2008ರ ನವೆಂಬರ್ 26ರ ಭಯೋತ್ಪಾದಕ ದಾಳಿಯ ನಂತರ ಭದ್ರತಾ ಕಾರ್ಯಾಚರಣೆಯ ಸಮಯದಲ್ಲಿ ದಕ್ಷಿಣ ಮುಂಬೈನ ತಾಜ್ ಹೋಟೆಲ್‌ನಿಂದ ಹೊಗೆ ಹೊರಹೊಮ್ಮುತ್ತಿದೆ. 
ವಿದೇಶ

26/11ರ ಮುಂಬೈ ದಾಳಿಗೆ 15 ವರ್ಷ: ಲಷ್ಕರ್-ಎ-ತಯ್ಬಾವನ್ನು 'ಭಯೋತ್ಪಾದಕ ಸಂಘಟನೆ' ಎಂದು ಘೋಷಿಸಿದ ಇಸ್ರೇಲ್

ಇಸ್ರೇಲಿಯನ್ನರು ಸೇರಿದಂತೆ 160ಕ್ಕೂ ಹೆಚ್ಚು ರಾಷ್ಟ್ರಗಳ ಜನರ ಸಾವಿಗೆ ಕಾರಣವಾದ ಮುಂಬೈ ಮೇಲಿನ 26/11ರ ಭಯೋತ್ಪಾದಕ ದಾಳಿಗೆ 15 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಇಸ್ರೇಲ್ ಮಂಗಳವಾರ ಪಾಕಿಸ್ತಾನ ಮೂಲದ ಲಷ್ಕರ್-ಎ-ತಯ್ಬಾವನ್ನು 'ಭಯೋತ್ಪಾದಕ ಸಂಘಟನೆ' ಎಂದು ಘೋಷಿಸಿದೆ.

ಜೆರುಸಲೇಂ/ನವದೆಹಲಿ: ಇಸ್ರೇಲಿಯನ್ನರು ಸೇರಿದಂತೆ 160ಕ್ಕೂ ಹೆಚ್ಚು ರಾಷ್ಟ್ರಗಳ ಜನರ ಸಾವಿಗೆ ಕಾರಣವಾದ ಮುಂಬೈ ಮೇಲಿನ 26/11ರ ಭಯೋತ್ಪಾದಕ ದಾಳಿಗೆ 15 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಇಸ್ರೇಲ್ ಮಂಗಳವಾರ ಪಾಕಿಸ್ತಾನ ಮೂಲದ ಲಷ್ಕರ್-ಎ-ತಯ್ಬಾವನ್ನು 'ಭಯೋತ್ಪಾದಕ ಸಂಘಟನೆ' ಎಂದು ಘೋಷಿಸಿದೆ.

'ಮುಂಬೈ ಭಯೋತ್ಪಾದನಾ ದಾಳಿಯ 15ನೇ ವರ್ಷದ ಸ್ಮರಣಾರ್ಥವಾಗಿ ಇಸ್ರೇಲ್ ದೇಶವು ಲಷ್ಕರ್-ಎ-ತಯ್ಬಾವನ್ನು ಭಯೋತ್ಪಾದಕ ಸಂಘಟನೆಯ ಪಟ್ಟಿಗೆ ಸೇರಿಸಿದೆ' ಎಂದು ಇಸ್ರೇಲ್ ರಾಯಭಾರ ಕಚೇರಿ ದೆಹಲಿಯಲ್ಲಿ ಹೇಳಿಕೆಯಲ್ಲಿ ತಿಳಿಸಿದೆ.

'ಈ ಕ್ರಮದ ಹಿಂದೆ ಭಾರತ ಸರ್ಕಾರದ ಯಾವುದೇ ಪಾತ್ರವಿಲ್ಲ. ಇಸ್ರೇಲ್ ಎಲ್ಲಾ ಅಗತ್ಯ ಕಾರ್ಯವಿಧಾನಗಳನ್ನು ಔಪಚಾರಿಕವಾಗಿ ಪೂರ್ಣಗೊಳಿಸಿದೆ ಮತ್ತು ಲಷ್ಕರ್-ಎ-ತಯ್ಬಾವನ್ನು ಇಸ್ರೇಲಿ ಅಕ್ರಮ ಭಯೋತ್ಪಾದಕ ಸಂಘಟನೆಗಳ ಪಟ್ಟಿಗೆ ಸೇರಿಸಲು ಅಗತ್ಯವಿರುವ ಎಲ್ಲಾ ಪರಿಶೀಲನೆ ಮತ್ತು ನಿಬಂಧನೆಗಳನ್ನು ಪೂರೈಸಿದೆ' ಎಂದು ಹೇಳಿಕೆ ತಿಳಿಸಿದೆ.

2008ರ ನವೆಂಬರ್ 26ರಂದು ಪಾಕಿಸ್ತಾನದಿಂದ ಸಮುದ್ರ ಮಾರ್ಗದಲ್ಲಿ ಪಾಕಿಸ್ತಾನದ 10 ಭಯೋದ್ಪಾದಕರು ದಕ್ಷಿಣ ಮುಂಬೈ ಪ್ರದೇಶಗಳನ್ನು ಪ್ರವೇಶಿಸಿದರು. ಚಾಬಾದ್ ಹೌಸ್ ಮತ್ತು ಯಹೂದಿ ಕೇಂದ್ರ ಸೇರಿದಂತೆ ಹಲವಾರು ಸ್ಥಳಗಳ ಮೇಲೆ ದಾಳಿ ಮಾಡಿದರು. ದಾಳಿಯಲ್ಲಿ 18 ಭದ್ರತಾ ಸಿಬ್ಬಂದಿ ಸೇರಿದಂತೆ 166 ಜನರು ಮೃತಪಟ್ಟಿದ್ದರು. 

ಈ ವೇಳೆ 60 ಗಂಟೆ ಕಾರ್ಯಾಚರಣೆ ನಡೆದಿತ್ತು. ಘಟನೆಯಲ್ಲಿ ಒಂಬತ್ತು ಉಗ್ರರನ್ನು ಹತರಾಗಿದ್ದರು. ದಾಳಿಯಲ್ಲಿ ಜೀವಂತವಾಗಿ ಸಿಕ್ಕಿಬಿದ್ದಿದ್ದ ಉಗ್ರ ಅಜ್ಮಲ್ ಕಸಬ್‌ನನ್ನು 2021ರ ನವೆಂಬರ್ 21ರಂದು ಗಲ್ಲು ಶಿಕ್ಷೆಗೆ ಗುರಿಪಡಿಸಲಾಗಿತ್ತು. 

'ಲಷ್ಕರ್-ಎ-ತಯ್ಬಾ ಮಾರಣಾಂತಿಕ ಮತ್ತು ಖಂಡನೀಯ ಭಯೋತ್ಪಾದಕ ಸಂಘಟನೆಯಾಗಿದ್ದು, ನೂರಾರು ಭಾರತೀಯ ನಾಗರಿಕರ ಹತ್ಯೆಗೆ ಮತ್ತು ಇತರರ ಹತ್ಯೆಗೆ ಕಾರಣವಾಗಿದೆ. 2008ರ ನವೆಂಬರ್ 26ರಂದು ಸಂಘಟನೆ ನಡೆಸಿದ ಹೇಯ ಕೃತ್ಯವು ಶಾಂತಿಯನ್ನು ಬಯಸುವ ಎಲ್ಲಾ ರಾಷ್ಟ್ರಗಳು ಮತ್ತು ಸಮಾಜಗಳಲ್ಲಿ ಇನ್ನೂ ಹಸಿರಾಗಿದೆ' ಎಂದು ಹೇಳಿಕೆ ಸೇರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT