ಮೆಹಮೂದ್ ಖುರೇಷಿ 
ವಿದೇಶ

ಇಮ್ರಾನ್‌ ಖಾನ್‌ ಬೆನ್ನಲ್ಲೇ ಪಾಕ್‌ ವಿದೇಶಾಂಗ ಮಾಜಿ ಸಚಿವ ಖುರೇಷಿ ಬಂಧನ: ವರದಿ

ಪಾಕ್‌ ಮಾಜಿ ಪ್ರಧಾನಮಂತ್ರಿ ಇಮ್ರಾನ್‌ ಖಾನ್‌ ಬಂಧನ ಬೆನ್ನಲ್ಲೇ, ಅವರ ಸಂಪುಟದಲ್ಲಿ ವಿದೇಶಾಂಗ ಸಚಿವರಾಗಿದ್ದ ಶಾ ಮೆಹಮೂದ್‌ ಖುರೇಷಿ ಅವರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಇಸ್ಲಾಮಾಬಾದ್‌: ಪಾಕ್‌ ಮಾಜಿ ಪ್ರಧಾನಮಂತ್ರಿ ಇಮ್ರಾನ್‌ ಖಾನ್‌ ಬಂಧನ ಬೆನ್ನಲ್ಲೇ, ಅವರ ಸಂಪುಟದಲ್ಲಿ ವಿದೇಶಾಂಗ ಸಚಿವರಾಗಿದ್ದ ಶಾ ಮೆಹಮೂದ್‌ ಖುರೇಷಿ ಅವರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಉಪಾಧ್ಯಕ್ಷರೂ ಆಗಿರುವ ಖುರೇಷಿ ಅವರನ್ನು ಇಸ್ಲಾಮಾಬಾದ್‌ ಪೊಲೀಸರು ಗುರುವಾರ ಬಂಧಿಸಿ ಅಜ್ಞಾತ ಸ್ಥಳದಲ್ಲಿ ಇರಿಸಿದ್ದಾರೆಂದು ಹೇಳಲಾಗುತ್ತಿದೆ.

ಪಂಜಾಬ್ ಮತ್ತು ಖೈಬರ್ ಪಖ್ತುಂಖ್ವಾದಲ್ಲಿ ನಡೆದ ಗಲಭೆ ಮತ್ತು ಬೆಂಕಿ ಹಚ್ಚಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಖುರೇಷಿ ಅವರನ್ನು ಇಸ್ಲಾಮಾಬಾದ್‌ನ ಗಿಲ್ಗಿಟ್-ಬಾಲ್ಟಿಸ್ತಾನ್ ಹೌಸ್‌ನಿಂದ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಬಂಧನಕ್ಕೂ ಮುನ್ನ ಪಕ್ಷದ ಕಾರ್ಯಕರಿಗೆ ಕರೆ ನೀಡಿರುವ ಖುರೇಶಿ, ದೇಶದಲ್ಲಿ ನಿಜವಾದ ಸ್ವಾತಂತ್ರ್ಯಕ್ಕಾಗಿ ಹೋರಾಟವನ್ನು ಮುಂದುವರಿಸುವಂತೆ ತಿಳಿಸಿದ್ದಾರೆಂದು ತಿಳಿದುಬಂದಿದೆ.

“ನಾನು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ಪಶ್ಚಾತ್ತಾಪ ಪಡುವ ಅಗತ್ಯವೂ ಇಲ್ಲ” ಎಂಬ ಹೇಳಿದ್ದಾರೆಂದು ವರದಿಗಳು ತಿಳಿಸಿವೆ.

ಇಮ್ರಾನ್ ಖಾನ್ ಅವರ ಬಂಧನದ ನಂತರ ಭುಗಿಲೆದ್ದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಅಪಾರ ಸಾವುನೋವುಗಳಾಗಿದ್ದು, ಈ ಬಗ್ಗೆ ಖುರೇಷಿ ಆಘಾತ ವ್ಯಕ್ತಪಡಿಸಿದ್ದರು.

ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೆಲ ದಿನಗಳ ಹಿಂದಷ್ಟೇ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರನ್ನು ಬಂಧಿಸಲಾಗಿತ್ತು.

ಪಾಕಿಸ್ತಾನ ಭ್ರಷ್ಟಾಚಾರ ವಿರೋಧಿ ನ್ಯಾಯಾಲಯವು ಖಾನ್‌ ಅವರನ್ನು 8 ದಿನಗಳ ಕಾಲ ಎನ್‌ಎಬಿ ವಶಕ್ಕೆ ನೀಡಿ ಆದೇಶಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT