ರೇ ಸ್ಟೀವನ್​ಸನ್ 
ವಿದೇಶ

ಆರ್​ಆರ್​ಆರ್​​ ಚಿತ್ರದ ಖಡಕ್ ವಿಲನ್ ರೇ ಸ್ಟೀವನ್​ಸನ್​ ನಿಧನ: ಆಘಾತಕರ ಸುದ್ದಿ ಎಂದ ರಾಜಮೌಳಿ

ಆಸ್ಕರ್​ ಗೆಲ್ಲುವ ಮೂಲಕ ವಿಶ್ವದಲ್ಲೇ ಖ್ಯಾತಿಗಳಿಸಿದ, ಎಸ್​.ಎಸ್​.ರಾಜಮೌಳಿ ನಿರ್ದೇಶನದ ಆರ್​ಆರ್​ಆರ್​ ಸಿನಿಮಾದಲ್ಲಿ ಬ್ರಿಟಿಷ್​ ಗವರ್ನರ್​ ಸ್ಕಾಟ್ ಬಕ್ಸ್ಟನ್ ಪಾತ್ರವನ್ನು ನಿರ್ವಹಿಸಿದ್ದ ರೇ ಸ್ಟೀವನ್​ಸನ್​ (58) ಮೇ 21ರಂದು ನಿಧನರಾಗಿದ್ದಾರೆ.

ಆಸ್ಕರ್​ ಗೆಲ್ಲುವ ಮೂಲಕ ವಿಶ್ವದಲ್ಲೇ ಖ್ಯಾತಿಗಳಿಸಿದ, ಎಸ್​.ಎಸ್​.ರಾಜಮೌಳಿ ನಿರ್ದೇಶನದ ಆರ್​ಆರ್​ಆರ್​ ಸಿನಿಮಾದಲ್ಲಿ ಬ್ರಿಟಿಷ್​ ಗವರ್ನರ್​ ಸ್ಕಾಟ್ ಬಕ್ಸ್ಟನ್ ಪಾತ್ರವನ್ನು ನಿರ್ವಹಿಸಿದ್ದ ರೇ ಸ್ಟೀವನ್​ಸನ್​ (58) ಮೇ 21ರಂದು ನಿಧನರಾಗಿದ್ದಾರೆ.

ಇವರ ಪೂರ್ತಿ ಹೆಸರು ಜಾರ್ಜ್​ ರೇಮಂಡ್​ ಸ್ಟೀವನ್​ಸನ್ ಎಂದಾಗಿದ್ದು, ಉತ್ತರ ಐರಿಶ್​​ ನಟ. ಮೂಲತಃ ಲಂಡನ್​ನ ಲಿಸ್ಬರ್ನ್​​ನವರಾಗಿದ್ದರು. ರೇ ಸ್ಟೀವನ್​ಸನ್​ ನಿಧನ ಹೊಂದಿದ್ದಾರೆಂಬ ಸುದ್ದಿಯನ್ನು ಆರ್​ಆರ್​ ಆರ್​ ಸಿನಿಮಾದ ಸೋಷಿಯಲ್​ ಮೀಡಿಯಾ ಅಕೌಂಟ್​​ನಲ್ಲಿ ದೃಢಪಡಿಸಲಾಗಿದೆ.

ಮೇ 25, 1964 ರಲ್ಲಿ ಉತ್ತರ ಐರ್ಲೆಂಡ್ ನ ಲಿಸ್ಟ್ ಬರ್ನಲ್ಲಿ ಜನಿಸಿದ್ದ ರೇ ಸ್ಟಿವನ್ ಸನ್ 1990 ರಲ್ಲಿ ದೂರದರ್ಶನ ಮೂಲಕ ಮನರಂಜನ ಕ್ಷೇತ್ರ ಪ್ರವೇಶಿಸಿದ್ದರು. 8ನೇ ವಯಸ್ಸಿಗೆ ಅವರು ಇಂಗ್ಲೆಂಡ್​ಗೆ ಶಿಫ್ಟ್ ಆದರು. ಸಣ್ಣ ವಯಸ್ಸಿನಲ್ಲೇ ರಂಗಭೂಮಿಯಲ್ಲಿ ತೊಡಗಿಕೊಂಡರು.

90ನೇ ದಶಕದಲ್ಲಿ ಅವರು ಟಿವಿ ಹಾಗೂ ಸಿನಿಮಾಗಳಲ್ಲಿ ಕಾಣಿಸಿಕೊಳ್ಳಲು ಶುರು ಮಾಡಿದರು. 1998ರಲ್ಲಿ ರಿಲೀಸ್ ಆದ ‘ದಿ ಥಿಯರಿ ಆಫ್​ ಫ್ಲೈಟ್​’ ಸಿನಿಮಾ ಯಶಸ್ಸು ಕಂಡಿತು. ಈ ಚಿತ್ರದಿಂದ ರೇ ಸ್ಟೀವನ್​ಸನ್ ಅವರ ಯಶಸ್ಸು ಹೆಚ್ಚಿತು. ಅವರ ಪಾತ್ರ ಅನೇಕರಿಗೆ ಇಷ್ಟ ಆಯಿತು. ‘ಪನಿಶರ್​: ವಾರ್ ಜೋನ್​’ ಮೊದಲಾದ ಚಿತ್ರಗಳ ಮೂಲಕ ಅವರು ಗಮನ ಸೆಳೆದಿದ್ದಾರೆ.

ಸಿನಿಮಾ ಚಿತ್ರೀಕರಣದ ವೇಳೆಯಲ್ಲಿ ತೆಗೆಯಲಾದ ಫೋಟೋವೊಂದನ್ನು ಶೇರ್ ಮಾಡಿದ ಆರ್​ಆರ್​ಆರ್​ ನಿರ್ದೇಶಕ ಎಸ್.ಎಸ್.ರಾಜಮೌಳಿ ‘ರೇ ಸ್ಟೀವನ್​ಸನ್​ ಅವರ ಸಾವಿನ ಸುದ್ದಿಯನ್ನು ಅರಗಿಸಿಕೊಳ್ಳಲೇ ಸಾಧ್ಯವಾಗುತ್ತಿಲ್ಲ. ನಿಜಕ್ಕೂ ಶಾಕ್​ ಆಗಿದೆ. ನಮ್ಮ ಚಿತ್ರದ ಚಿತ್ರೀಕರಣಕ್ಕೆ ಬರುವಾಗ ರೇ ಅವರು ಯಾವಾಗಲೂ ದೊಡ್ಡದಾದ ಶಕ್ತಿ ಮತ್ತು ಚೈತನ್ಯವನ್ನು ಹೊತ್ತು ತರುತ್ತಿದ್ದರು. ಅದನ್ನವರು ಎಲ್ಲರಿಗೂ ಹಂಚುತ್ತಿದ್ದರು. ಅವರೊಂದಿಗೆ ಕೆಲಸ ಮಾಡುವುದು ಸಿಕ್ಕಾಪಟೆ ಖುಷಿ ತರುತ್ತಿತ್ತು. ರೇ ಆತ್ಮ ಚಿರಶಾಂತಿಯಲ್ಲಿ ನೆಲೆಸಲಿ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!