ಗಾಜಾದ ಅಲ್ -ಶಿಫಾ ಆಸ್ಪತ್ರೆ 
ವಿದೇಶ

ಇಸ್ರೇಲ್-ಹಮಾಸ್ ಯುದ್ಧ: ಗಾಜಾದ ಅಲ್-ಶಿಫಾ ಆಸ್ಪತ್ರೆ' ಕಾರ್ಡಿಯಾಕ್ ವಾರ್ಡ್ ನಾಶ

ಇಸ್ರೇಲ್ ಹಾಗೂ ಹಮಾಸ್ ನಡುವಿನ ಯುದ್ಧ ಮುಂದುವರೆದಿದ್ದು, ಗಾಜಾದ ಅತಿದೊಡ್ಡ ಆಸ್ಪತ್ರೆಯಾದ ಅಲ್-ಶಿಫಾವನ್ನು ಇಸ್ರೇಲ್ ಸೇನೆ ಸುತ್ತುವರೆದಿದ್ದು, ಆಸ್ಪತ್ರೆ ಸಮೀಪದಲ್ಲಿ ಬಾಂಬ್ ಸ್ಫೋಟಗಳು ನಡೆಯುತ್ತಿರುವುದರಿಂದ ಆಸ್ಪತ್ರೆಯ ಕಾರ್ಡಿಯಾಕ್ ವಾರ್ಡ್ ನಾಶವಾಗಿದೆ ಎಂದು ಆಸ್ಪತ್ರೆಯ ನಿರ್ದೇಶಕ ಮೊಹಮ್ಮದ್ ಅಬು ಸಲ್ಮಿಯಾ ಶನಿವಾರ ತಡರಾತ್ರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಗಾಜಾ: ಇಸ್ರೇಲ್ ಹಾಗೂ ಹಮಾಸ್ ನಡುವಿನ ಯುದ್ಧ ಮುಂದುವರೆದಿದ್ದು, ಗಾಜಾದ ಅತಿದೊಡ್ಡ ಆಸ್ಪತ್ರೆಯಾದ ಅಲ್-ಶಿಫಾವನ್ನು ಇಸ್ರೇಲ್ ಸೇನೆ ಸುತ್ತುವರೆದಿದ್ದು, ಆಸ್ಪತ್ರೆ ಸಮೀಪದಲ್ಲಿ ವೈಮಾನಿಕ ದಾಳಿ ಸೇರಿದಂತೆ ಬಾಂಬ್ ಸ್ಫೋಟಗಳು ನಡೆಯು ತ್ತಿರುವುದರಿಂದ ಆಸ್ಪತ್ರೆಯ ಕಾರ್ಡಿಯಾಕ್ ವಾರ್ಡ್ ನಾಶವಾಗಿದೆ ಎಂದು ಆಸ್ಪತ್ರೆಯ ನಿರ್ದೇಶಕ ಮೊಹಮ್ಮದ್ ಅಬು ಸಲ್ಮಿಯಾ ಶನಿವಾರ ತಡರಾತ್ರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆಸ್ಪತ್ರೆಯೊಳಗೆ ಶಸ್ತ್ರ ಚಿಕಿತ್ಸೆಯಾದ 600 ರೋಗಿಗಳು, 37 ರಿಂದ 40 ಶಿಶುಗಳು ಮತ್ತು 17 ಜನರು ತೀವ್ರ ನಿಗಾ ಘಟಕದಲ್ಲಿದ್ದು, ಅವರಿಗೆ ನೀರು, ವಿದ್ಯುತ್, ಆಹಾರ ಅಥವಾ ಇಂಟರ್ ನೆಟ್ ದೊರೆಯದಂತಾಗಿದೆ. ಅಪಾರ ಸಂಖ್ಯೆಯ ಜನರು  ಆಸ್ಪತ್ರೆಯ ಆವರಣದಲ್ಲಿ ಆಶ್ರಯ ಪಡೆಯುತ್ತಿದ್ದಾರೆ ಎಂದು ಶಸ್ತ್ರಚಿಕಿತ್ಸಕ ಮೊಹಮ್ಮದ್ ಒಬೇದ್ ಹೇಳಿದ್ದಾರೆ.

'ಕದನ ವಿರಾಮದೊಂದಿಗೆ ತಕ್ಷಣವೇ ಈ ರಕ್ತಪಾತವನ್ನು ನಿಲ್ಲಿಸದಿದ್ದರೆ ಅಥವಾ ರೋಗಿಗಳ ವೈದ್ಯಕೀಯ ಸ್ಥಳಾಂತರಿಸುವಿಕೆಯನ್ನು ನಿಲ್ಲಿಸದಿದ್ದರೆ, ಈ ಆಸ್ಪತ್ರೆಗಳು ಶವಾಗಾರವಾಗುತ್ತವೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಭಾನುವಾರ ಇಸ್ರೇಲಿ ಪಡೆಗಳು ಮತ್ತು ಹಮಾಸ್ ನಡುವಿನ ಭಾರೀ ಹೋರಾಟದಲ್ಲಿ ಗಾಜಾದ ಆಸ್ಪತ್ರೆಗಳಲ್ಲಿ ಸಾವಿರಾರು ಜನರು ಸಿಕ್ಕಿಬಿದ್ದಿದ್ದಾರೆ. ಕದನ ವಿರಾಮ ಇಲ್ಲದಿದ್ದರೆ ರೋಗಿಗಳಿಗೆ ಸೌಲಭ್ಯ ದೊರೆಯದೆ ಸಾಯುತ್ತಾರೆ ಎಂದು ವೈದ್ಯರು ಮತ್ತು ಸಹಾಯ ಕಾರ್ಯಕರ್ತರು ಎಚ್ಚರಿಸಿದ್ದಾರೆ.

ತಮ್ಮ ಇನ್‌ಕ್ಯುಬೇಟರ್‌ಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡ ನಂತರ ಅಲ್-ಶಿಫಾ ಆಸ್ಪತ್ರೆಯ ನವಜಾತ ಘಟಕದಲ್ಲಿದ್ದ ಎರಡು ಶಿಶುಗಳು ಸಾವನ್ನಪ್ಪಿವೆ ಮತ್ತು ವೆಂಟಿಲೇಟರ್ ಸ್ಥಗಿತಗೊಂಡಾಗ ಒಬ್ಬ ವ್ಯಕ್ತಿ ಕೂಡ ಸಾವನ್ನಪ್ಪಿದ್ದಾನೆ ಎಂದು ಶಸ್ತ್ರಚಿಕಿತ್ಸಕರೊಬ್ಬರು ತಮ್ಮ ಸಾಮಾಜಿಕ ಜಾಲತಾದಣ ಎಕ್ಸ್ ನಲ್ಲಿ   ಪೋಸ್ಟ್ ಮಾಡಿದ ಆಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT