ಸಂಗ್ರಹ ಚಿತ್ರ 
ವಿದೇಶ

ಪಾಕಿಸ್ತಾನ ವಾಯುನೆಲೆ ಮೇಲೆಯೇ ಉಗ್ರರ ದಾಳಿ: 9 ಭಯೋತ್ಪಾದಕರ ಹತ್ಯೆ

ಪಾಕಿಸ್ತಾನದ ಪಂಜಾಬ್‌ನ ಮಿಯಾನ್‌ವಾಲಿಯಲ್ಲಿರುವ ವಾಯು ಪಡೆಯ ನೆಲೆ ಮೇಲೆ ಉಗ್ರರು ಶನಿವಾರ ದಾಳಿ ನಡೆಸಿದ್ದಾರೆ.

ಇಸ್ಲಾಮಾಬಾದ್: ಪಾಕಿಸ್ತಾನದ ಪಂಜಾಬ್‌ನ ಮಿಯಾನ್‌ವಾಲಿಯಲ್ಲಿರುವ ವಾಯು ಪಡೆಯ ನೆಲೆ ಮೇಲೆ ಉಗ್ರರು ಶನಿವಾರ ದಾಳಿ ನಡೆಸಿದ್ದಾರೆ.

ಹಲವು ಆತ್ಮಾಹುತಿ ಬಾಂಬ್ ದಾಳಿಕೋರರು ಇಂದು ಬೆಳಿಗ್ಗೆ ವಾಯು ನೆಲೆಗೆ ನುಗ್ಗಿದ್ದಾರೆ. ಇದಕ್ಕೆ ಪ್ರತಿಯಾಗಿ ನಡೆಸಿದ ಗುಂಡಿನ ದಾಳಿಯಲ್ಲಿ 9 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನ ವಾಯು ಪಡೆ (ಪಿಎಎಫ್) ತಿಳಿಸಿದೆ.

ಭಾರಿ ಶಸ್ತ್ರಸಜ್ಜಿತರಾದ 5-6 ಮಂದಿ ಜನರ ಗುಂಪು ಶನಿವಾರ ಮುಂಜಾನೆ ತೀವ್ರ ಸ್ವರೂಪದ ದಾಳಿ ಆರಂಭಿಸಿದೆ. ಇದರಿಂದ ಎರಡೂ ಕಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.

ಈ ಘಟನೆಯನ್ನು ಖಚಿತಪಡಿಸಿರುವ ಪಿಎಎಫ್, ಉಗ್ರರು ವಾಯು ನೆಲೆ ಪ್ರವೇಶಿಸುವುದಕ್ಕೂ ಮುನ್ನವೇ ಅವರ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ ಎಂದು ಹೇಳಿದೆ.

"ನವೆಂಬರ್ 4, 2023ರ ಮುಂಜಾನೆ ಪಾಕಿಸ್ತಾನ ವಾಯು ಪಡೆಯ ಮಿಯಾನ್‌ವಾಲಿ ತರಬೇತಿ ವಾಯು ನೆಲೆಯು ವಿಫಲ ಭಯೋತ್ಪಾದನಾ ದಾಳಿಗೆ ಒಳಗಾಗಿದೆ. ಇದಕ್ಕೆ ಪಡೆಗಳು ಪರಿಣಾಮಕಾರಿಯಾಗಿ ಪ್ರತಿಕ್ರಿಯೆ ನೀಡಿದೆ. ಈ ಪ್ರಯತ್ನವನ್ನು ವಿಫಲಗೊಳಿಸಿದೆ ಮತ್ತು ತಡೆದು, ಸಿಬ್ಬಂದಿ ಹಾಗೂ ಆಸ್ತಿಯ ಸುರಕ್ಷತೆ ಮತ್ತು ಭದ್ರತೆಯನ್ನು ಖಾತರಿಗೊಳಿಸಿವೆ ಎಂದು ತಿಳಿಸಿದೆ.

ಅಸಾಧಾರಣ ಧೈರ್ಯ ಹಾಗೂ ಸಕಾಲಿಕ ಪ್ರತಿಕ್ರಿಯೆ ಪ್ರದರ್ಶಿಸುವ ಮೂಲಕ ಮೂವರು ಉಗ್ರರನ್ನು ವಾಯು ನೆಲೆ ಪ್ರವೇಶಿಸುವುದಕ್ಕೂ ಮುನ್ನವೇ ಹೊಡೆದುರುಳಿಸಲಾಗಿದೆ. ಸೇನಾ ಪಡೆಗಳ ಸಕಾಲಿಕ ಮತ್ತು ಪರಿಣಾಮಕಾರಿ ಪ್ರತಿಕ್ರಿಯೆ ಕಾರಣದಿಂದ ಉಳಿದ ಇದೀಗ 6 ಮಂದಿ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಹೇಳಿದೆ.

ದಾಳಿಯಲ್ಲಿ, ವಾಯು ಪಡೆ ನೆಲೆಯ ಹೊರಗೆ ಇರಿಸಿದ್ದ ಮೂರು ವಿಮಾನಗಳಿಗೆ ಹಾನಿಯಾಗಿದೆ. ಪಾಕಿಸ್ತಾನ ಮೂಲದ ಭಯೋತ್ಪಾದನಾ ಗುಂಪು ತೆಹ್ರೀಕ್ ಇ ಜಿಹಾದ್ ಪಾಕಿಸ್ತಾನ್ (ಟಿಜೆಪಿ) ಈ ದಾಳಿಯ ಹೊಣೆ ಹೊತ್ತುಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel