ಸಂಗ್ರಹ ಚಿತ್ರ 
ವಿದೇಶ

ಗಾಜಾ ಪಟ್ಟಿ ಮೇಲೆ ಅಣ್ವಸ್ತ್ರ ದಾಳಿ? ತಮ್ಮ ಸಂಪುಟ ಸಚಿವನನ್ನು ಅಮಾನತುಗೊಳಿಸಿದ ಬೆಂಜಮಿನ್ ನೆತನ್ಯಾಹು

ಗಾಜಾದ ಮೇಲೆ ಇಸ್ರೇಲ್ ದಾಳಿಯನ್ನು ತೀವ್ರಗೊಳಿಸಿದ್ದು ಇದರ ನಡುವೆ ಗಾಜಾಪಟ್ಟಿ ಮೇಲೆ ಅಣ್ವಸ್ತ್ರ ದಾಳಿ ಹೇಳಿಕೆ ಕೊಟ್ಟಿದ್ದ ಸಚಿವನನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮಾನತುಗೊಳಿಸಿದೆ.

ಜೆರುಸಲೇಂ: ಗಾಜಾದ ಮೇಲೆ ಇಸ್ರೇಲ್ ದಾಳಿಯನ್ನು ತೀವ್ರಗೊಳಿಸಿದ್ದು ಇದರ ನಡುವೆ ಗಾಜಾಪಟ್ಟಿ ಮೇಲೆ ಅಣ್ವಸ್ತ್ರ ದಾಳಿ ಹೇಳಿಕೆ ಕೊಟ್ಟಿದ್ದ ಸಚಿವನನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮಾನತುಗೊಳಿಸಿದೆ.

ಸಂದರ್ಶನವೊಂದರಲ್ಲಿ ಗಾಜಾ ಮೇಲೆ ಪರಮಾಣು ಬಾಂಬ್‌ ದಾಳಿ ಮಾಡುವಂತೆ ಸಲಹೆ ನೀಡಿದ್ದ ಇಸ್ರೇಲಿ ಸಚಿವರನ್ನು ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸಲಾಗಿದೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಕಚೇರಿ ತಿಳಿಸಿದೆ.

ಉಗ್ರಗಾಮಿ ದೃಷ್ಟಿಕೋನದಿಂದ ದೂರವಿರುವ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ಇಸ್ರೇಲ್ ಮತ್ತು ಇಸ್ರೇಲಿ ರಕ್ಷಣಾ ಪಡೆಗಳು (ಐಡಿಎಫ್) ಅಮಾಯಕ ಜನರಿಗೆ ಹಾನಿಯಾಗದಂತೆ ಅಂತಾರಾಷ್ಟ್ರೀಯ ಕಾನೂನಿನ ಅತ್ಯುನ್ನತ ಮಾನದಂಡಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದ್ದಾರೆ.

ಸಚಿವ ಅಮಿಹೈ ಎಲಿಯಾಹು ಅವರ ಹೇಳಿಕೆಗಳು ವಾಸ್ತವವನ್ನು ಆಧರಿಸಿಲ್ಲ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ನಂಬಿದ್ದಾರೆ. ಇಸ್ರೇಲ್ ಮತ್ತು ಐಡಿಎಫ್ ಅಮಾಯಕರಿಗೆ ಹಾನಿಯಾಗದಂತೆ ಅಂತರರಾಷ್ಟ್ರೀಯ ಕಾನೂನಿನ ಅತ್ಯುನ್ನತ ಮಾನದಂಡಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತಿವೆ" ಎಂದು ಪ್ರಧಾನ ಮಂತ್ರಿ ಕಚೇರಿ ಹೇಳಿದೆ. 'ನಮ್ಮ ವಿಜಯದವರೆಗೆ ನಾವು ಅದನ್ನು ಮುಂದುವರಿಸುತ್ತೇವೆ' ಎಂದು ಇಸ್ರೇಲ್ ಪ್ರಧಾನಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಅಕ್ಟೋಬರ್ 7ರ ಹಮಾಸ್ ದಾಳಿಯಲ್ಲಿ 1,400 ಇಸ್ರೇಲಿಗಳು ಹತ್ಯೆಯಾಗಿದ್ದಾರೆ ಎಂದು ಇಸ್ರೇಲಿ ಅಧಿಕಾರಿಗಳು ಹೇಳುತ್ತಾರೆ. ಅದೇ ಸಮಯದಲ್ಲಿ, ಹಮಾಸ್ ನಡೆಸುತ್ತಿರುವ ಆರೋಗ್ಯ ಸಚಿವಾಲಯದ ಪ್ರಕಾರ, ಅಕ್ಟೋಬರ್ 7ರಿಂದ ಗಾಜಾದಲ್ಲಿ ಇಸ್ರೇಲ್ನ ಮಿಲಿಟರಿ ಕಾರ್ಯಾಚರಣೆಯಲ್ಲಿ 9,488 ಜನರು ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT