ಜಸ್ಟಿನ್ ಟ್ರುಡೋ-ಪ್ರಧಾನಿ ಮೋದಿ 
ವಿದೇಶ

ಸಾಕ್ಷಿ ಎಲ್ಲಿ? ನಿಜ್ಜರ್ ಹತ್ಯೆಯ ಆರೋಪದ ಮಾಡಿದ್ದ ಕೆನಡಾ ಸರ್ಕಾರಕ್ಕೆ ಭಾರತೀಯ ಹೈಕಮಿಷನರ್ ಆಗ್ರಹ

ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ಸಂಬಂಧಿಸಿದಂತೆ ಭಾರತ ಮತ್ತು ಕೆನಡಾ ನಡುವೆ ರಾಜತಾಂತ್ರಿಕ ವಿವಾದ ಉಂಟಾಗಿದೆ.

ನವದೆಹಲಿ: ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ಸಂಬಂಧಿಸಿದಂತೆ ಭಾರತ ಮತ್ತು ಕೆನಡಾ ನಡುವೆ ರಾಜತಾಂತ್ರಿಕ ವಿವಾದ ಉಂಟಾಗಿದೆ. ಈ ವಿವಾದ ಇನ್ನೂ ಬಗೆಹರಿದಿಲ್ಲ. ಏತನ್ಮಧ್ಯೆ, ಕೆನಡಾದ ಭಾರತೀಯ ಹೈಕಮಿಷನರ್ ಸಂಜಯ್ ಕುಮಾರ್ ವರ್ಮಾ ಅವರು ಸಿಖ್ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆಯ ಕೆನಡಾದ ಪೊಲೀಸ್ ತನಿಖೆಗೆ ಕೆನಡಾದ ಉನ್ನತ ಮಟ್ಟದ ಅಧಿಕಾರಿಯ ಸಾರ್ವಜನಿಕ ಹೇಳಿಕೆಗಳಿಂದ ಹಾನಿಯಾಗಿದೆ ಎಂದು ಹೇಳಿದ್ದಾರೆ. ಜೂನ್‌ನಲ್ಲಿ ಬ್ರಿಟಿಷ್ ಕೊಲಂಬಿಯಾದಲ್ಲಿ ನಿಜ್ಜರ್‌ನನ್ನು ಹತ್ಯೆ ಮಾಡಲಾಗಿತ್ತು.

ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಕೆನಡಾದ ಪೌರತ್ವ ಪಡೆದಿದ್ದನು. ಸರ್ರೆಯಲ್ಲಿ ನೆಲೆಸಿದ್ದ ಆತ ಭಾರತ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿದ್ದನು. ಜೂನ್‌ನಲ್ಲಿ ನಿಜ್ಜರ್‌ನನ್ನು ಗುರುದ್ವಾರದ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಇದರ ನಂತರ, ಸೆಪ್ಟೆಂಬರ್‌ನಲ್ಲಿ ನಡೆದ ನಿಜ್ಜರ್ ಹತ್ಯೆಯಲ್ಲಿ ಭಾರತವು ಭಾಗಿಯಾಗಿದೆ ಎಂದು ಕೆನಡಾ ಆರೋಪಿಸಿತು. ಭಾರತ ಈ ಆರೋಪಗಳನ್ನು ಕಟುವಾಗಿ ನಿರಾಕರಿಸಿತ್ತು. ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಸಂಸತ್ತಿನಲ್ಲಿ ನಿಂತು ಈ ಆರೋಪಗಳನ್ನು ಮಾಡಿದ್ದು. ಅವರ ಈ ಹೇಳಿಕೆಯಿಂದ ರಾಜತಾಂತ್ರಿಕ ಬಿಕ್ಕಟ್ಟು ಆರಂಭವಾಗಿತ್ತು.

'ಭಾರತವನ್ನು ದೂಷಿಸಲು ಉನ್ನತ ಮಟ್ಟದಿಂದ ಸೂಚನೆ'
ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿಯ ಪ್ರಕಾರ, ಭಾರತೀಯ ಹೈಕಮಿಷನರ್ ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ, 'ನಾನು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಈಗ ತನಿಖೆ ಈಗಾಗಲೇ ಕಳಂಕಿತವಾಗಿದೆ ಎಂದು ಹೇಳಲು ಬಯಸುತ್ತೇನೆ. ನಿಜ್ಜರ್ ಹತ್ಯೆಯಲ್ಲಿ ಭಾರತ ಅಥವಾ ಭಾರತೀಯ ಏಜೆಂಟ್‌ಗಳ ಕೈವಾಡವಿದೆ ಎಂದು ಹೇಳಲು ಉನ್ನತ ಮಟ್ಟದ ಯಾರೋ ಒಬ್ಬರು ಸೂಚನೆಗಳನ್ನು ನೀಡಿದ್ದಾರೆ ಎಂದು ತೋರುತ್ತದೆ. ಆದರೆ, ಅವರು ನೇರವಾಗಿ ಉನ್ನತ ಮಟ್ಟದ ಅಧಿಕಾರಿಯ ಹೆಸರನ್ನು ತೆಗೆದುಕೊಳ್ಳಲಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಈ ಉನ್ನತ ಮಟ್ಟದ ಅಧಿಕಾರಿ ಯಾರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಕೆನಡಾ ಇನ್ನೂ ಪುರಾವೆ ಕೊಟ್ಟಿಲ್ಲ
ನಿಜ್ಜರ್ ಹತ್ಯೆಯಲ್ಲಿ ಕೆನಡಾ ಅಥವಾ ಕೆನಡಾದ ಮಿತ್ರರಾಷ್ಟ್ರಗಳ ಮೂಲಕ ಭಾರತಕ್ಕೆ ಯಾವುದೇ ಖಚಿತವಾದ ಪುರಾವೆಗಳನ್ನು ಇದುವರೆಗೆ ಕೊಟ್ಟಿಲ್ಲ ಎಂದು ಭಾರತೀಯ ರಾಜತಾಂತ್ರಿಕ ಸಂಜಯ್ ಕುಮಾರ್ ವರ್ಮಾ ಹೇಳಿದ್ದಾರೆ. ಅದರ ಆಧಾರದ ಮೇಲೆ ಖಲಿಸ್ತಾನಿ ಭಯೋತ್ಪಾದಕನ ಹತ್ಯೆಯಲ್ಲಿ ಭಾರತೀಯ ಏಜೆಂಟ್‌ಗಳು ಭಾಗಿಯಾಗಿಲ್ಲ ಎಂದು ಹೇಳಬಹುದು. ಉಭಯ ದೇಶಗಳ ನಡುವಿನ ಸಂಬಂಧ ಹದಗೆಟ್ಟಿದ್ದರೂ, ವ್ಯಾಪಾರ ಸಂಬಂಧಗಳನ್ನು ಹೆಚ್ಚಿಸಲು ಮತ್ತು ವ್ಯಾಪಾರ ಒಪ್ಪಂದವನ್ನು ಮಾತುಕತೆ ನಡೆಸಲು ಕೆನಡಾದೊಂದಿಗೆ ಭಾರತವು ಚರ್ಚೆಗೆ ಮರಳಲು ಬಯಸುತ್ತದೆ ಎಂದು ಅವರು ಹೇಳಿದರು.

ಜಸ್ಟಿನ್ ಟ್ರುಡೊ ಮಾಡಿದ ಆರೋಪಗಳೇನು?
ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಸೆಪ್ಟೆಂಬರ್ 18ರಂದು, 'ಕೆನಡಾದ ಭದ್ರತಾ ಏಜೆನ್ಸಿಗಳು ಭಾರತೀಯ ಸರ್ಕಾರಿ ಏಜೆಂಟರು ಮತ್ತು ನಿಜ್ಜರ್ ಸಾವಿನ ನಡುವಿನ ಸಂಬಂಧವನ್ನು ತನಿಖೆ ನಡೆಸುತ್ತಿವೆ' ಎಂದು ಹೇಳಿದರು. ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಏಜೆಂಟ್ ಕೈವಾಡವಿದೆ ಎಂದು ಅವರು ಹೇಳಿದರು. ಅವರ ಹೇಳಿಕೆಯ ನಂತರ, ಭಾರತ ಮತ್ತು ಕೆನಡಾ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಪ್ರಾರಂಭವಾಯಿತು. ಭಾರತದ ಸೂಚನೆಗಳನ್ನು ಅನುಸರಿಸಿ, ಕೆನಡಾವು 41 ಕೆನಡಾದ ರಾಜತಾಂತ್ರಿಕರನ್ನು ನವದೆಹಲಿಯಿಂದ ತಮ್ಮ ದೇಶಕ್ಕೆ ಕರೆಸಿಕೊಂಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT