ಹೌತಿ ಬಂಡುಕೋರರಿಂದ ಭಾರತ ಮೂಲದ ಹಡಗಿನ ಅಪಹರಣ 
ವಿದೇಶ

ಹೌತಿ ಬಂಡುಕೋರರಿಂದ ಭಾರತ ಮೂಲದ ಹಡಗಿನ ಅಪಹರಣ: ಇಸ್ರೇಲ್

ಟರ್ಕಿಯಿಂದ ಭಾರತಕ್ಕೆ ಹೊರಟಿದ್ದ (India bound Ship) ಸರಕು ಸಾಗಣೆ ಹಡಗನ್ನು ಯೆಮೆನ್‌ನ ಹೌತಿ ಬಂಡುಕೋರರು (Yemen Houthi Rebels) ಕೆಂಪು ಸಮುದ್ರದಲ್ಲಿ ಅಪಹರಿಸಿದ್ದಾರೆ(Ship Hijack) ಎಂದು ಇಸ್ರೇಲ್ ಹೇಳಿದೆ. 

ನವದೆಹಲಿ: ಟರ್ಕಿಯಿಂದ ಭಾರತಕ್ಕೆ ಹೊರಟಿದ್ದ (India bound Ship) ಸರಕು ಸಾಗಣೆ ಹಡಗನ್ನು ಯೆಮೆನ್‌ನ ಹೌತಿ ಬಂಡುಕೋರರು (Yemen Houthi Rebels) ಕೆಂಪು ಸಮುದ್ರದಲ್ಲಿ ಅಪಹರಿಸಿದ್ದಾರೆ(Ship Hijack) ಎಂದು ಇಸ್ರೇಲ್ ಹೇಳಿದೆ. 

ಹೌದು.. ಟರ್ಕಿಯಿಂದ ಭಾರತಕ್ಕೆ ಹೊರಟಿದ್ದ (India bound Ship) ಸರಕು ಸಾಗಣೆ ಹಡಗನ್ನು ಯೆಮೆನ್‌ನ ಹೌತಿ ಬಂಡುಕೋರರು (Yemen Houthi Rebels) ಕೆಂಪು ಸಮುದ್ರದಲ್ಲಿ ಅಪಹರಿಸಿದ್ದು, ಹಡಗಿನಲ್ಲಿ ವಿವಿಧ ರಾಷ್ಟ್ರಗಳಿಗೆ ಸೇರಿದ ಸುಮಾರು 25 ಸಿಬ್ಬಂದಿ ಇದ್ದಾರೆ. ಇಸ್ರೇಲ್‌ ಹಡಗನ್ನು ಹೈಜಾಕ್ ಮಾಡಿರುವುದಾಗಿ ಹೌತಿಗಳು ಹೇಳಿದ್ದರು. ಆದರೆ ಹೌತಿಗಳ ಹೇಳಿಕೆಯನ್ನು ನಿರಾಕರಿಸಿರುವ ಇಸ್ರೇಲ್ ಸರ್ಕಾರ (Israel Government), ಅಪಹರಣಕ್ಕೊಳಗಾದ ಗ್ಯಾಲಕ್ಸಿ ಲೀಡರ್ (Galaxy Leader) ಹಡಗಿನಲ್ಲಿ ಯಾವುದೇ ಭಾರತೀಯರು(Indians) ಇಲ್ಲ.. ಅಲ್ಲದೆ ಅದು ಇಸ್ರೇಲ್ ನ ಹಡಗಲ್ಲ ಎಂದು ಸ್ಪಷ್ಟಪಡಿಸಿದೆ.

ಅಪಹರಣವನ್ನು ದೃಢೀಕರಿಸಿದ ಇಸ್ರೇಲಿ ರಕ್ಷಣಾ ಪಡೆಗಳು ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ದಕ್ಷಿಣ ಕೆಂಪು ಸಮುದ್ರದಲ್ಲಿ ಯೆಮೆನ್ ಬಳಿ ಹೌತಿಗಳು ಸರಕು ಹಡಗನ್ನು ಅಪಹರಿಸಿದ್ದಾರೆ. ಜಾಗತಿಕ ಪರಿಣಾಮದ ಅತ್ಯಂತ ಗಂಭೀರ ಘಟನೆಯಾಗಿದೆ. ಹಡಗು ಭಾರತಕ್ಕೆ ಟರ್ಕಿಯಿಂದ ಹೊರಟಿತ್ತು. ಹಡಗಿನಲ್ಲಿ ಇಸ್ರೇಲಿಗಳನ್ನು ಒಳಗೊಂಡಂತೆ ವಿವಿಧ ರಾಷ್ಟ್ರಗಳ ನಾಗರಿಕ ಸಿಬ್ಬಂದಿ ಇದ್ದಾರೆ. ಆದರೆ ಈ ಹಡುಗು ಇಸ್ರೇಲ್‌ಗೆ ಸೇರಿದ್ದಲ್ಲ ಎಂದು ಹೇಳಿದೆ.

ಹೌತಿಗಳು ಅಪಹರಿಸಿರುವ ಹಡಗು ಇಸ್ರೇಲ್‌ಗೆ ಸೇರಿದ್ದಲ್ಲ. ಬ್ರಿಟಿಷ್ ಕಂಪನಿಯ ಒಡೆತನದ ಮತ್ತು ಜಪಾನ್ ಸಂಸ್ಥೆಯ ನಿರ್ವಹಣೆ ಮಾಡುತ್ತಿರುವ ಹಡಗನ್ನು ಯೆಮೆನ್ ಹೌತಿ ಬಂಡುಕೋರರು ಇರಾನ್ ಮಾರ್ಗದರ್ಶನದಲ್ಲಿ ಅಪಹರಿಸಿದ್ದಾರೆ. ಇರಾನ್ ಮುಂದೆ ನಿಂತು ಅಂತಾರಾಷ್ಟ್ರೀಯ ಹಡಗು ಅಪರಹರಣಕ್ಕೆ ಸಹಕರಿಸಿರುವುದು ಖಂಡನಾರ್ಹವಾಗಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕಾರ್ಯಾಲಯವು ಟ್ವೀಟ್ ಮಾಡಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT