಕಿಸ್ತಾನದಾದ್ಯಂತ ತಕ್ಷಣ ಪ್ರತಿಭಟನೆಗಳನ್ನು ಪ್ರಾರಂಭಿಸಲು ಪಕ್ಷವು ಜನತೆಗೆ, ಕಾರ್ಯಕರ್ತರಿಗೆ ಕರೆ ನೀಡಿದೆ. ಬಂಧನಕ್ಕೂ ಮುನ್ನ ಇಮ್ರಾನ್ ಖಾನ್ ವೀಡಿಯೊ ಸಂದೇಶದಲ್ಲಿ, ನನ್ನ ಮೇಲೆ ಯಾವುದೇ ಪ್ರಕರಣವಿಲ್ಲ, ಆದರೂ ಅವರು ನನ್ನನ್ನು ಜೈಲಿಗೆ ಹಾಕಲು ಬಯಸುತ್ತಾರೆ, ನಾನು ಹೋರಾಟಕ್ಕೆ ಸಿದ್ದನಿದ್ದೇನೆ ಎಂದು ಹೇಳಿದ್ದಾರೆ. 

ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ನಾಯಕ ಫವಾದ್ ಚೌಧರಿ ಅವರು ಟ್ವಿಟ್ಟರ್‌ನಲ್ಲಿ, ಇಸ್ಲಾಮಾಬಾದ್ ಹೈಕೋರ್ಟ್ ನ್ನು ರೇಂಜರ್‌ಗಳು ಆಕ್ರಮಿಸಿಕೊಂಡಿದ್ದಾರೆ, ವಕೀಲರಿಗೆ ಚಿತ್ರಹಿಂಸೆ ನೀಡುತ್ತಿದ್ದಾರೆ, ಇಮ್ರಾನ್ ಖಾನ್ ಕಾರನ್ನು ಸುತ್ತುವರೆದಿದ್ದಾರೆ ಎಂದು ಆರೋಪಿಸಿದ್ದಾರೆ. ಇಮ್ರಾನ್ ಖಾನ್, ಅವರ ಪರ ವಕೀಲರು ಮತ್ತು ಬೆಂಬಲಿಗರ ಮೇಲೆ ಹಲ್ಲೆ, ದಾಳಿ ನಡೆದಿದೆ ಎಂದು ಪಿಟಿಐ ಆರೋಪಿಸಿದೆ. 

ಪಿಟಿಐ ನಾಯಕಿ ಮುಸರರ್ ಚೀಮಾ ವೀಡಿಯೊ ಸಂದೇಶದಲ್ಲಿ, ಇಮ್ರಾನ್ ಖಾನ್‌ಗೆ ರೇಂಜರ್ ಗಳು ಚಿತ್ರಹಿಂಸೆ ನೀಡುತ್ತಿದ್ದಾರೆ, ನಮ್ಮ ಖಾನ್ ಸಾಹಿಬ್‌ನನ್ನು ಹೊಡೆಯುತ್ತಿದ್ದಾರೆ, ಖಾನ್ ಸಾಹೇಬರಿಗೆ ಏನು ಬೇಕಾದರೂ ಮಾಡಲು ಸಿದ್ಧರಿದ್ದಾರೆ ಎಂದು ಟೀಕಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT