(ಸಾಂಕೇತಿಕ ಚಿತ್ರ) 
ವಿದೇಶ

ಕೆನಡಾದ ಎಡ್ಮಂಟನ್ ನಲ್ಲಿ ಗುಂಪು ಹಿಂಸಾಚಾರಲ್ಲಿ ಇಬ್ಬರು ಸಿಖ್ಖರ ಹತ್ಯೆ

ಕೆನಡಾದ ಎಡ್ಮಂಟ್ ನಲ್ಲಿ ನಡೆದ ಗುಂಪು ಹಿಂಸಾಚಾರದಲ್ಲಿ ಇಬ್ಬರು ಸಿಖ್ ವ್ಯಕ್ತಿಗಳನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. 

ಒಟ್ಟಾವಾ: ಕೆನಡಾದ ಎಡ್ಮಂಟ್ ನಲ್ಲಿ ನಡೆದ ಗುಂಪು ಹಿಂಸಾಚಾರದಲ್ಲಿ ಇಬ್ಬರು ಸಿಖ್ ವ್ಯಕ್ತಿಗಳನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. 

ಕೆನಡಾದಲ್ಲಿ ನಡೆದ ಈ ಹಿಂಸಾಚಾರವನ್ನು, ಉನ್ನತ ಮಟ್ಟದ ವ್ಯಕ್ತಯನ್ನೊಳಗೊಂಡ ಸಂಘಟಿತ ಅಪರಾಧ ಎಂದು ವಿಶ್ಲೇಷಿಸಲಾಗುತ್ತಿದೆ. ಘಟನೆಯಲ್ಲಿ ಸಿಖ್ ವ್ಯಕ್ತಿ ಹಾಗೂ ಆತನ 11 ವರ್ಷದ ಪುತ್ರ ಸಾವನ್ನಪ್ಪಿದ್ದಾರೆ. 

ಎಡ್ಮಂಟನ್ ನಲ್ಲಿ ನಡೆದ ಘಟನೆಯನ್ನು ಕೆನಡಾದ ಪೊಲೀಸರು ಭಯಾನಕ ಗ್ಯಾಂಗ್ ಹಿಂಸಾಚಾರ ಎಂದು ಪೊಲೀಸರು ಹೇಳಿದ್ದಾರೆ.

ಹರ್‌ಪ್ರೀತ್ ಸಿಂಗ್ ಉಪ್ಪಲ್, 41, ಮತ್ತು ಅವರ ಮಗನನ್ನು ಗುರುವಾರ ಮಧ್ಯಾಹ್ನ ಗ್ಯಾಸ್ ಸ್ಟೇಷನ್‌ನ ಹೊರಗೆ ಗುಂಡಿಕ್ಕಿ ಕೊಲ್ಲಲಾಯಿತು ಎಂದು ಎಡ್ಮಂಟನ್ ಪೊಲೀಸ್ ಮುಖ್ಯಸ್ಥರಾದ ಕಾಲಿನ್ ಡೆರ್ಕ್ಸೆನ್ ಮಾಧ್ಯಮಗಳಿಗೆ ತಿಳಿಸಿದರು.

ಉಪ್ಪಲ್ ಅವರನ್ನು ಶೂಟರ್ ಗಳು ಹಿಂಬಾಲಿಸಲು ಪ್ರಾರಂಭಿಸಿದಾಗ ಕಾರಿನಲ್ಲಿ ಅವರ ಮಕ್ಕಳಿದ್ದ ಬಗ್ಗೆ ಶೂಟರ್ ಗಳಿಗೆ ಖಚಿತ ಮಾಹಿತಿ ಇತ್ತೇ ಎಂಬ ಬಗ್ಗೆ ಎಂದು ಪೊಲೀಸರಿಗೆ ತಿಳಿದಿಲ್ಲ ಎಂದು ಡೆರ್ಕ್ಸೆನ್ ಹೇಳಿದ್ದಾರೆ.

"ಶೂಟರ್ ಅಥವಾ ಶೂಟರ್‌ಗಳು ಮಗ ಅಲ್ಲಿದ್ದಾನೆಂದು ತಿಳಿದ ನಂತರ, ಅವರು ಉದ್ದೇಶಪೂರ್ವಕವಾಗಿ ಅವನನ್ನು ಗುಂಡು ಹಾರಿಸಿ ಕೊಂದಿದ್ದಾರೆ" ಎಂಬುದು ನಮಗೆ ತಿಳಿದಿರುವ ಸಂಗತಿಯಾಗಿದೆ ಎಂದು ಎಡ್ಮಂಟನ್ ಜರ್ನಲ್ ಡೆರ್ಕ್ಸೆನ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಪ್ರಕಟಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT